Andolana originals

ಹನೂರು: ಸರ್ಕಾರಿ ಶಾಲಾ ಕೊಠಡಿಗೆ ಅಂಗನವಾಡಿ ಕೇಂದ್ರ ಸ್ಥಳಾಂತರ

ಪಿಲ್ಲರ್ ಕುಸಿತ ಪ್ರಕರಣ; ‘ಆಂದೋಲನ’ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು 

ಹನೂರು: ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಖಾಲಿ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದೆ.

ಹನೂರು ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ಒಂದನೇ ಕೇಂದ್ರವನ್ನು ಈ ಹಿಂದೆ ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದ ಆವರಣದಲ್ಲಿದ್ದ ಹಳೇ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಆರಂಭಿಸಲಾಗಿತ್ತು ಆದರೆ, ಈ ಕಟ್ಟಡವನ್ನು ತಾಲ್ಲೂಕು ಅಭಿಲೇಖಾಲಯ ಕಚೇರಿಗೆ ಹಸ್ತಾಂತರ ಮಾಡಿದ್ದ ಹಿನ್ನೆಲೆಯಲ್ಲಿ ಬಳಕೆಗೆ ಯೋಗ್ಯವಿಲ್ಲದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿತ್ತು.

ನಾಲ್ಕು ದಿನಗಳ ಹಿಂದೆ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದ್ದ ಅಂಗನವಾಡಿ ಕೊಠಡಿ ಮುಂಭಾಗದ ಪಿಲ್ಲರ್ ಕುಸಿದು ಬಿದ್ದಿತ್ತು. ಈ ವೇಳೆ ಸ್ವಲ್ಪದರಲ್ಲಿಯೇ ಮಕ್ಕಳು ಪಾರಾಗಿ ದೊಡ್ಡ ಅನಾಹುತ ತಪ್ಪಿತ್ತು.

ಈ ಸಂಬಂಧ ‘ಆಂದೋಲನ’ ದಿನಪತ್ರಿಕೆಯಲ್ಲಿ ಫೆಬ್ರವರಿ ೧೫ರ ಸಂಚಿಕೆಯಲ್ಲಿ ಅಂಗನವಾಡಿ ಶಿಥಿಲ ಕಟ್ಟಡದ ಪಿಲ್ಲರ್ ಕುಸಿತ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.

ಇದರಿಂದ ಎಚ್ಚೆತ್ತ ಕೊಳ್ಳೇಗಾಲ ಪ್ರಭಾರ ಸಿಡಿಪಿಒ ಜಯಶೀಲರವರು ಉನ್ನತೀಕರಿಸಿದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿರುವ ಖಾಲಿ ಕೊಠಡಿಯನ್ನು ಅಂಗನವಾಡಿ ಒಂದನೇ ಕೇಂದ್ರಕ್ಕೆ ನೀಡುವಂತೆ ಹನೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಮೀಪದಲ್ಲಿ ಇದ್ದ ಮತ್ತೊಂದು ಕೊಠಡಿಯನ್ನು ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗುವವರೆಗೆ ಅಂಗನವಾಡಿ ಒಂದನೇ ಕೇಂದ್ರದ ಬಳಕೆಗೆ ನೀಡಿ ಅವಕಾಶ ಮಾಡಿಕೊಟ್ಟಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಶನಿವಾರ ಕೊಠಡಿಯನ್ನು ಸ್ವಚ್ಛಗೊಳಿಸಿ ಸಾಮಗ್ರಿಗಳನ್ನು ಸ್ಥಳಾಂತರ ಮಾಡಿದ್ದಾರೆ. ೩ ದಿನಗಳಿಂದ ಅಂಗನವಾಡಿ ಒಂದನೇ ಕೇಂದ್ರದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಇದೀಗ ಅಂಗನವಾಡಿ ಕೇಂದ್ರಕ್ಕೆ ಯೋಗ್ಯವಾದ ಕೊಠಡಿ ನೀಡಿರುವುದರಿಂದ ಸೋಮವಾರದಿಂದ ಮಕ್ಕಳನ್ನು ಕರೆತಂದು ಅಂಗನವಾಡಿ ಪ್ರಾರಂಭಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆ ಸೆಲ್ವಿ ರಾಣಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ತೊಂದರೆ: ತಾತ್ಕಾಲಿಕವಾಗಿ ಅಂಗನವಾಡಿ ಒಂದನೇ ಕೇಂದ್ರಕ್ಕೆ ನೀಡಲಾಗಿರುವ ಕೊಠಡಿಯ ಮುಂದೆ ಇಂದಿರಾ ಕ್ಯಾಂಟೀನ್ ನಿರ್ಮಾಣದ ವೇಳೆ ಕತ್ತರಿಸಲಾಗಿದ್ದ ಮರದ ತುಂಡುಗಳು ಹಾಗೂ ಮಣ್ಣಿನ ಗುಡ್ಡೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತೊಂದರೆ ಆಗಲಿದೆ. ಈ ನಿಟ್ಟಿನಲ್ಲಿ ಮಣ್ಣಿನ ಗುಡ್ಡೆ ಹಾಗೂ ಮರದ ತುಂಡುಗಳು ತೆರವುಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಪೋಷಕರು ಮನವಿ ಮಾಡಿದ್ದಾರೆ.

” ಹನೂರು ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರ ಕಾರ್ಯಾ ಚರಿಸುತ್ತಿದ್ದ ತಾತ್ಕಾಲಿಕ ಕೊಠಡಿ ಶಿಥಿಲಗೊಂಡು ಪಿಲ್ಲರ್ ಕುಸಿತವಾಗಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದ್ದು, ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆ ವರದಿ ಪ್ರಕಟಿಸಿದ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿದಿರುವುದು ಸಂತಸ ತಂದಿದೆ.”

-ಸ್ಪೂರ್ತಿ, ಪೋಷಕರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago