Andolana originals

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ 

ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ, ಸರ್ಕಾರಿ ನೌಕರರಿಗೆ ಕಡಿಮೆ ದರದಲ್ಲಿ ಪ್ರತಿನಿತ್ಯ ತಿಂಡಿ, ಊಟ ದೊರೆಯುತ್ತಿದ್ದ ಇಲ್ಲಿನ ಪೊಲೀಸ್ ಕ್ಯಾಂಟೀನ್ ಬಂದ್ ಆಗಿದೆ.

ಹಿಂದುಳಿದ ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಪಟ್ಟಣದ ಪೊಲೀಸ್ ಠಾಣೆ ಸಮೀಪ ಈ ಭಾಗದ ಎಲ್ಲಾ ವರ್ಗದ ಜನರಿಗೆ ಬಡವರಿಗೆ ಉಪಯೋಗವಾಗಲೆಂದು ೯ ವರ್ಷಗಳ ಹಿಂದೆ ಮೈಸೂರಿನ ಎಸ್‌ಪಿ ಆಗಿದ್ದ ರವಿ ಚನ್ನಣ್ಣನವರ್ಅವರು ಕೋಟೆ ಪಟ್ಟಣ ಸೇರಿದಂತೆ ಜಿಲ್ಲೆಯ ಪ್ರತಿ ಪೊಲೀಸ್ ಠಾಣೆ ಸಮೀಪದಲ್ಲಿ ಪೊಲೀಸ್ ಕ್ಯಾಂಟೀನ್ ಪ್ರಾರಂಭಿಸಿದ್ದರು.

ಪಟ್ಟಣದ ಪೊಲೀಸ್ ಠಾಣೆ ಬಳಿ ಪೊಲೀಸ್ ಕ್ಯಾಂಟೀನ್ ತೆರೆದು ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗದೇ ಇದ್ದುದರಿಂದ ಏಳು ವರ್ಷಗಳ ಹಿಂದೆ ಸ್ಥಗಿತಗೊಂಡಿತ್ತು. ನಂತರ ಪಟ್ಟಣದ ನಿವಾಸಿ ಉಡುಪಿಯ ಅರುಣ್ ರವರು ಪೊಲೀಸ್ ಕ್ಯಾಂಟೀನ್ ಅನ್ನು ಪ್ರಾರಂಭಿಸಿ ೨೦ ರೂ.ಗೆ ತಿಂಡಿ, ೩೦ ರೂ.ಗೆ ರುಚಿಕರವಾದ ಊಟವನ್ನು ನೀಡುತ್ತಿದ್ದರು. ಪ್ರತಿನಿತ್ಯ ೪೦೦ಕ್ಕೂ  ಹೆಚ್ಚು ವಿದ್ಯಾರ್ಥಿ ಗಳು ಕೂಲಿ ಕಾರ್ಮಿಕರು, ಬಡವರು, ಪೊಲೀಸ್ ಠಾಣೆಗೆ ದೂರು ನೀಡಲು ಬರುತ್ತಿದ್ದವರು, ನೌಕರ ವರ್ಗದವರು ಇಲ್ಲಿ ತಿಂಡಿ ಮತ್ತು ಊಟ ಮಾಡುತ್ತಿದ್ದರು. ತಾಲ್ಲೂಕಿನಿಂದ ಪಟ್ಟಣಕ್ಕೆ ಕೆಲಸ ಕಾರ್ಯಗಳಿಗೆ, ಶಾಲಾ ಕಾಲೇಜಿಗೆ ಆಗಮಿಸುತ್ತಿದ್ದವರು ಕೂಡ ಕಡಿಮೆ ದರದಲ್ಲಿ ಆಹಾರ ಸೇವಿಸಲು ಇಲ್ಲಿಗೆ ಭೇಟಿ ನೀಡುತ್ತಿದ್ದರು.

ಆದರೆ, ಪೊಲೀಸ್ ಇಲಾಖೆಯ ಮೇಲಧಿಕಾರಿಗಳ ಸೂಚನೆಯಿಂದ ಕೋಟೆ ಪಟ್ಟಣ ಸೇರಿದಂತೆ ಜಿಲ್ಲೆಯ ಐದು ಭಾಗಗಳಲ್ಲಿನ ಪೊಲೀಸ್ ಕ್ಯಾಂಟೀನ್‌ಗಳು ಬಂದ್ ಆಗಿವೆ. ಇದರಿಂದಾಗಿ ಕಡಿಮೆ ದರದಲ್ಲಿ ಊಟ, ತಿಂಡಿ ಸೇವಿಸಲು ಆಗಮಿಸಿದ ಪ್ರತಿಯೊಬ್ಬರೂ ನಿರಾಶರಾಗಿ ಹೆಚ್ಚು ಹಣ ತೆತ್ತು ಹೋಟೆಲ್‌ಗಳಲ್ಲಿ ಊಟ, ತಿಂಡಿ ಸೇವಿಸುವಂತಾಗಿದೆ. ಕೆಲವರು ಹಸಿವಿನಲ್ಲೇ ತಮ್ಮ ಮನೆಗಳಿಗೆ ತೆರಳುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳು ಮತ್ತು ತಾಲ್ಲೂಕಿನ ಶಾಸಕರು ಬಡವರಿಗೆ ಉಪಯುಕ್ತ ವಾಗಿರುವ ಇಂತಹ ಕ್ಯಾಂಟೀನ್‌ಗಳನ್ನು ಪುನರಾರಂಭಿಸಿ ಬಡವರ ಹಸಿವು ನೀಗಿಸಲು ಮುಂದಾಗಬೇಕಿದೆ.

” ಜಿಲ್ಲೆಯ ಕೆಲವು ಪೊಲೀಸ್ ಕ್ಯಾಂಟೀನ್‌ಗಳು ದೂರುದಾರರು, ಪೊಲೀಸರು, ಮಧ್ಯವರ್ತಿಗಳ ಅಡ್ಡಾಗಳಾಗಿ ಕೆಲಸ ನಿರ್ವಹಿಸುತ್ತಿದ್ದವು. ಇದರಿಂದಾಗಿ ಮೇಲಧಿಕಾರಿಗಳ ಸೂಚನೆಯಂತೆ ಯಾವ ಪೊಲೀಸ್ ಕ್ಯಾಂಟೀನ್‌ಗಳು ಕೂಡ ಕಾರ್ಯನಿರ್ವಹಿಸಬಾರದೆಂದು ಸೂಚಿಸಲಾಗಿದೆ.”

-ನಾಗೇಶ್, ಎಎಸ್‌ಪಿ

” ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸ್ ಕ್ಯಾಂಟೀನ್ ನಡೆಸುತ್ತಿರುವ ಎಲ್ಲರಿಗೂ ಸೋಮವಾರದಿಂದ ಕ್ಯಾಂಟೀನ್ ನಡೆಸಬಾರದೆಂದು ಪೊಲೀಸ್ ಅದಿಕಾರಿ ಸೂಚಿಸಿದ್ದರಿಂದ ಬಂದ್ ಮಾಡಲಾಗಿದೆ. ಸೋಮವಾರ ಬೆಳಿಗ್ಗೆಯಿಂದ ಸಂಜೆವರೆಗೂ ತಿಂಡಿ ಮತ್ತು ಊಟಕ್ಕಾಗಿ ಬಂದ ನೂರಾರು ಬಡವರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ವಾಪಸ್ ಹೋಗಿದ್ದಾರೆ.”

-ಉಡುಪಿ ಅರುಣ್, ಕ್ಯಾಂಟೀನ್ ನಿರ್ವಾಹಕ

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

11 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

12 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago