ಪಿಲ್ಲರ್ ಕುಸಿತ ಪ್ರಕರಣ; ‘ಆಂದೋಲನ’ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು
ಹನೂರು: ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಖಾಲಿ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದೆ.
ಹನೂರು ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ಒಂದನೇ ಕೇಂದ್ರವನ್ನು ಈ ಹಿಂದೆ ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದ ಆವರಣದಲ್ಲಿದ್ದ ಹಳೇ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆರಂಭಿಸಲಾಗಿತ್ತು ಆದರೆ, ಈ ಕಟ್ಟಡವನ್ನು ತಾಲ್ಲೂಕು ಅಭಿಲೇಖಾಲಯ ಕಚೇರಿಗೆ ಹಸ್ತಾಂತರ ಮಾಡಿದ್ದ ಹಿನ್ನೆಲೆಯಲ್ಲಿ ಬಳಕೆಗೆ ಯೋಗ್ಯವಿಲ್ಲದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿತ್ತು.
ನಾಲ್ಕು ದಿನಗಳ ಹಿಂದೆ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದ್ದ ಅಂಗನವಾಡಿ ಕೊಠಡಿ ಮುಂಭಾಗದ ಪಿಲ್ಲರ್ ಕುಸಿದು ಬಿದ್ದಿತ್ತು. ಈ ವೇಳೆ ಸ್ವಲ್ಪದರಲ್ಲಿಯೇ ಮಕ್ಕಳು ಪಾರಾಗಿ ದೊಡ್ಡ ಅನಾಹುತ ತಪ್ಪಿತ್ತು.
ಈ ಸಂಬಂಧ ‘ಆಂದೋಲನ’ ದಿನಪತ್ರಿಕೆಯಲ್ಲಿ ಫೆಬ್ರವರಿ ೧೫ರ ಸಂಚಿಕೆಯಲ್ಲಿ ಅಂಗನವಾಡಿ ಶಿಥಿಲ ಕಟ್ಟಡದ ಪಿಲ್ಲರ್ ಕುಸಿತ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.
ಇದರಿಂದ ಎಚ್ಚೆತ್ತ ಕೊಳ್ಳೇಗಾಲ ಪ್ರಭಾರ ಸಿಡಿಪಿಒ ಜಯಶೀಲರವರು ಉನ್ನತೀಕರಿಸಿದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿರುವ ಖಾಲಿ ಕೊಠಡಿಯನ್ನು ಅಂಗನವಾಡಿ ಒಂದನೇ ಕೇಂದ್ರಕ್ಕೆ ನೀಡುವಂತೆ ಹನೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಮೀಪದಲ್ಲಿ ಇದ್ದ ಮತ್ತೊಂದು ಕೊಠಡಿಯನ್ನು ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗುವವರೆಗೆ ಅಂಗನವಾಡಿ ಒಂದನೇ ಕೇಂದ್ರದ ಬಳಕೆಗೆ ನೀಡಿ ಅವಕಾಶ ಮಾಡಿಕೊಟ್ಟಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಶನಿವಾರ ಕೊಠಡಿಯನ್ನು ಸ್ವಚ್ಛಗೊಳಿಸಿ ಸಾಮಗ್ರಿಗಳನ್ನು ಸ್ಥಳಾಂತರ ಮಾಡಿದ್ದಾರೆ. ೩ ದಿನಗಳಿಂದ ಅಂಗನವಾಡಿ ಒಂದನೇ ಕೇಂದ್ರದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಇದೀಗ ಅಂಗನವಾಡಿ ಕೇಂದ್ರಕ್ಕೆ ಯೋಗ್ಯವಾದ ಕೊಠಡಿ ನೀಡಿರುವುದರಿಂದ ಸೋಮವಾರದಿಂದ ಮಕ್ಕಳನ್ನು ಕರೆತಂದು ಅಂಗನವಾಡಿ ಪ್ರಾರಂಭಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆ ಸೆಲ್ವಿ ರಾಣಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ತೊಂದರೆ: ತಾತ್ಕಾಲಿಕವಾಗಿ ಅಂಗನವಾಡಿ ಒಂದನೇ ಕೇಂದ್ರಕ್ಕೆ ನೀಡಲಾಗಿರುವ ಕೊಠಡಿಯ ಮುಂದೆ ಇಂದಿರಾ ಕ್ಯಾಂಟೀನ್ ನಿರ್ಮಾಣದ ವೇಳೆ ಕತ್ತರಿಸಲಾಗಿದ್ದ ಮರದ ತುಂಡುಗಳು ಹಾಗೂ ಮಣ್ಣಿನ ಗುಡ್ಡೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತೊಂದರೆ ಆಗಲಿದೆ. ಈ ನಿಟ್ಟಿನಲ್ಲಿ ಮಣ್ಣಿನ ಗುಡ್ಡೆ ಹಾಗೂ ಮರದ ತುಂಡುಗಳು ತೆರವುಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಪೋಷಕರು ಮನವಿ ಮಾಡಿದ್ದಾರೆ.
” ಹನೂರು ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರ ಕಾರ್ಯಾ ಚರಿಸುತ್ತಿದ್ದ ತಾತ್ಕಾಲಿಕ ಕೊಠಡಿ ಶಿಥಿಲಗೊಂಡು ಪಿಲ್ಲರ್ ಕುಸಿತವಾಗಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದ್ದು, ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ವರದಿ ಪ್ರಕಟಿಸಿದ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿದಿರುವುದು ಸಂತಸ ತಂದಿದೆ.”
-ಸ್ಪೂರ್ತಿ, ಪೋಷಕರು.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…