Andolana originals

ಓದುಗರ ಪತ್ರ: ಹಾರ್ಡಿಕ್ ಶಾಲೆಗೂ ದೀಪಾಲಂಕಾರ ಮಾಡಿ

ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಹಾರ್ಡಿಕ್ ಶಾಲೆಯೂ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದ್ದು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಈ ಶಾಲೆಯ ಕಟ್ಟಡಕ್ಕೂ ದೀಪಾಲಂಕರ ಮಾಡಬೇಕಿದೆ.

ಒಂದೂವರೆ ಶತಮಾನಕ್ಕೂ ಅಧಿಕ (ಸುಮಾರು 170 ವರ್ಷ) ವರ್ಷಗಳ ಇತಿಹಾಸವನ್ನು ಹೊಂದಿರುವ ಹಾರ್ಡಿಕ್ ಶಾಲೆಯು ಒಂದು ಸುಂದರ ಪಾರಂಪರಿಕವಾದ ಮೂರು ಅಂತಸ್ತುಗಳ ಕಟ್ಟಡವನ್ನು ಹೊಂದಿದೆ.

ಅಲ್ಲದೆ ಕಮಾನಿನ ಸ್ವಾಗತ ದ್ವಾರವನ್ನೂ ಈ ಕಟ್ಟಡದಲ್ಲಿ ಕಾಣಬಹುದು. ಸರ್ಕಾರ ಪ್ರತಿ ದಸರಾ ಮಹೋತ್ಸವದಲ್ಲಿಯೂ ನಗರದ ಪ್ರಮುಖ ವೃತ್ತಗಳು, ರಸ್ತೆಗಳು, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದು, ದಸರಾಗೆ ಮತ್ತಷ್ಟು ಮೆರುಗು ನೀಡಲಿದೆ. ಆದ್ದರಿಂದ ಈ ಬಾರಿಯ ದಸರಾದಲ್ಲಿ ನಗರಕ್ಕೆ ದೀಪಾಲಂಕಾರ ಮಾಡುವಾಗ ಹಾರ್ಡಿಕ್ ಶಾಲೆಯ ಕಟ್ಟಡಕ್ಕೂ ದೀಪಾಲಂಕಾರ ಮಾಡಿ ಕಟ್ಟಡದ ಸೌಂದರ್ಯ ಹೆಚ್ಚಿಸಬೇಕಿದೆ.

-ಅಹಲ್ಯ ಸಿ.ನಾ.ಚಂದ್ರೇಗೌಡ, ಜನತಾ ನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

44 mins ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

46 mins ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

48 mins ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

51 mins ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

53 mins ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

57 mins ago