Andolana originals

ಕೋಟೆ: ಮೂರೂ ಜಲಾಶಯಗಳ ಹೊರ ಹರಿವು ಇಳಿಕೆ

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ

  • ಮಂಜು ಕೋಟೆ

ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹಲವು ವರ್ಷಗಳ ನಂತರ ತಾಲ್ಲೂಕಿನಲ್ಲಿರುವ ಕಬಿನಿ, ತಾರಕ, ನುಗು ಜಲಾಶಯಗಳು ಜುಲೈ ತಿಂಗಳಲ್ಲೇ ಭರ್ತಿಯಾಗಿ ರೈತರು, ಜನರಲ್ಲಿ ಸಂತಸ ಮೂಡಿತ್ತು. ಆದರೆ, ಕೇರಳದ ವಯನಾಡು, ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯ ಆರ್ಭಟದಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದರಿಂದ ಪ್ರವಾಹ ಸ್ಥಿತಿ ಉಂಟಾಗಿ ಜನಸಾಮಾನ್ಯರಲ್ಲಿ ಆತಂಕ ಉಂಟಾಗಿತ್ತು.

ಆದರೆ, ೨ ದಿನಗಳಿಂದ ಮಳೆ ಪ್ರಮಾಣ ಕಡಿಮೆ ಯಾಗಿದ್ದು ಜಲಾಶಯಗಳಿಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಸಹ ಕಡಿಮೆಯಾಗಿದೆ. ಇದರಿಂ ದಾಗಿ ಕಬಿನಿ ಜಲಾಶಯದಿಂದ ಹೊರಬಿಡುತ್ತಿದ್ದ ೭೦ ಸಾವಿರ ಕ್ಯೂಸೆಕ್ಸ್ ನೀರಿನ ಹೊರಹರಿ ವನ್ನು ೪೦ ಸಾವಿರ ಕ್ಯೂಸೆಕ್ಸ್‌ಗೆ ಇಳಿಸಲಾಗಿದೆ. ತಾರಕ ಜಲಾಶಯದಿಂದ ೩ ಸಾವಿರ ಕ್ಯೂಸೆಕ್ಸ್‌ನಿಂದ ೨೦೦ ಕ್ಯೂಸೆಕ್ಸ್‌ಗೆ, ನುಗು ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ಸ್‌ನಿಂದ ೩ ಸಾವಿರ ಕ್ಯೂಸೆಕ್ಸ್‌ಗೆ ಹೊರಹರಿವನ್ನು ತಗ್ಗಿಸಲಾಗಿದೆ.

ಒಂದೇ ತಿಂಗಳಲ್ಲಿ ಮೂರು ಜಲಾಶಯಗಳಿಂದ ೬೫ ಟಿಎಂಸಿ ನೀರನ್ನು ನದಿಯ ಮೂಲಕ ತಮಿಳು ನಾಡಿಗೆ ಹರಿಸಲಾಗಿದೆ. ಮೂರೂ ಜಲಾಶಯಗಳಿಗೆ ಒಟ್ಟು ೮೦ ಟಿಎಂಸಿ ನೀರು ಹರಿದು ಬಂದಿದೆ. ಕಬಿನಿ ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳನ್ನು ತಲುಪಿದ್ದು, ಒಳಹರಿವು ೪೦,೦೦೦ ಕ್ಯೂಸೆಕ್ಸ್‌ನಷ್ಟಿದೆ.

ನುಗು ಜಲಾಶಯದ ಗರಿಷ್ಟ ಮಟ್ಟ ೧೧೦ ಅಡಿಗಳಿದ್ದು, ಸಂಪೂರ್ಣ ಭರ್ತಿಯಾಗಿದೆ. ೫ ಸಾವಿರ ಕ್ಯೂಸೆಕ್ಸ್ ಹರಿದುಬರುತ್ತಿದೆ.

ತಾರಕ ಜಲಾಶಯವೂ ಗರಿಷ್ಟ ಮಟ್ಟ ೧೨೫ ಅಡಿಗಳನ್ನು ತಲುಪಿದ್ದು ೩೦೦ ಕ್ಯೂಸೆಕ್ಸ್ ಒಳಹರಿವು ಬರುತ್ತಿದೆ. ಈ ಎಲ್ಲಾ ಜಲಾಶಯಗಳು ಏಕಕಾಲ ದಲ್ಲೇ ಭರ್ತಿಯಾಗಿದ್ದು, ಜಲಾಶಯಗಳಿಂದ ಕೆರೆ ಕಟ್ಟೆಗಳಿಗೆ, ರೈತರ ಜಮೀನುಗಳಿಗೆ ನೀರು ಹರಿಸಲು ಅಽಕಾರಿಗಳು ಮತ್ತು ಜನಪ್ರತಿನಿಽಗಳು ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕಿದೆ.

ಕ್ಷೇತ್ರದ ಕಬಿನಿ, ತಾರಕ, ನುಗು ಜಲಾಶಯಗಳು ಕಳೆದ ತಿಂಗಳು ಭರ್ತಿಯಾಗಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ತಾರಕ ಮತ್ತು ನುಗು ಜಲಾಶಯಗಳಿಗೆ ಬಾಗಿನ ಅರ್ಪಿಸಲಾ ಗುವುದು. ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ ವೇಳೆ ಕ್ಷೇತ್ರದ ಮತ್ತು ಜಲಾಶಯಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದ್ದಾರೆ
-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

2 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

2 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

2 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

2 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 hours ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

2 hours ago