ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದ ಗಬ್ಬುನಾರುತ್ತಿರುವ ಶೌಚಾಲಯ
ಮಂಜು ಕೋಟಿ
ಎಚ್.ಡಿ.ಕೋಟೆ: ತಾಲ್ಲೂಕು ಆಡಳಿತ ಭವನದ ಒಂದನೇ ಮಹಡಿಯಲ್ಲಿರುವ ವಿವಿಧ ಇಲಾಖೆಗಳ 12 ಶಾಖೆಗಳ ಕಚೇರಿ ಸಮೀಪದಲ್ಲಿ ಕಸದ ರಾಶಿ ಮತ್ತು ಶೌಚಾಲಯಗಳು ಒಂದು ವಾರದಿಂದ ಗಬ್ಬುನಾರುತ್ತಿದ್ದು, ಅಧಿಕಾರಿಗಳು ಮತ್ತು ನೌಕರರು ಕಂಡು ಕಾಣದಂತೆ ಇದ್ದಾರೆ.
ಪಟ್ಟಣದ ಆಡಳಿತ ಭವನದಲ್ಲಿರುವ ಸರ್ವೆ, ಆಹಾರ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಭೂ ಮಾಪನ ಶಾಖೆಯ ಅಧೀಕ್ಷಕರು, ತಾಂತ್ರಿಕ ವಿಭಾಗ, ಪೋಡಿ ಶಾಖೆ, ಅಭಿಲೇಖಾಲಯ ಮೋಜಣಿ ವಿಭಾಗದ ಬಳಿ ಇರುವ ಪುರುಷರ ಮತ್ತು ಮಹಿಳೆಯರ ಶೌಚಾಲಯದ ಪಕ್ಕದ ಖಾಲಿ ಜಾಗದಲ್ಲಿ ಕಸದ ರಾಶಿಯನ್ನು ಗುಡ್ಡೆ ಹಾಕಿದ್ದಾರೆ. ಅಲ್ಲದೆ ಈ ಶೌಚಾಲಯಗಳಲ್ಲಿ ನೀರು ಇಲ್ಲದೆ ದುರ್ವಾಸನೆ ಬೀರುತ್ತಿದೆ. ಭವನದ ಈ ಮಹಡಿಯಲ್ಲಿ ಕೆಲಸ ನಿರ್ವಹಿಸುವ ಕಚೇರಿಗಳು ಮತ್ತು ಶಾಖೆಗಳಿಗೆ ಪ್ರತಿನಿತ್ಯ ರೈತರು, ಸಾರ್ವಜನಿಕರು ಭೇಟಿ ನೀಡುತ್ತಾರೆ. ಈ ವೇಳೆ ಕಸದ ರಾಶಿ ಹಾಗೂ ಶೌಚಾಲಯದ ಅಶುಚಿತ್ವ ನೋಡಿ ಮುಜುಗರ ಪಡುವಂತಾಗಿದೆ. ಹೀಗಿದ್ದರೂ ಅಧಿಕಾರಿಗಳು ಮತ್ತು ನೌಕರರು ಇತ್ತ ಗಮನಹರಿಸಿ ಸ್ವಚ್ಛತಾ ಕಾರ್ಯ ಮಾಡಿಸಲು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು, ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ, ಸಿಬ್ಬಂದಿ ವರ್ಗದವರು ಈ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ. ಆದ್ದರಿಂದ ಶಾಸಕರು ಇತ್ತ ಗಮನಹರಿಸಿ ಆಡಳಿತ ಭವನದ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿ, ನೌಕರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
“ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಇಲಾಖೆಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿಬೇಕು. ಇದನ್ನು ನಿರ್ಲಕ್ಷಿಸುವವರಿಗೆ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳುತ್ತೇನೆ”
– ಶ್ರೀನಿವಾಸ್, ತಹಸಿಲ್ದಾರ್
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…