ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ
ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ.
ನ.೧೦ರ ಸೋಮವಾರ ಹಸಗೂಲಿ ಗ್ರಾಮದಿಂದ ಪಾರ್ವತಾಂಬೆಯ ವಿಗ್ರಹ ಹೊತ್ತು ಮೂಲ ಸ್ಥಳ ಕಸಗಲಪುರಕ್ಕೆ ತೆರಳುವರು. ಈ ಸಂದರ್ಭದಲ್ಲಿ ಗ್ರಾಮದ ಸಾವಿರಾರು ಮಂದಿ ದೇವಿಯನ್ನು ಕಾಡಿನ ಮೂಲಸ್ಥಳಕ್ಕೆ ಕಳಿಸಿಕೊಡುವರು. ಮೂಲಸ್ಥಳದಲ್ಲಿ ರಾತ್ರಿಯಿಡೀ ಪೂಜೆ ಸಲ್ಲಿಸಿ, ನಂತರ ಮಂಗಳವಾರ ಬರಗಿ, ದೇಶಿಪುರ, ಆಲತ್ತೂರು ಶೆಟ್ಟಹಳ್ಳಿ ಮಾರ್ಗದಲ್ಲಿ ಗ್ರಾಮಕ್ಕೆ ದೇವಿಯ ವಿಗ್ರಹ ಹೊತ್ತು ತರಲಾಗುವುದು.
ಬರುವ ಮಾರ್ಗದುದ್ದಕ್ಕೂ ವಿವಿಧ ಗ್ರಾಮಗಳ ಜನರು ಪೂಜೆ ಸಲ್ಲಿಸುತ್ತಾರೆ. ನಂತರ ನ.೧೧ರ ಮಂಗಳವಾರ ಹಸಗೂಲಿ ಗ್ರಾಮದಲ್ಲಿ ಸೇವಂತಿಗೆ ಹೂವಿನಿಂದ ರಥವನ್ನು ಸಿಂಗರಿಸಿ ಬಾಯಿ ಬೀಗ ಹರಕೆ, ದೇವಿಯ ದರ್ಶನ, ಪೂಜೆ ನಡೆಸಲಾಗು ವುದು. ನಂತರ ದೇವಿಯನ್ನು ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮಧ್ಯಾಹ್ನ ೩ ಗಂಟೆಯ ನಂತರ ಮೆರವಣಿಗೆ ನಡೆಸಲಾಗು ವುದು. ಕಜ್ಜಾಯ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸುವರು.ಸಾವಿರಾರು ಸಂಖ್ಯೆಯಲ್ಲಿ ಜನರು ಹಸಗೂಲಿ ಅಲ್ಲಹಳ್ಳಿ ಪಾರ್ವತಾಂಬೆ ದೇವಿಯನ್ನು ನೋಡಲು ಆಗಮಿಸುತ್ತಾರೆ. ಮಂಗಳವಾರ ಮಧ್ಯಾಹ್ನ ಮತ್ತು ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ರಥ ಮೆರವಣಿಗೆ ಹೊರಡಲಿದ್ದು, ಬುಧವಾರ ಬೆಳಿಗ್ಗೆಯೂ ಗ್ರಾಮದಲ್ಲಿ ರಥ ಸಂಚರಿಸಲಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸುವರು.
ಮೂರು ದಿನಗಳ ಕಾಲ ನಡೆಯಲಿರುವ ಹಸಗೂಲಿ ಪಾರ್ವತಾಂಬೆ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವಂತೆ ಜಾತ್ರಾ ಸಮಿತಿಯವರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಜಾನುವಾರು ಜಾತ್ರೆ ಎಂದೇ ಪ್ರಸಿದ್ಧಿ:
ಹಸಗೂಲಿ ಜಾತ್ರೆ ಎಂದರೆ ತಾಲ್ಲೂಕಿನ ಎಲ್ಲ ಗ್ರಾಮಗಳಿಂದಲೂ ಜನರು ಬರುತ್ತಾರೆ. ಜಾನುವಾರುಗಳನ್ನು ಕರೆತಂದು ಪಂಜು ಹಚ್ಚಿ ಪೂಜೆ ಸಲ್ಲಿಸುತ್ತಾರೆ. ಜಾನುವಾರುಗಳಿಗೆ ಯಾವುದೇ ಕಾಯಿಲೆ ಬಂದರೂ ದೇವಿ ಗುಣ ಮಾಡುತ್ತಾಳೆ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ಜನರು ಜಾನುವಾರುಗಳನ್ನು ಕರೆತಂದು ಪೂಜೆ ಸಲ್ಲಿಸುವುದು ವಾಡಿಕೆ.
-ಮಹೇಂದ್ರ ಹಸಗೂಲಿ
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…