Andolana originals

11 ವೇದಿಕೆ, 508 ಕಾರ್ಯಕ್ರಮ, 6500 ಕಲಾವಿದರು; ಇದು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಶಿಷ್ಟ್ಯಗಳು

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಂಗೀತ ಪ್ರಿಯರ ಮನ ತಣಿಸುವ ಅರಮನೆ ವೇದಿಕೆ ಸೇರಿದಂತೆ ಹನ್ನೊಂದು ವೇದಿಕೆಗಳಲ್ಲಿ ೫೦೮ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ೬,೫೦೦ ಕಲಾವಿದರು ವಿವಿಧ ಕಲಾ ಪ್ರಕಾರಗಳಲ್ಲಿ ಸಂಗೀತದ ರಸದೌತಣ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ . ಮಹದೇವಪ್ಪ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತ ನಾಡಿದ ಅವರು, ಕಾರ್ಯಕ್ರಮಗಳ ಸಿದ್ಧತೆ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಅ. ೩ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಉಳಿದಂತೆ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸಂಜೆ ಅರಮನೆ ಮುಂಭಾಗ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅರಮನೆ ಮುಂಭಾಗ ಅ. ೩ರಿಂದ ೧೦ರವರೆಗೆ ಮತ್ತು ಉಳಿದ ಹತ್ತು ವೇದಿಕೆಗಳಲ್ಲಿ ಅ. ೧೧ರವರೆಗೆ ನಡೆಯಲಿದೆ. ಈ ಬಾರಿ ಸಂಗೀತ, ನೃತ್ಯ, ನಾಟಕ, ಪೌರಾಣಿಕ, ರಂಗಭೂಮಿ ಮೊದಲಾದ ಕಲಾ ಪ್ರಕಾರಗಳಿಗೆ ಅವಕಾಶ ಮಾಡಿ ಕೊಡುವ ಜತೆಗೆ ವಿಶೇಷ ಸಂಗೀತಕ್ಕೂ ಒತ್ತು ನೀಡಲಾಗಿದೆ. ೧೧ ವೇದಿಕೆಗಳಿಂದ ೫೦೮ ಕಲಾ ತಂಡಗಳಿಗೆ ಅವಕಾಶ ನೀಡಿದ್ದು, ೬,೫೦೦ ಕಲಾವಿದರಿಗೆ ಅವಕಾಶ ದೊರೆತಿದೆ ಎಂದರು. ಬನ್ನಿಮಂಟಪದಲ್ಲಿ ನಡೆಯುತ್ತಿದ್ದ ವೈಮಾನಿಕ ಪ್ರದರ್ಶನ ಈ ಬಾರಿ ಅನುಮಾನವಾಗಿದೆ.

ಮುಖ್ಯ ಮಂತ್ರಿ ಗಳು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಈವರೆಗೆ ಖಚಿತವಾಗಿಲ್ಲ ಎಂದು ತಿಳಿಸಿದರು. ಯುವ ದಸರಾದಲ್ಲಿ ಹೆಸರಾಂತ ಗಾಯಕರು ಬರುತ್ತಿ ರುವುದರಿಂದ ಭದ್ರತೆ, ಶೌಚಾಲಯ, ಕುಡಿಯುವ ನೀರು, ಬೀದಿ ದೀಪ, ಬಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ. ಈ ಬಗ್ಗೆ ಡಿಸಿ, ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ ಅಗತ್ಯ ವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ದಸರಾ ಜಂಬೂಸವಾರಿ ಮೆರವಣಿಗೆ ಮತ್ತು ಬನ್ನಿ ಮಂಟಪದ ಪಂಜಿನ ಕವಾಯತು ಟಿಕೆಟ್, ಗೋಲ್ಡ್ ಕಾರ್ಡ್ ಮಾರಾಟಕ್ಕೆ ಬಿಡಲಾಗಿದ್ದು, ನಾಲ್ಕು ದಿನಗಳಿಂದ ಟಿಕೆಟ್ ಮಾರಾಟವಾಗುತ್ತಿದೆ. ಜಂಬೂಸವಾರಿಗೆ ೨ ಸಾವಿರ ಸಾಮಾನ್ಯ ಟಿಕೆಟ್‌ಗಳು ಲಭ್ಯವಿದೆ ಎಂದರು. ಒಂದು ಸಾವಿರ ಗೋಲ್ಡ್ ಕಾರ್ಡ್ ದೊರೆಯುತ್ತವೆ ಎಂದು ವೆಬ್‌ಸೈಟ್‌ವೊಂದರಲ್ಲಿ ಮಾಹಿತಿ ಹಾಕಲಾಗಿದೆ ಎಂದು ತಿಳಿದುಬಂದಿದೆ. ಒಟಿಪಿ, ಇ-ಮೇಲ್ ಸಿಸ್ಟಂನಡಿ ಮಾರಾಟ ಮಾಡುತ್ತಿರುವುದರಿಂದ ಒಬ್ಬರೇ ಬೇಕಾ ಬಿಟ್ಟಿಯಾಗಿ ಖರೀದಿಸಲು ಸಾಧ್ಯವಾಗಿಲ್ಲ ಎಂದರು.

