Andolana originals

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ

ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಕಿಕ್ಕೇರಿ: ಹೋಬಳಿಯ ಲಿಂಗಾಪುರ ಗ್ರಾಮದ ಹರಿಹರಪುರ-ಕೃಷ್ಣಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಹಲವು ತಿಂಗಳ ಹಿಂದೆ ಆರಂಭಿಸಿದ ಗುತ್ತಿಗೆದಾರರು ಜಲ್ಲಿಕಲ್ಲು ಹಾಕಿದ ನಂತರ ಕಾಮಗಾರಿಯನ್ನು ಅರ್ಧಕ್ಕೆ ಕೈಬಿಟ್ಟಿರುವುದರಿಂದ ವಾಹನ ಸವಾರರು ಓಡಾಡಲು ಹರಸಾಹಸ ಪಡುವಂತಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

ಪ್ರತಿನಿತ್ಯ ನೂರಾರು ವಾಹನಗಳು, ಶಾಲಾ ಮಕ್ಕಳು, ರೈತರು ಹಾಗೂ ಗ್ರಾಮಸ್ಥರು ಸಂಚರಿಸುವ ಈ ರಸ್ತೆಯಲ್ಲಿ ಎಲ್ಲೆಂದರಲ್ಲಿ ಹರಡಿರುವ ಜಲ್ಲಿಕಲ್ಲುಗಳು ಅಪಘಾತಗಳಿಗೆ ಆಹ್ವಾನ ನೀಡುತ್ತಿವೆ. ಬೈಕ್ ಸವಾರರು ಪ್ರತಿ ದಿನ ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.

ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಯಾರಾದರೂ ಬಿದ್ದು ಪ್ರಾಣ ಕಳೆದುಕೊಂಡ ನಂತರವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇನ್ನು ರಸ್ತೆ ಬದಿಯ ನಿವಾಸಿಗಳ ಪರಿಸ್ಥಿತಿ ಹೇಳತೀರದು. ವಾಹನಗಳು ಸಂಚರಿಸಿದಾಗ ಆವರಿಸುವ ದೂಳು ಮನೆಯೊಳಗೆ ನುಗ್ಗುತ್ತಿದ್ದು, ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಉಸಿರಾಟದ ತೊಂದರೆ ಅನುಭವಿಸುವಂತಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಆರಂಭವಾದ ಕಾಮಗಾರಿ ಇದೀಗ ಜನರಿಗೆ ಶಾಪವಾಗಿ ಪರಿಣಮಿಸಿದೆ. ಕಾಮಗಾರಿ ಆರಂಭಿಸಿ ಅರ್ಧಕ್ಕೆ ಬಿಟ್ಟು ಜನರ ಜೀವದೊಂದಿಗೆ ಆಟವಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಇನ್ನಷ್ಟು ವಿಳಂಬ ಮಾಡದೆ ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಕಷ್ಟಕ್ಕೆ ಅಂತ್ಯ ಹಾಡಬೇಕು. ತಪ್ಪಿದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

” ರಸ್ತೆ ಕಾಮಗಾರಿ ಮಾಡುವ ಮೊದಲು ಡ್ರೈನೇಜ್‌ನ್ನು ನಿರ್ಮಿಸಬೇಕು. ಡ್ರೈನೇಜ್ ಇಲ್ಲದೆ ರಸ್ತೆ ಎತ್ತರವಾಗಿರುವುದರಿಂದ ಮಳೆನೀರು ಸರಾಗವಾಗಿ ಹರಿದು ಹೋಗದೆ ಮನೆಗಳ ಒಳಗೆ ನುಗ್ಗುವ ಪರಿಸ್ಥಿತಿ ಉಂಟಾಗಿದೆ. ರಸ್ತೆ ಬದಿಯಲ್ಲೇ ಡೇರಿ ಹಾಗೂ ಶಾಲೆ ಇದ್ದು, ಮಳೆ ಬಂದಾಗ ಮಕ್ಕಳು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೂಡಲೇ ಡ್ರೈನೇಜ್ ಕಾಮಗಾರಿ ಪೂರ್ಣಗೊಳಿಸಿ ನಂತರ ರಸ್ತೆ ಕಾಮಗಾರಿ ಕೈಗೊಳ್ಳಬೇಕು.”

-ಪ್ರಫುಲ್ ಕುಮಾರ್, ಗ್ರಾಮಸ್ಥರು

” ಚರಂಡಿ ಕಾಮಗಾರಿ ಪೂರ್ಣಗೊಳಿಸದೆ ರಸ್ತೆ ನಿರ್ಮಾಣ ಮಾಡಬಾರದು. ಮೊದಲು ಚರಂಡಿ ವ್ಯವಸ್ಥೆ ಮಾಡಿ ನಂತರ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ, ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆಯಲ್ಲಿ ಎದ್ದೇಳುವ ದೂಳು ಮನೆಗಳಿಗೆ ನುಗ್ಗಿ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.”

-ಗಿರೀಶ್, ಗ್ರಾಪಂ ಮಾಜಿ ಅಧ್ಯಕ್ಷ 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago