Andolana originals

ದಸರಾ ಮುಖ್ಯಮಂತ್ರಿ ಕಪ್’ಗೆ ಹರ್ಮನ್ ಪ್ರೀತ್‌ಸಿಂಗ್ ಅತಿಥಿ

ಜಿ. ತಂಗಂ ಗೋಪಿನಾಥಂ
ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರಾಜ್ಯ ಮಟ್ಟದ ‘ದಸರಾ ಮುಖ್ಯಮಂತ್ರಿ ಕಪ್’ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಈ ಸಂಬಂಧ ಹರ್ಮನ್ ಪ್ರೀತ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದು, ದಸರಾ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸುವಂತೆ ಕೋರಿದೆ. ಇದಕ್ಕೆ ಹರ್ಮನ್ ಪ್ರೀತ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಅ. ೩ರಿಂದ ೬ರವರೆಗೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ಅ. ೩ರಂದು ಸಂಜೆ ೪. ೩೦ಕ್ಕೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕ್ರೀಡಾಪಟುವಿನ ಕೈಯಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸುವುದು ವಾಡಿಕೆ. ಆದರೆ, ಕಳೆದ ವರ್ಷ ಈ ಸಂಪ್ರದಾಯಕ್ಕೆ ಬ್ರೇಕ್ ಬಿದ್ದಿತ್ತು. ಕ್ರೀಡಾಪಟು ಬದಲಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಳೆದ ವರ್ಷ ಕ್ರೀಡಾಪಟು ಇಲ್ಲದೆ ದಸರಾ ಕ್ರೀಡಾಕೂಟ ಉದ್ಘಾಟನೆ ಆಗಿರುವುದರಿಂದ ಕ್ರೀಡಾ ಪ್ರೇಮಿಗಳಲ್ಲಿ ಬೇಸರ ತರಿಸಿತ್ತು. ಈ ಬಾರಿ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರು ಅತಿಥಿಗಳಾಗಿ ಆಗಮಿಸುತ್ತಿರುವುದು ಕ್ರೀಡಾ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿದೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರಿಗೆ ರಾಜ್ಯ ಮಟ್ಟದ ‘ದಸರಾ ಮುಖ್ಯಮಂತ್ರಿ ಕಪ್’ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲು ಪತ್ರ ರವಾನಿಸಲಾಗಿದೆ. ಬರುವ ಒಪ್ಪಿಗೆ ಸೂಚಿಸಿದ್ದಾರೆ.
-ಭಾಸ್ಕರ್ ನಾಯಕ್, ಸಹಾಯಕ ನಿರ್ದೇಶಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.

ಈವರೆಗೆ ದಸರಾ ಕ್ರೀಡಾಕೂಟ ಉದ್ಘಾಟಿಸಿದ್ದ ಕ್ರೀಡಾಪಟುಗಳು
ಕೊರೊನಾ ಕಾರಣದಿಂದ ೨೦೨೦ ಹಾಗೂ ೨೦೨೧ನೇ ಸಾಲಿನಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಿರಲಿಲ್ಲ. ೨೦೨೨ರಲ್ಲಿ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮಹಿಳಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಟ್ಟ ಸಾಕ್ಷಿ ಮಲಿಕ್ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ೨೦೧೯ರಲ್ಲಿ ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧು, ೨೦೧೮ರಲ್ಲಿ ಅಂತಾರಾಷ್ಟ್ರೀಯ ಅಥ್ಲೀಟ್ ಕೊಡಗಿನ ಎಂ. ಆರ್. ಪೂವಮ್ಮ, ೨೦೧೭ರಲ್ಲಿ ಹೆಸರಾಂತ ಮಹಿಳಾ ಕ್ರಿಕೆಟ್‌ಪಟುಗಳಾದ ವೇದಾ ಕೃಷ್ಣಮೂರ್ತಿ, ರಾಜೇಶ್ವರಿ ಗಾಯಕ್ವಾಡ್, ೨೦೧೪ ರಲ್ಲಿ ಪರ್ವತಾರೋಹಿ ಅರುಣಿಮಾ ಸಿನ್ಹಾ ಉದ್ಘಾಟಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

6 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

6 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

7 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

7 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

7 hours ago