Andolana originals

ಕೋಟೆ: ಪಟಾಕಿ ಖರೀದಿಗೆ ಆಸಕ್ತಿ ತೋರದ ಜನ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿಗಳ ಖರೀದಿಗೆ ಜನಸಾಮಾನ್ಯರು ಹೆಚ್ಚಿನ ಆಸಕ್ತಿ ತೋರದೆ ಇರುವುದರಿಂದ ಪಟಾಕಿ ವ್ಯಾಪಾರಸ್ಥರು ನಷ್ಟದ ಭೀತಿಯಲ್ಲಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಕ್ಷೇತ್ರದ ಜನರು ಪರಿಸರ, ಆರೋಗ್ಯ ಕಾಳಜಿ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದಾಗಿ ದೀಪಾವಳಿ ಹಬ್ಬದ ಪಟಾಕಿ ಖರೀದಿಗೆ ಆಸಕ್ತಿ ತೋರುತ್ತಿಲ್ಲ.

ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಪಟಾಕಿ ವ್ಯಾಪಾರಸ್ಥರು ಕಳೆದ ಬಾರಿ ೧೫ ಅಂಗಡಿಗಳನ್ನು ತೆರೆದಿದ್ದರು. ಈ ಬಾರಿ ಪೈಪೋಟಿಯ ಮೂಲಕ ೨೯ ಪಟಾಕಿ ಅಂಗಡಿಗಳನ್ನು ತೆರೆದು ವ್ಯಾಪಾರ ನಡೆಸುತ್ತಿದ್ದರೂ ನಿರೀಕ್ಷೆಯಂತೆ ಜನರು ಅಂಗಡಿಗಳತ್ತ ಬರುತ್ತಿಲ್ಲ. ಹಬ್ಬವು ಎರಡು ದಿನ ಮಾತ್ರ ಇರುವುದರಿಂದ ಇದೇ ರೀತಿ ಮುಂದುವರಿದರೆ ಅನೇಕರು ಬಹಳಷ್ಟು ನಷ್ಟ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟಾಕಿಯಿಂದ ಜನರ ಆರೋಗ್ಯದ ಮೇಲಾಗುವ, ಪರಿಸರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಉಂಟಾಗಿರುವುದರಿಂದ ಪಟಾಕಿ ಸಿಡಿಸಲು ಆಸಕ್ತಿ ತೋರಿಸುತ್ತಿಲ್ಲ. ಆದರೆ ಮನೆಯಲ್ಲಿರುವ ಮಕ್ಕಳಿಗೆ ಸಣ್ಣಪುಟ್ಟ ಪಟಾಕಿಗಳನ್ನು ಖರೀದಿಸಲು ಮಾತ್ರ ಅಂಗಡಿಗಳತ್ತ ಧಾವಿಸುತ್ತಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಪಟಾಕಿಗಳ ಬೆಲೆ ಶೇ.೧೫ರಷ್ಟು ಹೆಚ್ಚಳವಾಗಿರುವುದರಿಂದಲೂ ಖರೀದಿ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಮನೆಗಳಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಮಣ್ಣಿನ ಹಣತೆಗಳನ್ನು ಹಚ್ಚಿ ದೀಪಾವಳಿ ಆಚರಿಸಲು ಒಲವು ತೋರುತ್ತಿದ್ದಾರೆ.

” ಸರಗೂರು ಮತ್ತು ಕೋಟೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಈ ಬಾರಿ ಅತಿ ಹೆಚ್ಚು ಪಟಾಕಿ ಅಂಗಡಿಗಳು ತೆರೆದಿವೆ. ಜನಸಾಮಾನ್ಯರಲ್ಲಿ ಪಟಾಕಿ ದುಷ್ಪರಿಣಾಮಗಳ ಅರಿವು ಹೆಚ್ಚಾಗಿರುವುದರಿಂದ ಪಟಾಕಿ ಖರೀದಿಸಲು ಮುಂದಾಗುತ್ತಿಲ್ಲ. ಇದರಿಂದ ನಷ್ಟದ ಭೀತಿಯಲ್ಲಿದ್ದೇವೆ. ಇನ್ನೆರಡು ದಿನಗಳಲ್ಲಿ ಜನರು ಪಟಾಕಿ ಖರೀದಿಸಲು ಮುಗಿಬಿದ್ದರೆ ಮಾತ್ರ ವ್ಯಾಪಾರಸ್ಥರು ಲಾಭ ಕಾಣಬಹುದು.”

-ವಿನಯ್ ಭಜರಂಗಿ, ಪಟಾಕಿ ವ್ಯಾಪಾರಸ್ಥರು, ವರ್ತಕರ ಸಂಘದ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

59 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

1 hour ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

1 hour ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

4 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

4 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

4 hours ago