Andolana originals

ನ.೧೦ರಿಂದ ೧೨ರವರೆಗೆ ಹಸಗೂಲಿ ಪಾರ್ವತಾಂಬೆ ಜಾತ್ರೆ

ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ.

ನ.೧೦ರ ಸೋಮವಾರ ಹಸಗೂಲಿ ಗ್ರಾಮದಿಂದ ಪಾರ್ವತಾಂಬೆಯ ವಿಗ್ರಹ ಹೊತ್ತು ಮೂಲ ಸ್ಥಳ ಕಸಗಲಪುರಕ್ಕೆ ತೆರಳುವರು. ಈ ಸಂದರ್ಭದಲ್ಲಿ ಗ್ರಾಮದ ಸಾವಿರಾರು ಮಂದಿ ದೇವಿಯನ್ನು ಕಾಡಿನ ಮೂಲಸ್ಥಳಕ್ಕೆ ಕಳಿಸಿಕೊಡುವರು. ಮೂಲಸ್ಥಳದಲ್ಲಿ ರಾತ್ರಿಯಿಡೀ ಪೂಜೆ ಸಲ್ಲಿಸಿ, ನಂತರ ಮಂಗಳವಾರ ಬರಗಿ, ದೇಶಿಪುರ, ಆಲತ್ತೂರು ಶೆಟ್ಟಹಳ್ಳಿ ಮಾರ್ಗದಲ್ಲಿ ಗ್ರಾಮಕ್ಕೆ ದೇವಿಯ ವಿಗ್ರಹ ಹೊತ್ತು ತರಲಾಗುವುದು.

ಬರುವ ಮಾರ್ಗದುದ್ದಕ್ಕೂ ವಿವಿಧ ಗ್ರಾಮಗಳ ಜನರು ಪೂಜೆ ಸಲ್ಲಿಸುತ್ತಾರೆ. ನಂತರ ನ.೧೧ರ ಮಂಗಳವಾರ ಹಸಗೂಲಿ ಗ್ರಾಮದಲ್ಲಿ ಸೇವಂತಿಗೆ ಹೂವಿನಿಂದ ರಥವನ್ನು ಸಿಂಗರಿಸಿ ಬಾಯಿ ಬೀಗ ಹರಕೆ, ದೇವಿಯ ದರ್ಶನ, ಪೂಜೆ ನಡೆಸಲಾಗು ವುದು. ನಂತರ ದೇವಿಯನ್ನು ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮಧ್ಯಾಹ್ನ ೩ ಗಂಟೆಯ ನಂತರ ಮೆರವಣಿಗೆ ನಡೆಸಲಾಗು ವುದು. ಕಜ್ಜಾಯ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸುವರು.ಸಾವಿರಾರು ಸಂಖ್ಯೆಯಲ್ಲಿ ಜನರು ಹಸಗೂಲಿ ಅಲ್ಲಹಳ್ಳಿ ಪಾರ್ವತಾಂಬೆ ದೇವಿಯನ್ನು ನೋಡಲು ಆಗಮಿಸುತ್ತಾರೆ. ಮಂಗಳವಾರ ಮಧ್ಯಾಹ್ನ ಮತ್ತು ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ರಥ ಮೆರವಣಿಗೆ ಹೊರಡಲಿದ್ದು, ಬುಧವಾರ ಬೆಳಿಗ್ಗೆಯೂ ಗ್ರಾಮದಲ್ಲಿ ರಥ ಸಂಚರಿಸಲಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸುವರು.

ಮೂರು ದಿನಗಳ ಕಾಲ ನಡೆಯಲಿರುವ ಹಸಗೂಲಿ ಪಾರ್ವತಾಂಬೆ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವಂತೆ ಜಾತ್ರಾ ಸಮಿತಿಯವರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಜಾನುವಾರು ಜಾತ್ರೆ ಎಂದೇ ಪ್ರಸಿದ್ಧಿ: 

ಹಸಗೂಲಿ ಜಾತ್ರೆ ಎಂದರೆ ತಾಲ್ಲೂಕಿನ ಎಲ್ಲ ಗ್ರಾಮಗಳಿಂದಲೂ ಜನರು ಬರುತ್ತಾರೆ. ಜಾನುವಾರುಗಳನ್ನು ಕರೆತಂದು ಪಂಜು ಹಚ್ಚಿ ಪೂಜೆ ಸಲ್ಲಿಸುತ್ತಾರೆ. ಜಾನುವಾರುಗಳಿಗೆ ಯಾವುದೇ ಕಾಯಿಲೆ ಬಂದರೂ ದೇವಿ ಗುಣ ಮಾಡುತ್ತಾಳೆ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ಜನರು ಜಾನುವಾರುಗಳನ್ನು ಕರೆತಂದು ಪೂಜೆ ಸಲ್ಲಿಸುವುದು ವಾಡಿಕೆ.

-ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 mins ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

7 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

12 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

19 mins ago

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

12 hours ago