Andolana originals

ಕೋಟೆ: ಮೂರೂ ಜಲಾಶಯಗಳ ಹೊರ ಹರಿವು ಇಳಿಕೆ

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ

  • ಮಂಜು ಕೋಟೆ

ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹಲವು ವರ್ಷಗಳ ನಂತರ ತಾಲ್ಲೂಕಿನಲ್ಲಿರುವ ಕಬಿನಿ, ತಾರಕ, ನುಗು ಜಲಾಶಯಗಳು ಜುಲೈ ತಿಂಗಳಲ್ಲೇ ಭರ್ತಿಯಾಗಿ ರೈತರು, ಜನರಲ್ಲಿ ಸಂತಸ ಮೂಡಿತ್ತು. ಆದರೆ, ಕೇರಳದ ವಯನಾಡು, ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯ ಆರ್ಭಟದಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದರಿಂದ ಪ್ರವಾಹ ಸ್ಥಿತಿ ಉಂಟಾಗಿ ಜನಸಾಮಾನ್ಯರಲ್ಲಿ ಆತಂಕ ಉಂಟಾಗಿತ್ತು.

ಆದರೆ, ೨ ದಿನಗಳಿಂದ ಮಳೆ ಪ್ರಮಾಣ ಕಡಿಮೆ ಯಾಗಿದ್ದು ಜಲಾಶಯಗಳಿಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಸಹ ಕಡಿಮೆಯಾಗಿದೆ. ಇದರಿಂ ದಾಗಿ ಕಬಿನಿ ಜಲಾಶಯದಿಂದ ಹೊರಬಿಡುತ್ತಿದ್ದ ೭೦ ಸಾವಿರ ಕ್ಯೂಸೆಕ್ಸ್ ನೀರಿನ ಹೊರಹರಿ ವನ್ನು ೪೦ ಸಾವಿರ ಕ್ಯೂಸೆಕ್ಸ್‌ಗೆ ಇಳಿಸಲಾಗಿದೆ. ತಾರಕ ಜಲಾಶಯದಿಂದ ೩ ಸಾವಿರ ಕ್ಯೂಸೆಕ್ಸ್‌ನಿಂದ ೨೦೦ ಕ್ಯೂಸೆಕ್ಸ್‌ಗೆ, ನುಗು ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ಸ್‌ನಿಂದ ೩ ಸಾವಿರ ಕ್ಯೂಸೆಕ್ಸ್‌ಗೆ ಹೊರಹರಿವನ್ನು ತಗ್ಗಿಸಲಾಗಿದೆ.

ಒಂದೇ ತಿಂಗಳಲ್ಲಿ ಮೂರು ಜಲಾಶಯಗಳಿಂದ ೬೫ ಟಿಎಂಸಿ ನೀರನ್ನು ನದಿಯ ಮೂಲಕ ತಮಿಳು ನಾಡಿಗೆ ಹರಿಸಲಾಗಿದೆ. ಮೂರೂ ಜಲಾಶಯಗಳಿಗೆ ಒಟ್ಟು ೮೦ ಟಿಎಂಸಿ ನೀರು ಹರಿದು ಬಂದಿದೆ. ಕಬಿನಿ ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳನ್ನು ತಲುಪಿದ್ದು, ಒಳಹರಿವು ೪೦,೦೦೦ ಕ್ಯೂಸೆಕ್ಸ್‌ನಷ್ಟಿದೆ.

ನುಗು ಜಲಾಶಯದ ಗರಿಷ್ಟ ಮಟ್ಟ ೧೧೦ ಅಡಿಗಳಿದ್ದು, ಸಂಪೂರ್ಣ ಭರ್ತಿಯಾಗಿದೆ. ೫ ಸಾವಿರ ಕ್ಯೂಸೆಕ್ಸ್ ಹರಿದುಬರುತ್ತಿದೆ.

ತಾರಕ ಜಲಾಶಯವೂ ಗರಿಷ್ಟ ಮಟ್ಟ ೧೨೫ ಅಡಿಗಳನ್ನು ತಲುಪಿದ್ದು ೩೦೦ ಕ್ಯೂಸೆಕ್ಸ್ ಒಳಹರಿವು ಬರುತ್ತಿದೆ. ಈ ಎಲ್ಲಾ ಜಲಾಶಯಗಳು ಏಕಕಾಲ ದಲ್ಲೇ ಭರ್ತಿಯಾಗಿದ್ದು, ಜಲಾಶಯಗಳಿಂದ ಕೆರೆ ಕಟ್ಟೆಗಳಿಗೆ, ರೈತರ ಜಮೀನುಗಳಿಗೆ ನೀರು ಹರಿಸಲು ಅಽಕಾರಿಗಳು ಮತ್ತು ಜನಪ್ರತಿನಿಽಗಳು ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕಿದೆ.

ಕ್ಷೇತ್ರದ ಕಬಿನಿ, ತಾರಕ, ನುಗು ಜಲಾಶಯಗಳು ಕಳೆದ ತಿಂಗಳು ಭರ್ತಿಯಾಗಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ತಾರಕ ಮತ್ತು ನುಗು ಜಲಾಶಯಗಳಿಗೆ ಬಾಗಿನ ಅರ್ಪಿಸಲಾ ಗುವುದು. ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ ವೇಳೆ ಕ್ಷೇತ್ರದ ಮತ್ತು ಜಲಾಶಯಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದ್ದಾರೆ
-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

7 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

10 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

11 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

11 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

11 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

11 hours ago