Andolana originals

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ

ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ

ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾದ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾಭಕ್ತಿಯಿಂದ  ಆಚರಿಸಲ್ಪಡುತ್ತಿದ್ದು, ಈಗಾಗಲೇ ಹಲವು ಗ್ರಾಮ ದಲ್ಲಿ ಪ್ರಸಕ್ತ ವರ್ಷದ ಸುಗ್ಗಿ ಆರಂಭಗೊಳ್ಳುತ್ತಿದೆ.

ಇನ್ನೇನು ಮಳೆಗಾಲ ಪ್ರಾರಂಭವಾಗಿ ಗ್ರಾಮೀಣ ಭಾಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಸಮಯ ಸನ್ನಿಹಿತವಾಗುತ್ತಿರುವಾಗಲೇ ಕೃಷಿ ಕಾರ್ಯಗಳಿಗೆ ಯಾವದೇ ತೊಂದರೆಯಾಗಬಾರದು, ಗ್ರಾಮ ಸುಭಿಕ್ಷೆಯಿಂದಿರಬೇಕು ಎಂದು ಗ್ರಾಮದ ಕಲ್ಯಾಣಕ್ಕಾಗಿ ಗ್ರಾಮ ದೇವರಿಗೆ ಹಾಗೂ ಪ್ರಕೃತಿ ದೇವಿಗೆ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ವಿಶಿಷ್ಟ ಹಬ್ಬವಾದ ಸುಗ್ಗಿ ಉತ್ಸವಗಳು ತಾಲ್ಲೂಕಿನ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಆರಂಭಗೊಂಡಿವೆ.

ಮಲೆನಾಡಿನ ಪ್ರದೇಶವಾದ ಪುಷ್ಪಗಿರಿ ಬೆಟ್ಟ ಶ್ರೇಣಿಯ ತಪ್ಪಲಲ್ಲಿರುವ ಗ್ರಾಮಗಳಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಕಂಡುಬರುತ್ತಿದೆ. ಈ ವ್ಯಾಪ್ತಿಯ ಗ್ರಾಮಗಳ ಗ್ರಾಮದೇವತೆಯಾದ ಸಬ್ಬಮ್ಮ ದೇವಿಗೆ ಊರಿನ ಎಲ್ಲರೂ ಒಟ್ಟುಸೇರಿವರ್ಷಕ್ಕೊಮ್ಮೆ ಪೂಜೆ ಸಲ್ಲಿಸುವ ಆಚರಣೆ ತಲೆ ತಲಾಂತರದಿಂದ ನಡೆದುಕೊಂಡು ಬಂದಿದೆ. ಈ ಸಂದರ್ಭ ಗ್ರಾಮದ ಹೊರಭಾಗಗಳಲ್ಲಿ ನೆಲೆಸಿರುವ ಮಂದಿಯೂ ಗ್ರಾಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಇಡೀ ಗ್ರಾಮ ಸಂಭ್ರಮದಲ್ಲಿರುತ್ತದೆ. ಸುಗ್ಗಿ ಉತ್ಸವ ಪ್ರಾರಂಭವಾಗುತ್ತಿದ್ದಂತೆ ಗ್ರಾಮದ ಜನರ ಮನೆಗಳಲ್ಲಿ ಗ್ರಾಮದೇವತೆಗಳ ಪೂಜೆಗಳು ನಡೆಯುತ್ತವೆ. ಗ್ರಾಮದಲ್ಲಿ ರೋಗರುಜಿನಗಳು ಬರದಂತೆ, ಮುಂದೆ ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆ ನಡೆದು ಸಮೃದ್ಧ ಫಸಲು ಕೈಸೇರುವುದಕ್ಕೆ ಗ್ರಾಮದೇವತೆಗಳು ಹರಸಬೇಕೆಂದು ಪ್ರಾರ್ಥನೆ ಮಾಡುತ್ತಾರೆ.

ಸುಗ್ಗಿ ಉತ್ಸವ ಪ್ರಾರಂಭದ ದಿನದಿಂದ ಸುಗ್ಗಿ ಸಾರು ಎಂಬ ಕಟ್ಟುನಿಟ್ಟಿನ ಆಚರಣೆಯನ್ನು ಕೈಗೊಳ್ಳಲಾಗುತ್ತದೆ. ಉತ್ಸವದ ೧೫ದಿನಗಳಲ್ಲಿ ಹಸಿ ಮರ ಕಡಿಯುವುದು, ಒಣಗಿದ ಗಿಡ ಬಳ್ಳಿಗಳನ್ನುಮುರಿಯದಂತೆ ಎಚ್ಚರ ವಹಿಸುತ್ತಾರೆ. ಹಗಲು ವೇಳೆ ನೆಂಟರಿಷ್ಟರು ಮನೆ ಸೇರದಂತೆ ನಿರ್ಬಂಧ ವಿಧಿಸುತ್ತಾರೆ. ನಕ್ಷತ್ರಗಳು ಕಂಡ ನಂತರವೇ ಮನೆಯೊಳಕ್ಕೆ ಬರಮಾಡಿಕೊಳ್ಳುತ್ತಾರೆ. ಹಗಲಿನ ವೇಳೆ ಹೊರಗಡೆಯಿಂದ ಆಹಾರ ಸಾಮಗ್ರಿಗಳನ್ನು ಖರೀದಿಸುವಂತಿಲ್ಲ. ಇಂತಹ ಕಟ್ಟುಪಾಡು ಗಳು ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸುಗ್ಗಿ ಸಂದರ್ಭ ಚಾಲ್ತಿಯಲ್ಲಿರುತ್ತವೆ.

