Andolana originals

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ

ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ ದಿನದಿಂದಲೂ ಹೂಳು ತೆಗೆಸದೇ ಇರುವುದರಿಂದ ರೈತರು ಹಾಗೂ ಕಾಡು ಪ್ರಾಣಿಗಳಿಗೆ ನೀರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಹೂಳು ತೆಗೆಸಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದರೂ ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿಯಾಗಲಿ ಅಥವಾ ಹೂಳು ತೆಗೆಸುವ ಕಾರ್ಯವಾಗಲಿ ಆಗಿಲ್ಲ. ರಾಮನ ಗುಡ್ಡ, ಹುಬ್ಬೆಹುಣಸೆ ಜಲಾಶಯದಂತೆ ಉಡುತೊರೆ ಹಳ್ಳ ಜಲಾಶಯದಲ್ಲಿಯೂ ಹೂಳು ತೆಗೆಸಿದರೆ ಹೆಚ್ಚಿನ ಪ್ರಮಾಣ ದಲ್ಲಿ ನೀರು ಸಂಗ್ರಹವಾಗಲಿದೆ.

ಜಲಾಶಯದಲ್ಲಿ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು ಎಲ್ಲೆಡೆ ಹೂಳು ತುಂಬಿದೆ. ಇದರ ಪರಿಣಾಮ ನೀರಿನ ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾಗಿದೆ. ನೀರನ್ನು ಅರಸಿ ಬರುವಂತಹ ಕಾಡು ಪ್ರಾಣಿಗಳ ಜೀವಕ್ಕೂ ಕಂಟಕವಾಗಿದೆ. ಹೂಳು ತುಂಬಿಕೊಂಡಿರುವ ಪರಿಣಾಮವೇ ಒಂದು ಆನೆಯನ್ನು ಕಳೆದುಕೊಂಡಿದ್ದೇವೆ.

ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಳು ಇರುವುದರಿಂದ ನೀರು ಕುಡಿಯಲು ಬಂದಿದ್ದ ಆನೆ ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದೆ. ಎಷ್ಟೇ ಚಿಕಿತ್ಸೆ ನೀಡಿದರೂ ಫಲಿಸದೆ ಮೃತಪಟ್ಟಿದೆ. ಹಾಗಾಗಿ ಸಂಬಂಧ ಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗ ಜಲಾಶಯದ ಹೂಳು ತೆಗೆಸುವ ಕಾರ್ಯಕ್ಕೆ ಮುಂದಾಗ ಬೇಕು ಎಂಬುದು ರೈತರ ಆಗ್ರಹವಾಗಿದೆ.

ಪ್ರಸ್ತುತ ೦. ೬೭ ಟಿಎಂಸಿ ನೀರು ಸಂಗ್ರಹಣೆಯಾಗುತ್ತಿದ್ದು ಹೂಳು ತೆಗೆದರೆ ಮತ್ತಷ್ಟು ನೀರು ಸಂಗ್ರಹಣೆಯಾಗಿ ಸಾಮಾನ್ಯ ರೈತರಿಗೆ ಅನುಕೂಲವಾಗಲಿದೆ ಎಂಬುದು ಇಲ್ಲಿನ ಗ್ರಾಮಸ್ಥರ ಅಭಿಪ್ರಾಯವಾಗಿದೆ. ಪ್ರಸ್ತುತ ೧,೬೦೦ ಎಕರೆಗೆ ಅಂದರೆ ಬಲದಂಡೆ ೧೦,೦೦೦, ಎಡದಂಡೆ ೬,೦೦೦ ಎಕರೆಗೆ ಜಲಾಶಯದಿಂದ ನೀರು ಲಭ್ಯವಾಗುತ್ತಿದೆ.

ಕ್ಷೇತ್ರದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ರಾಮಾಪುರ ಹೋಬಳಿ ವ್ಯಾಪ್ತಿಯ ನಿವಾಸಿಗಳಿಗೆ ಹಾಗೂ ಜನಜಾನುವಾರುಗಳಿಗೆ ನೀರು ಪೂರೈಸಲು ೪೯೦ ಕೋಟಿ ರೂ. ವೆಚ್ಚದ ಬೃಹತ್ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ಅನುಮೋದನೆ ದೊರಕಿದೆ. ಮುಂದಿನ ದಿನಗಳಲ್ಲಿ ಹೂಳು ತೆಗೆಸುವ ಬಗ್ಗೆ ಅಽಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ವಹಿಸಲಾಗುವುದು. ಎಂ. ಆರ್. ಮಂಜುನಾಥ್, ಶಾಸಕರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago