Andolana originals

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ ಹರ್ಷಗೊಂಡಿರುವ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.

ತಲ್ಲೂಕಿನಲ್ಲಿ ಕಬಿನಿ, ತಾರಕ, ನುಗು, ಹೆಬ್ಬಾಳ ಈ ನಾಲ್ಕು ಜಲಾಶಯಗಳಿದ್ದರೂ ನೀರಾವರಿ ಪ್ರದೇಶಕ್ಕಿಂತ ಮಳೆ ಆಶ್ರಿತ ಪ್ರದೇಶವೇ ಹೆಚ್ಚಾಗಿರುವುದರಿಂದ ರೈತರು ಮಳೆಯನ್ನೇ ಅವಲಂಬಿಸಿದ್ದಾರೆ.

ಈ ಬಾರಿ ಬಿಸಿಲಿನ ತಾಪಮಾನ ಅತಿಯಾಗಿ ಮತ್ತು ಒಂದು ತಿಂಗಳು ತಡವಾಗಿ ಮಳೆ ಪ್ರಾರಂಭ ಗೊಂಡರೂ ಒಂದು ವಾರದಿಂದ ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ೪-೫ ಬಾರಿ ಉತ್ತಮ ಮಳೆ ಯಾಗಿದ್ದು, ರೈತರ ಮುಖದಲ್ಲಿ ಮತ್ತು ಕುಟುಂಬದವರಲ್ಲಿ ಮಂದಹಾಸ ಮೂಡಿದೆ.

ಬಿಸಿಲು, ಮಳೆ ಲೆಕ್ಕಿಸದೆ ರೈತರು ಮತ್ತು ಅವರ ಕುಟುಂಬದವರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಬಿತ್ತನೆ ಕಾರ್ಯ ಪ್ರಾರಂಭ ಮಾಡಿದ್ದಾರೆ. ಕಳೆದ ಸಾಲಿನಂತೆ ಈ ಸಾಲಿನಲ್ಲೂ ಅತಿ ಹೆಚ್ಚು ರೈತರು ಮುಸುಕಿನ ಜೋಳದ ಬೆಳೆಗೆ ಆಸಕ್ತಿ ತೋರಿದ್ದು, ಜಮೀನುಗಳಲ್ಲಿ ಬಿತ್ತನೆ ಕಾರ್ಯ ನಡೆಸುತ್ತಿದ್ದಾರೆ. ಹಿಂದೆ ರೈತರ ಆರ್ಥಿಕ ಬೆಳೆಯಾಗಿದ್ದ ಹತ್ತಿ ಬೆಳೆಯನ್ನು ಬಹುಪಾಲು ರೈತರು ಅನೇಕ ಕಾರಣಗಳಿಂದ ದೂರ ಮಾಡಿದ್ದು, ಪರ್ಯಾಯ ಬೆಳೆಗಳಾದ ಮುಸುಕಿನ ಜೋಳ, ಹೊಗೆಸೊಪ್ಪು, ಅಲಸಂದೆ, ರಾಗಿ, ಇನ್ನಿತರ ಬೆಳೆಗಳ ಬಿತ್ತನೆ ಪ್ರಾರಂಭಿಸಿದ್ದಾರೆ. ೬೦,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆಸಬೇಕಾಗಿದ್ದು, ಈಗಾಗಲೇ ೧೦,೦೦೦ ಹೆಕ್ಟೇರ್ ಪ್ರದೇಶಗಳಲ್ಲಿ ರೈತರು ಬಿತ್ತನೆ ಕಾರ್ಯ ನಡೆಸುತ್ತಿದ್ದಾರೆ. ಇದೇ ರೀತಿ ಮಳೆ ಮುಂದುವರಿದರೆ ಇನ್ನೊಂದು ವಾರದೊಳಗೆ ತಾಲ್ಲೂಕಿನಲ್ಲಿ ಬಹುತೇಕ ಕಡೆ ಬಿತ್ತನೆ ಕಾರ್ಯ ಪೂರ್ಣಗೊಳ್ಳಲಿದೆ.

ಇಲ್ಲಿಯವರೆಗೆ ೧೧೦ ಮಿ. ಮೀ. ವಾಡಿಕೆ ಮಳೆಯಾಗಬೇಕಿದ್ದ ಈ ಪ್ರದೇಶಗಳಲ್ಲಿ ೬೫ ಮಿ. ಮೀ. ಮಳೆ ಮಾತ್ರ ಆಗಿದೆ. ಬಿ. ಮಟಕೆರೆ ಮತ್ತು ಹಂಪಾಪುರ ಭಾಗದಲ್ಲಿ ಉತ್ತಮವಾಗಿ ಮಳೆಯಾಗಿದೆ. ಉಳಿದ ಹೋಬಳಿಗಳಲ್ಲಿ ಬಿತ್ತನೆಗೆ ಅನುಕೂಲವಾಗುವ ರೀತಿಯಲ್ಲಿ ಮಳೆಯಾಗಿದೆ. ಕಳೆದ ಬಾರಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳಿಗೆ ರೋಗ ಕೀಟಬಾಧೆ ತಗುಲಿ ದ್ದರಿಂದ ಮತ್ತು ಬೆಳೆದ ಬೆಳೆಗೂ ಉತ್ತಮ ಬೆಲೆ ಸಿಗದೆ ಕಂಗಾಲಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು.

ಈ ಬಾರಿಯಾದರೂ ಬೆಳೆ ತಮ್ಮ ಕೈಹಿಡಿಯಲಿದೆ ಎಂಬ ಆಶಾಭಾವನೆಯಲ್ಲಿ ರೈತರ ಮತ್ತು ರೈತ ಕುಟುಂಬದವರು ಕೃಷಿ ಚಟುವಟಿಕೆ ಗಳಲ್ಲಿ ಸಡಗರದಿಂದ ತೊಡಗಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago