Categories: Andolana originals

ಎಚ್.ಡಿ.ಕೋಟೆ: ಆಡಳಿತ ಭವನದಲ್ಲಿ ಕಸದ ರಾಶಿ

ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದ ಗಬ್ಬುನಾರುತ್ತಿರುವ ಶೌಚಾಲಯ

ಮಂಜು ಕೋಟಿ

ಎಚ್‌.ಡಿ.ಕೋಟೆ: ತಾಲ್ಲೂಕು ಆಡಳಿತ ಭವನದ ಒಂದನೇ ಮಹಡಿಯಲ್ಲಿರುವ ವಿವಿಧ ಇಲಾಖೆಗಳ 12 ಶಾಖೆಗಳ ಕಚೇರಿ ಸಮೀಪದಲ್ಲಿ ಕಸದ ರಾಶಿ ಮತ್ತು ಶೌಚಾಲಯಗಳು ಒಂದು ವಾರದಿಂದ ಗಬ್ಬುನಾರುತ್ತಿದ್ದು, ಅಧಿಕಾರಿಗಳು ಮತ್ತು ನೌಕರರು ಕಂಡು ಕಾಣದಂತೆ ಇದ್ದಾರೆ.

ಪಟ್ಟಣದ ಆಡಳಿತ ಭವನದಲ್ಲಿರುವ ಸರ್ವೆ, ಆಹಾರ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಭೂ ಮಾಪನ ಶಾಖೆಯ ಅಧೀಕ್ಷಕರು, ತಾಂತ್ರಿಕ ವಿಭಾಗ, ಪೋಡಿ ಶಾಖೆ, ಅಭಿಲೇಖಾಲಯ ಮೋಜಣಿ ವಿಭಾಗದ ಬಳಿ ಇರುವ ಪುರುಷರ ಮತ್ತು ಮಹಿಳೆಯರ ಶೌಚಾಲಯದ ಪಕ್ಕದ ಖಾಲಿ ಜಾಗದಲ್ಲಿ ಕಸದ ರಾಶಿಯನ್ನು ಗುಡ್ಡೆ ಹಾಕಿದ್ದಾರೆ. ಅಲ್ಲದೆ ಈ ಶೌಚಾಲಯಗಳಲ್ಲಿ ನೀರು ಇಲ್ಲದೆ ದುರ್ವಾಸನೆ ಬೀರುತ್ತಿದೆ. ಭವನದ ಈ ಮಹಡಿಯಲ್ಲಿ ಕೆಲಸ ನಿರ್ವಹಿಸುವ ಕಚೇರಿಗಳು ಮತ್ತು ಶಾಖೆಗಳಿಗೆ ಪ್ರತಿನಿತ್ಯ ರೈತರು, ಸಾರ್ವಜನಿಕರು ಭೇಟಿ ನೀಡುತ್ತಾರೆ. ಈ ವೇಳೆ ಕಸದ ರಾಶಿ ಹಾಗೂ ಶೌಚಾಲಯದ ಅಶುಚಿತ್ವ ನೋಡಿ ಮುಜುಗರ ಪಡುವಂತಾಗಿದೆ. ಹೀಗಿದ್ದರೂ ಅಧಿಕಾರಿಗಳು ಮತ್ತು ನೌಕರರು ಇತ್ತ ಗಮನಹರಿಸಿ ಸ್ವಚ್ಛತಾ ಕಾರ್ಯ ಮಾಡಿಸಲು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು, ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ, ಸಿಬ್ಬಂದಿ ವರ್ಗದವರು ಈ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ. ಆದ್ದರಿಂದ ಶಾಸಕರು ಇತ್ತ ಗಮನಹರಿಸಿ ಆಡಳಿತ ಭವನದ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿ, ನೌಕರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

“ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಇಲಾಖೆಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿಬೇಕು. ಇದನ್ನು ನಿರ್ಲಕ್ಷಿಸುವವರಿಗೆ ನೋಟಿಸ್‌ ಜಾರಿ ಮಾಡಿ ಕ್ರಮ ಕೈಗೊಳ್ಳುತ್ತೇನೆ”

– ಶ್ರೀನಿವಾಸ್‌, ತಹಸಿಲ್ದಾ‌ರ್‌

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

10 mins ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

19 mins ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

1 hour ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

1 hour ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

2 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

2 hours ago