Andolana originals

ಕೋಟೆ: ಪಟಾಕಿ ಖರೀದಿಗೆ ಆಸಕ್ತಿ ತೋರದ ಜನ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿಗಳ ಖರೀದಿಗೆ ಜನಸಾಮಾನ್ಯರು ಹೆಚ್ಚಿನ ಆಸಕ್ತಿ ತೋರದೆ ಇರುವುದರಿಂದ ಪಟಾಕಿ ವ್ಯಾಪಾರಸ್ಥರು ನಷ್ಟದ ಭೀತಿಯಲ್ಲಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಕ್ಷೇತ್ರದ ಜನರು ಪರಿಸರ, ಆರೋಗ್ಯ ಕಾಳಜಿ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದಾಗಿ ದೀಪಾವಳಿ ಹಬ್ಬದ ಪಟಾಕಿ ಖರೀದಿಗೆ ಆಸಕ್ತಿ ತೋರುತ್ತಿಲ್ಲ.

ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಪಟಾಕಿ ವ್ಯಾಪಾರಸ್ಥರು ಕಳೆದ ಬಾರಿ ೧೫ ಅಂಗಡಿಗಳನ್ನು ತೆರೆದಿದ್ದರು. ಈ ಬಾರಿ ಪೈಪೋಟಿಯ ಮೂಲಕ ೨೯ ಪಟಾಕಿ ಅಂಗಡಿಗಳನ್ನು ತೆರೆದು ವ್ಯಾಪಾರ ನಡೆಸುತ್ತಿದ್ದರೂ ನಿರೀಕ್ಷೆಯಂತೆ ಜನರು ಅಂಗಡಿಗಳತ್ತ ಬರುತ್ತಿಲ್ಲ. ಹಬ್ಬವು ಎರಡು ದಿನ ಮಾತ್ರ ಇರುವುದರಿಂದ ಇದೇ ರೀತಿ ಮುಂದುವರಿದರೆ ಅನೇಕರು ಬಹಳಷ್ಟು ನಷ್ಟ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟಾಕಿಯಿಂದ ಜನರ ಆರೋಗ್ಯದ ಮೇಲಾಗುವ, ಪರಿಸರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಉಂಟಾಗಿರುವುದರಿಂದ ಪಟಾಕಿ ಸಿಡಿಸಲು ಆಸಕ್ತಿ ತೋರಿಸುತ್ತಿಲ್ಲ. ಆದರೆ ಮನೆಯಲ್ಲಿರುವ ಮಕ್ಕಳಿಗೆ ಸಣ್ಣಪುಟ್ಟ ಪಟಾಕಿಗಳನ್ನು ಖರೀದಿಸಲು ಮಾತ್ರ ಅಂಗಡಿಗಳತ್ತ ಧಾವಿಸುತ್ತಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಪಟಾಕಿಗಳ ಬೆಲೆ ಶೇ.೧೫ರಷ್ಟು ಹೆಚ್ಚಳವಾಗಿರುವುದರಿಂದಲೂ ಖರೀದಿ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಮನೆಗಳಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಮಣ್ಣಿನ ಹಣತೆಗಳನ್ನು ಹಚ್ಚಿ ದೀಪಾವಳಿ ಆಚರಿಸಲು ಒಲವು ತೋರುತ್ತಿದ್ದಾರೆ.

” ಸರಗೂರು ಮತ್ತು ಕೋಟೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಈ ಬಾರಿ ಅತಿ ಹೆಚ್ಚು ಪಟಾಕಿ ಅಂಗಡಿಗಳು ತೆರೆದಿವೆ. ಜನಸಾಮಾನ್ಯರಲ್ಲಿ ಪಟಾಕಿ ದುಷ್ಪರಿಣಾಮಗಳ ಅರಿವು ಹೆಚ್ಚಾಗಿರುವುದರಿಂದ ಪಟಾಕಿ ಖರೀದಿಸಲು ಮುಂದಾಗುತ್ತಿಲ್ಲ. ಇದರಿಂದ ನಷ್ಟದ ಭೀತಿಯಲ್ಲಿದ್ದೇವೆ. ಇನ್ನೆರಡು ದಿನಗಳಲ್ಲಿ ಜನರು ಪಟಾಕಿ ಖರೀದಿಸಲು ಮುಗಿಬಿದ್ದರೆ ಮಾತ್ರ ವ್ಯಾಪಾರಸ್ಥರು ಲಾಭ ಕಾಣಬಹುದು.”

-ವಿನಯ್ ಭಜರಂಗಿ, ಪಟಾಕಿ ವ್ಯಾಪಾರಸ್ಥರು, ವರ್ತಕರ ಸಂಘದ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…

9 mins ago

ಜನವರಿ.16ರಂದು ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…

1 hour ago

ಥೈಲ್ಯಾಂಡ್‌ನಲ್ಲಿ ರೈಲಿನ ಮೇಲೆ ಬೃಹತ್‌ ಕ್ರೇನ್‌ ಬಿದ್ದು 22 ಪ್ರಯಾಣಿಕರು ಸಾವು

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…

2 hours ago

ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(‌45)…

3 hours ago

ಮಂಡ್ಯ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಯೋಧ ಸಾವು

ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…

3 hours ago

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…

3 hours ago