ಏ.೬ರಂದು ಕೂತಿನಾಡು ಸುಗ್ಗಿ: 

ಕೂತಿ ನಾಡು ಶ್ರೀ ಸಬ್ಬಮ್ಮ ದೇವಿಯ(ಲಕ್ಷ್ಮಿ) ಉತ್ಸವ ಎಂದೇ ಹೆಸರಾಗಿರುವ ನಗರಳ್ಳಿ ಸುಗ್ಗಿ ಹಲವು ವೈಶಿಷ್ಟ್ಯಗಳೊಂದಿಗೆ ಇದೆ ಏ.೬ರ ಸೋಮವಾರ ನೆರವೇರುತ್ತದೆ. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಪಕ್ಕದ ಸಕಲೇಶಪುರ ತಾಲ್ಲೂಕಿನ ಓಡಳ್ಳಿ ಸೇರಿದಂತೆ ಒಟ್ಟು ೧೮ ಗ್ರಾಮಗಳ ಜನರು ಒಂದೆಡೆ ಕಲೆತು ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಅನಾದಿಕಾಲದಿಂದ ನಡೆದುಬಂದ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ. ಉತ್ಸವದ ಕೊನೆ ದಿನ ನಗರಳ್ಳಿಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ ೪ ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಜಾನಪದದ ಭಾಗವಂತೂ ಗ್ರಾಮೀಣ ಭಾಗದ ಜನರು ಗ್ರಾಮ ದೇವತೆಯ ಮೇಲಿಟ್ಟಿರುವ ಭಕ್ತಿಭಾವವನ್ನು ಪ್ರಕಟಗೊಳಿಸುವ ಬಹುಮುಖ್ಯ ಕ್ಷಣಗಳಾಗುತ್ತವೆ.

ಬಂದೂಕುಗಳಿಗೆ ಪೂಜೆ..!:  ಅನಾದಿಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಂತೆ ಕೂತಿನಾಡು, ತೋಳುನಾಡು ವ್ಯಾಪ್ತಿಯ ದೇವಿಯ ಕಟ್ಟೆಯಲ್ಲಿ ಸ್ಥಳೀಯ ಗ್ರಾಮದ ಮನೆಗಳಲ್ಲಿರುವ ಬಂದೂಕುಗಳನ್ನು ತಂದಿಟ್ಟು ಸಾಮೂಹಿಕವಾಗಿ ಪೂಜೆ ಸಲ್ಲಿಸಲಾಗುತ್ತದೆ. ನಂತರ ದೇವರ ಕಟ್ಟೆಗೆ ಗ್ರಾಮಸ್ಥರ ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ಬಂದೂಕಿನಿಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಪದ್ಧತಿಯನ್ನು ಆಚರಿಸುವುದರೊಂದಿಗೆ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

” ಗ್ರಾಮದೇವತೆಯ ಆಶೀರ್ವಾದದಿಂದ ತಲೆತಲಾಂತರದಿಂದ ಕೃಷಿಕರು ಸಮೃದ್ಧಿಯ ಬದುಕು ನಡೆಸುತ್ತಿದ್ದಾರೆ ಎಂಬ ನಂಬಿಕೆ ಜನರಲ್ಲಿದೆ. ಮುಂದಿನ ಪೀಳಿಗೆಯೂ ಕೂಡ ಆಚರಣೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂಬುದು ಹಿರಿಯರ ಉದ್ದೇಶವಾಗಿದೆ.ಪ್ರಕೃತಿ ಆರಾಧನೆಯ ಇನ್ನೊಂದು ಹೆಸರು ಸುಗ್ಗಿ ಉತ್ಸವ. ವರ್ಷಕೊಮ್ಮೆ ನಡೆಯುವ ಉತ್ಸವದಲ್ಲಿ ಜಾನಪದ ಕಲೆಯ ಪ್ರದರ್ಶನ ನಡೆಯಲಿದೆ.”

-ಕೆ.ಬಿ.ಜಗದೀಶ್, ಅಧ್ಯಕ್ಷರು, ಕೂತಿನಾಡು ಶ್ರೀ ಸಬ್ಬಮ್ಮ ಸಮಿತಿ

” ಸ್ಥಳೀಯ ಗ್ರಾಮಗಳ ಗ್ರಾಮದೇವತೆಯಾದ ಸಬ್ಬಮ್ಮ ದೇವಿಗೆ ಊರಿನ ಎಲ್ಲರೂ ಒಟ್ಟುಸೇರಿ ವರ್ಷಕ್ಕೊಮ್ಮೆ ಪೂಜೆ ಸಲ್ಲಿಸುವ ಆಚರಣೆ ತಲೆತಲಾಂತರದಿಂದ ನಡೆದುಕೊಂಡು ಬಂದಿದೆ. ಈ ಸಂದರ್ಭ ಗ್ರಾಮದ ಹೊರಭಾಗಗಳಲ್ಲಿ ನೆಲೆಸಿರುವ ಗ್ರಾಮದವರೇ ಹಬ್ಬಕ್ಕೆ ಗ್ರಾಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಇಡೀ ಗ್ರಾಮ ಸಂಭ್ರಮದಲ್ಲಿರುತ್ತದೆ. ಈ ಬಾರಿಯೂ ಸಂಭ್ರಮದಿಂದ ಉತ್ಸವ ನಡೆಸಲಾಗುತ್ತಿದೆ.”

-ರಾಜ್ ಗೋಪಾಲ್, ಅಧ್ಯಕ್ಷರು, ಶ್ರೀ ಸಬ್ಬಮ್ಮ ಸಮಿತಿ, ತೋಳುರುಶೆಟ್ಟಳ್ಳಿ 

 

 

ಆಂದೋಲನ ಡೆಸ್ಕ್

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

6 mins ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

59 mins ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

2 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

2 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

2 hours ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

2 hours ago