Andolana originals

ನ.೧೦ರಿಂದ ೧೨ರವರೆಗೆ ಹಸಗೂಲಿ ಪಾರ್ವತಾಂಬೆ ಜಾತ್ರೆ

ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ.

ನ.೧೦ರ ಸೋಮವಾರ ಹಸಗೂಲಿ ಗ್ರಾಮದಿಂದ ಪಾರ್ವತಾಂಬೆಯ ವಿಗ್ರಹ ಹೊತ್ತು ಮೂಲ ಸ್ಥಳ ಕಸಗಲಪುರಕ್ಕೆ ತೆರಳುವರು. ಈ ಸಂದರ್ಭದಲ್ಲಿ ಗ್ರಾಮದ ಸಾವಿರಾರು ಮಂದಿ ದೇವಿಯನ್ನು ಕಾಡಿನ ಮೂಲಸ್ಥಳಕ್ಕೆ ಕಳಿಸಿಕೊಡುವರು. ಮೂಲಸ್ಥಳದಲ್ಲಿ ರಾತ್ರಿಯಿಡೀ ಪೂಜೆ ಸಲ್ಲಿಸಿ, ನಂತರ ಮಂಗಳವಾರ ಬರಗಿ, ದೇಶಿಪುರ, ಆಲತ್ತೂರು ಶೆಟ್ಟಹಳ್ಳಿ ಮಾರ್ಗದಲ್ಲಿ ಗ್ರಾಮಕ್ಕೆ ದೇವಿಯ ವಿಗ್ರಹ ಹೊತ್ತು ತರಲಾಗುವುದು.

ಬರುವ ಮಾರ್ಗದುದ್ದಕ್ಕೂ ವಿವಿಧ ಗ್ರಾಮಗಳ ಜನರು ಪೂಜೆ ಸಲ್ಲಿಸುತ್ತಾರೆ. ನಂತರ ನ.೧೧ರ ಮಂಗಳವಾರ ಹಸಗೂಲಿ ಗ್ರಾಮದಲ್ಲಿ ಸೇವಂತಿಗೆ ಹೂವಿನಿಂದ ರಥವನ್ನು ಸಿಂಗರಿಸಿ ಬಾಯಿ ಬೀಗ ಹರಕೆ, ದೇವಿಯ ದರ್ಶನ, ಪೂಜೆ ನಡೆಸಲಾಗು ವುದು. ನಂತರ ದೇವಿಯನ್ನು ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮಧ್ಯಾಹ್ನ ೩ ಗಂಟೆಯ ನಂತರ ಮೆರವಣಿಗೆ ನಡೆಸಲಾಗು ವುದು. ಕಜ್ಜಾಯ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸುವರು.ಸಾವಿರಾರು ಸಂಖ್ಯೆಯಲ್ಲಿ ಜನರು ಹಸಗೂಲಿ ಅಲ್ಲಹಳ್ಳಿ ಪಾರ್ವತಾಂಬೆ ದೇವಿಯನ್ನು ನೋಡಲು ಆಗಮಿಸುತ್ತಾರೆ. ಮಂಗಳವಾರ ಮಧ್ಯಾಹ್ನ ಮತ್ತು ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ರಥ ಮೆರವಣಿಗೆ ಹೊರಡಲಿದ್ದು, ಬುಧವಾರ ಬೆಳಿಗ್ಗೆಯೂ ಗ್ರಾಮದಲ್ಲಿ ರಥ ಸಂಚರಿಸಲಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸುವರು.

ಮೂರು ದಿನಗಳ ಕಾಲ ನಡೆಯಲಿರುವ ಹಸಗೂಲಿ ಪಾರ್ವತಾಂಬೆ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವಂತೆ ಜಾತ್ರಾ ಸಮಿತಿಯವರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಜಾನುವಾರು ಜಾತ್ರೆ ಎಂದೇ ಪ್ರಸಿದ್ಧಿ: 

ಹಸಗೂಲಿ ಜಾತ್ರೆ ಎಂದರೆ ತಾಲ್ಲೂಕಿನ ಎಲ್ಲ ಗ್ರಾಮಗಳಿಂದಲೂ ಜನರು ಬರುತ್ತಾರೆ. ಜಾನುವಾರುಗಳನ್ನು ಕರೆತಂದು ಪಂಜು ಹಚ್ಚಿ ಪೂಜೆ ಸಲ್ಲಿಸುತ್ತಾರೆ. ಜಾನುವಾರುಗಳಿಗೆ ಯಾವುದೇ ಕಾಯಿಲೆ ಬಂದರೂ ದೇವಿ ಗುಣ ಮಾಡುತ್ತಾಳೆ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ಜನರು ಜಾನುವಾರುಗಳನ್ನು ಕರೆತಂದು ಪೂಜೆ ಸಲ್ಲಿಸುವುದು ವಾಡಿಕೆ.

-ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

16 mins ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

1 hour ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

2 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

6 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

9 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

9 hours ago