ಅ. ೩ ಮತ್ತು ೪ರಂದು ‘ವಾಹನ ಮುಕ್ತ ವಲಯ’ ಮೈಸೂರು: ದಸರಾ ಸಂದರ್ಭದಲ್ಲಿ ವಾಹನ ದಟ್ಟಣೆ ತಡೆಯುವ ಸಲುವಾಗಿ ಅರಸು ರಸ್ತೆ, ಅರಮನೆಯ ಸುತ್ತ ಅರ್ಧಭಾಗ ಅ. ೩ ಮತ್ತು ೪ರಂದು ಪ್ರಾಯೋಗಿ ಕವಾಗಿ ವಾಹನ ಮುಕ್ತ ವಲಯ ಮಾಡಲಾಗುವುದು. ಯಶಸ್ವಿಯಾದರೆ ದಸರಾದ ೧೦ ದಿನಗಳೂ ಇದೇ ಮಾದರಿ ಜಾರಿ ಮಾಡಲಾಗುತ್ತದೆ. ಅತೀ ಹೆಚ್ಚಿನ ಜನಸಂದಣಿ ಇರುವ ಅರಸು ರಸ್ತೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು. ಈ ಸಂಬಂಧ ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದ ಬಳಿಕ ಜಿಲ್ಲಾಡಳಿತ ಈ ತೀರ್ಮಾನವನ್ನು ಕೈಗೊಂಡಿದೆ ಎಂದು ಡಿಸಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದರು.

ಯುವ ದಸರಾ 10 ಸಾವಿರ ಟಿಕೆಟ್‌ ಮಾರಾಟ:
ಯುವ ದಸರಾ ಟಿಕೆಟ್ ಮೊತ್ತ ಜಾಸ್ತಿಯಾಗಿರುವ ಬಗ್ಗೆ ಭಿನ್ನ ಅಭಿಪ್ರಾಯ ಬಂದಿದ್ದರಿಂದ ೧,೫೦೦ ರೂ. ಮತ್ತು ೨,೫೦೦ ರೂ. ಮುಖಬೆಲೆಯ ಟಿಕೆಟ್‌ಗಳನ್ನು ಮಾರಾಟ ಮಾಡಲಾಗುವುದು. ಯುವ ದಸರಾಕ್ಕೆ ಹತ್ತು ಸಾವಿರ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದು, ೮೦ರಿಂದ ೯೦ ಸಾವಿರ ಜನರಿಗೆ ಮುಕ್ತ ಪ್ರವೇಶವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಮಾಹಿತಿ ನೀಡಿದರು.

ಈ ಬಾರಿ ಏರ್ ಶೋ ನಡೆಯುವುದು ಅನುಮಾನ. ಬದಲಿಗೆ ಆಕರ್ಷಕ ಡ್ರೋನ್ ಶೋ ಅನ್ನು ಆಯೋಜಿಸಲಾಗಿದೆ. ಹೋಟೆಲ್ ಮಾಲೀಕರು ಪ್ರವಾಸಿಗರಿಗೆ ಹೆಚ್ಚು ಶುಲ್ಕ ವಿಧಿಸಬಾರದು. ಈ ಸಂಬಂಧ ಹೋಟೆಲ್ ಮಾಲೀಕರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. -ಡಾ. ಎಚ್. ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ

 

andolana

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

33 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

1 hour ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago