Andolana originals

ಕೋಟೆ: ಮೂರೂ ಜಲಾಶಯಗಳ ಹೊರ ಹರಿವು ಇಳಿಕೆ

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ

  • ಮಂಜು ಕೋಟೆ

ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹಲವು ವರ್ಷಗಳ ನಂತರ ತಾಲ್ಲೂಕಿನಲ್ಲಿರುವ ಕಬಿನಿ, ತಾರಕ, ನುಗು ಜಲಾಶಯಗಳು ಜುಲೈ ತಿಂಗಳಲ್ಲೇ ಭರ್ತಿಯಾಗಿ ರೈತರು, ಜನರಲ್ಲಿ ಸಂತಸ ಮೂಡಿತ್ತು. ಆದರೆ, ಕೇರಳದ ವಯನಾಡು, ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯ ಆರ್ಭಟದಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದರಿಂದ ಪ್ರವಾಹ ಸ್ಥಿತಿ ಉಂಟಾಗಿ ಜನಸಾಮಾನ್ಯರಲ್ಲಿ ಆತಂಕ ಉಂಟಾಗಿತ್ತು.

ಆದರೆ, ೨ ದಿನಗಳಿಂದ ಮಳೆ ಪ್ರಮಾಣ ಕಡಿಮೆ ಯಾಗಿದ್ದು ಜಲಾಶಯಗಳಿಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಸಹ ಕಡಿಮೆಯಾಗಿದೆ. ಇದರಿಂ ದಾಗಿ ಕಬಿನಿ ಜಲಾಶಯದಿಂದ ಹೊರಬಿಡುತ್ತಿದ್ದ ೭೦ ಸಾವಿರ ಕ್ಯೂಸೆಕ್ಸ್ ನೀರಿನ ಹೊರಹರಿ ವನ್ನು ೪೦ ಸಾವಿರ ಕ್ಯೂಸೆಕ್ಸ್‌ಗೆ ಇಳಿಸಲಾಗಿದೆ. ತಾರಕ ಜಲಾಶಯದಿಂದ ೩ ಸಾವಿರ ಕ್ಯೂಸೆಕ್ಸ್‌ನಿಂದ ೨೦೦ ಕ್ಯೂಸೆಕ್ಸ್‌ಗೆ, ನುಗು ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ಸ್‌ನಿಂದ ೩ ಸಾವಿರ ಕ್ಯೂಸೆಕ್ಸ್‌ಗೆ ಹೊರಹರಿವನ್ನು ತಗ್ಗಿಸಲಾಗಿದೆ.

ಒಂದೇ ತಿಂಗಳಲ್ಲಿ ಮೂರು ಜಲಾಶಯಗಳಿಂದ ೬೫ ಟಿಎಂಸಿ ನೀರನ್ನು ನದಿಯ ಮೂಲಕ ತಮಿಳು ನಾಡಿಗೆ ಹರಿಸಲಾಗಿದೆ. ಮೂರೂ ಜಲಾಶಯಗಳಿಗೆ ಒಟ್ಟು ೮೦ ಟಿಎಂಸಿ ನೀರು ಹರಿದು ಬಂದಿದೆ. ಕಬಿನಿ ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳನ್ನು ತಲುಪಿದ್ದು, ಒಳಹರಿವು ೪೦,೦೦೦ ಕ್ಯೂಸೆಕ್ಸ್‌ನಷ್ಟಿದೆ.

ನುಗು ಜಲಾಶಯದ ಗರಿಷ್ಟ ಮಟ್ಟ ೧೧೦ ಅಡಿಗಳಿದ್ದು, ಸಂಪೂರ್ಣ ಭರ್ತಿಯಾಗಿದೆ. ೫ ಸಾವಿರ ಕ್ಯೂಸೆಕ್ಸ್ ಹರಿದುಬರುತ್ತಿದೆ.

ತಾರಕ ಜಲಾಶಯವೂ ಗರಿಷ್ಟ ಮಟ್ಟ ೧೨೫ ಅಡಿಗಳನ್ನು ತಲುಪಿದ್ದು ೩೦೦ ಕ್ಯೂಸೆಕ್ಸ್ ಒಳಹರಿವು ಬರುತ್ತಿದೆ. ಈ ಎಲ್ಲಾ ಜಲಾಶಯಗಳು ಏಕಕಾಲ ದಲ್ಲೇ ಭರ್ತಿಯಾಗಿದ್ದು, ಜಲಾಶಯಗಳಿಂದ ಕೆರೆ ಕಟ್ಟೆಗಳಿಗೆ, ರೈತರ ಜಮೀನುಗಳಿಗೆ ನೀರು ಹರಿಸಲು ಅಽಕಾರಿಗಳು ಮತ್ತು ಜನಪ್ರತಿನಿಽಗಳು ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕಿದೆ.

ಕ್ಷೇತ್ರದ ಕಬಿನಿ, ತಾರಕ, ನುಗು ಜಲಾಶಯಗಳು ಕಳೆದ ತಿಂಗಳು ಭರ್ತಿಯಾಗಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ತಾರಕ ಮತ್ತು ನುಗು ಜಲಾಶಯಗಳಿಗೆ ಬಾಗಿನ ಅರ್ಪಿಸಲಾ ಗುವುದು. ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ ವೇಳೆ ಕ್ಷೇತ್ರದ ಮತ್ತು ಜಲಾಶಯಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದ್ದಾರೆ
-ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago