ಪಿಲ್ಲರ್ ಕುಸಿತ ಪ್ರಕರಣ; ‘ಆಂದೋಲನ’ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು
ಹನೂರು: ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಖಾಲಿ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದೆ.
ಹನೂರು ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ಒಂದನೇ ಕೇಂದ್ರವನ್ನು ಈ ಹಿಂದೆ ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದ ಆವರಣದಲ್ಲಿದ್ದ ಹಳೇ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆರಂಭಿಸಲಾಗಿತ್ತು ಆದರೆ, ಈ ಕಟ್ಟಡವನ್ನು ತಾಲ್ಲೂಕು ಅಭಿಲೇಖಾಲಯ ಕಚೇರಿಗೆ ಹಸ್ತಾಂತರ ಮಾಡಿದ್ದ ಹಿನ್ನೆಲೆಯಲ್ಲಿ ಬಳಕೆಗೆ ಯೋಗ್ಯವಿಲ್ಲದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿತ್ತು.
ನಾಲ್ಕು ದಿನಗಳ ಹಿಂದೆ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದ್ದ ಅಂಗನವಾಡಿ ಕೊಠಡಿ ಮುಂಭಾಗದ ಪಿಲ್ಲರ್ ಕುಸಿದು ಬಿದ್ದಿತ್ತು. ಈ ವೇಳೆ ಸ್ವಲ್ಪದರಲ್ಲಿಯೇ ಮಕ್ಕಳು ಪಾರಾಗಿ ದೊಡ್ಡ ಅನಾಹುತ ತಪ್ಪಿತ್ತು.
ಈ ಸಂಬಂಧ ‘ಆಂದೋಲನ’ ದಿನಪತ್ರಿಕೆಯಲ್ಲಿ ಫೆಬ್ರವರಿ ೧೫ರ ಸಂಚಿಕೆಯಲ್ಲಿ ಅಂಗನವಾಡಿ ಶಿಥಿಲ ಕಟ್ಟಡದ ಪಿಲ್ಲರ್ ಕುಸಿತ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.
ಇದರಿಂದ ಎಚ್ಚೆತ್ತ ಕೊಳ್ಳೇಗಾಲ ಪ್ರಭಾರ ಸಿಡಿಪಿಒ ಜಯಶೀಲರವರು ಉನ್ನತೀಕರಿಸಿದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿರುವ ಖಾಲಿ ಕೊಠಡಿಯನ್ನು ಅಂಗನವಾಡಿ ಒಂದನೇ ಕೇಂದ್ರಕ್ಕೆ ನೀಡುವಂತೆ ಹನೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಮೀಪದಲ್ಲಿ ಇದ್ದ ಮತ್ತೊಂದು ಕೊಠಡಿಯನ್ನು ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗುವವರೆಗೆ ಅಂಗನವಾಡಿ ಒಂದನೇ ಕೇಂದ್ರದ ಬಳಕೆಗೆ ನೀಡಿ ಅವಕಾಶ ಮಾಡಿಕೊಟ್ಟಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಶನಿವಾರ ಕೊಠಡಿಯನ್ನು ಸ್ವಚ್ಛಗೊಳಿಸಿ ಸಾಮಗ್ರಿಗಳನ್ನು ಸ್ಥಳಾಂತರ ಮಾಡಿದ್ದಾರೆ. ೩ ದಿನಗಳಿಂದ ಅಂಗನವಾಡಿ ಒಂದನೇ ಕೇಂದ್ರದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಇದೀಗ ಅಂಗನವಾಡಿ ಕೇಂದ್ರಕ್ಕೆ ಯೋಗ್ಯವಾದ ಕೊಠಡಿ ನೀಡಿರುವುದರಿಂದ ಸೋಮವಾರದಿಂದ ಮಕ್ಕಳನ್ನು ಕರೆತಂದು ಅಂಗನವಾಡಿ ಪ್ರಾರಂಭಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆ ಸೆಲ್ವಿ ರಾಣಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ತೊಂದರೆ: ತಾತ್ಕಾಲಿಕವಾಗಿ ಅಂಗನವಾಡಿ ಒಂದನೇ ಕೇಂದ್ರಕ್ಕೆ ನೀಡಲಾಗಿರುವ ಕೊಠಡಿಯ ಮುಂದೆ ಇಂದಿರಾ ಕ್ಯಾಂಟೀನ್ ನಿರ್ಮಾಣದ ವೇಳೆ ಕತ್ತರಿಸಲಾಗಿದ್ದ ಮರದ ತುಂಡುಗಳು ಹಾಗೂ ಮಣ್ಣಿನ ಗುಡ್ಡೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತೊಂದರೆ ಆಗಲಿದೆ. ಈ ನಿಟ್ಟಿನಲ್ಲಿ ಮಣ್ಣಿನ ಗುಡ್ಡೆ ಹಾಗೂ ಮರದ ತುಂಡುಗಳು ತೆರವುಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಪೋಷಕರು ಮನವಿ ಮಾಡಿದ್ದಾರೆ.
” ಹನೂರು ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರ ಕಾರ್ಯಾ ಚರಿಸುತ್ತಿದ್ದ ತಾತ್ಕಾಲಿಕ ಕೊಠಡಿ ಶಿಥಿಲಗೊಂಡು ಪಿಲ್ಲರ್ ಕುಸಿತವಾಗಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದ್ದು, ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ವರದಿ ಪ್ರಕಟಿಸಿದ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿದಿರುವುದು ಸಂತಸ ತಂದಿದೆ.”
-ಸ್ಪೂರ್ತಿ, ಪೋಷಕರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…