ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಹಾರ್ಡಿಕ್ ಶಾಲೆಯೂ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದ್ದು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಈ ಶಾಲೆಯ ಕಟ್ಟಡಕ್ಕೂ ದೀಪಾಲಂಕರ ಮಾಡಬೇಕಿದೆ.
ಒಂದೂವರೆ ಶತಮಾನಕ್ಕೂ ಅಧಿಕ (ಸುಮಾರು 170 ವರ್ಷ) ವರ್ಷಗಳ ಇತಿಹಾಸವನ್ನು ಹೊಂದಿರುವ ಹಾರ್ಡಿಕ್ ಶಾಲೆಯು ಒಂದು ಸುಂದರ ಪಾರಂಪರಿಕವಾದ ಮೂರು ಅಂತಸ್ತುಗಳ ಕಟ್ಟಡವನ್ನು ಹೊಂದಿದೆ.
ಅಲ್ಲದೆ ಕಮಾನಿನ ಸ್ವಾಗತ ದ್ವಾರವನ್ನೂ ಈ ಕಟ್ಟಡದಲ್ಲಿ ಕಾಣಬಹುದು. ಸರ್ಕಾರ ಪ್ರತಿ ದಸರಾ ಮಹೋತ್ಸವದಲ್ಲಿಯೂ ನಗರದ ಪ್ರಮುಖ ವೃತ್ತಗಳು, ರಸ್ತೆಗಳು, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದು, ದಸರಾಗೆ ಮತ್ತಷ್ಟು ಮೆರುಗು ನೀಡಲಿದೆ. ಆದ್ದರಿಂದ ಈ ಬಾರಿಯ ದಸರಾದಲ್ಲಿ ನಗರಕ್ಕೆ ದೀಪಾಲಂಕಾರ ಮಾಡುವಾಗ ಹಾರ್ಡಿಕ್ ಶಾಲೆಯ ಕಟ್ಟಡಕ್ಕೂ ದೀಪಾಲಂಕಾರ ಮಾಡಿ ಕಟ್ಟಡದ ಸೌಂದರ್ಯ ಹೆಚ್ಚಿಸಬೇಕಿದೆ.
-ಅಹಲ್ಯ ಸಿ.ನಾ.ಚಂದ್ರೇಗೌಡ, ಜನತಾ ನಗರ, ಮೈಸೂರು.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…