Andolana originals

ಆತ ಸಾಯುವಂತೆ ಗುಂಡು ಹೊಡೆಯಬೇಕಿತ್ತು..

ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು

ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ… ಆತನ ಕಾಲಿಗೆ ಗುಂಡು ಹೊಡೆಯುವ ಬದಲಾಗಿ ಆತ ಸಾಯುವಂತಹ ಜಾಗಕ್ಕೆ ಗುಂಡು ಹೊಡೆಯಬೇಕಿತ್ತು… ಇದು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆ ಮಾಡಿದ ಆರೋಪಿ, ಸೈಕೋ ಕಿಲ್ಲರ್ ಕಾರ್ತಿಕ್‌ನ ತಾಯಿಯ ಆಕ್ರೋಶದ ನುಡಿಗಳು.

ಕಾರ್ತಿಕ್‌ನ ತಾಯಿ ಗಾಯತ್ರಿ ಅವರನ್ನು ಭೇಟಿ ಮಾಡಿದ ಪೊಲೀಸರು, ಆತನ ಕೃತ್ಯದ ಬಗ್ಗೆ ತಿಳಿಸಿದಾಗ, ಅವರು ಅಕ್ಷರಶಃ ನಡುಗಿಹೋದರು. ಒಬ್ಬ ಅಮಾಯಕ ಬಾಲಕಿಯನ್ನು ಇಷ್ಟು ಕ್ರೂರವಾಗಿ ಕೊಲೆ ಮಾಡುತ್ತಾನೆ ಎಂದು ನಾನು ಊಹಿಸಿಯೂ ಇರಲಿಲ್ಲ ಎಂದು ಮುಜುಗರದಿಂದಲೇ ಹೇಳಿದರು. ಆತ ಹಾದಿ ತಪ್ಪಿದ ಮಗ. ನಮ್ಮ ಮನೆಗೆ ಯಾವಾಗಲೋ ಬರುತ್ತಿದ್ದ. ಕೊಳ್ಳೇಗಾಲದಲ್ಲಿ ಬಸ್ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕೆಟ್ಟ ಚಟಗಳ ದಾಸನಾಗಿದ್ದ.

ಆತನ ಮೇಲೆ ನನಗೆ ಯಾವುದೇ ನಂಬಿಕೆ ಇರಲಿಲ್ಲ ಎಂದರು. ಆತ ಒಳ್ಳೆಯ ವ್ಯಕ್ತಿಯಾಗಿ ಬಾಳಲಿ ಎಂದು ಸಾಕಷ್ಟು ಯತ್ನ ಮಾಡಿದ್ದೆ. ಮದುವೆಯನ್ನೂ ಮಾಡಿದ್ದೆ. ಆದರೆ, ಆತನ ಪತ್ನಿ ಕೂಡ ಆತನನ್ನು ತೊರೆದು ಹೋಗಿದ್ದಾಳೆ. ಅದಕ್ಕೆ ಈತನ ಅಶಿಸ್ತು, ಅಸಹ್ಯ ನಡವಳಿಕೆಯೇ ಕಾರಣ. ಇದರಲ್ಲಿ ಆಕೆಯದ್ದು ಯಾವ ತಪ್ಪೂ ಇಲ್ಲ ಎಂದು ದುಃಖದಿಂದಲೇ ಅಲವತ್ತುಕೊಂಡರು. ಗುರುವಾರ ಬೆಳಿಗ್ಗೆ ಆತ ಈ ನೀಚ ಕೆಲಸ ಮಾಡಿದ್ದಾನೆ ಎಂದು ಗೊತ್ತಾಗುತ್ತಿದ್ದಂತೆ ನನ್ನ ಮನಸ್ಸು ಘಾಸಿಗೊಳಗಾಯಿತು. ನಾನು ತರಕಾರಿ ಮಾರಾಟ ಮಾಡಿಕೊಂಡು ಗೌರವದಿಂದ ಬದುಕು ಸಾಗಿಸುತ್ತಿದ್ದೇನೆ. ಇಂತಹ ಮಗನಿಂದ ನನಗೂ ಕೆಟ್ಟ ಹೆಸರು ಬರುವಂತಾಯಿತು ಎಂದು ಕಣ್ಣೀರಾದರು.

ಇದನ್ನು ಓದಿ : ಕೆಂಡಗಣ್ಣಿನ ಮೇಷ್ಟರ ತಾಯಿ ಕರುಳು

ಆತ ಈ ನೀಚಕೃತ್ಯ ಮಾಡಿದ್ದು ಬಹಳ ದೊಡ್ಡ ತಪ್ಪು. ಆತನನ್ನು ಕ್ಷಮಿಸಲೇಬಾರದು. ನೀವು, ಕಾಲಿಗೆ ಗುಂಡು ಹೊಡೆಯುವ ಬದಲಿಗೆ ಅವನನ್ನು ಸಾಯಿಸಿಯೇ ಬಿಡಬೇಕಿತ್ತು. ಸಮಾಜಕ್ಕೆ ಇಂತಹ ನೀಚರ ಅವಶ್ಯವಿಲ್ಲ. ಆತನ ಮುಖವನ್ನೂ ನೋಡುವ ಆಸೆ ನನಗಿಲ್ಲ ಎಂದು ನೊಂದು ನುಡಿದರು.

ಬಾಲಕಿ ಅಂತ್ಯಸಂಸ್ಕಾರ:  ದಸರಾದಲ್ಲಿ ಬಲೂನು ಮಾರಾಟ ಮಾಡಲುಪೋಷಕರೊಂದಿಗೆ ಮೈಸೂರಿಗೆ ಬಂದಿದ್ದಾಗ ದುಷ್ಕರ್ಮಿಯಿಂದ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿಯ ಶವದೊಂದಿಗೆ ಪೋಷಕರು, ಕಲಬುರ್ಗಿ ಜಿಲ್ಲೆಯ ಸ್ವಗ್ರಾಮಕ್ಕೆ ಗುರುವಾರ ಸಂಜೆ ತೆರಳಿದರು. ಶುಕ್ರವಾರ ಸಂಜೆ ವೇಳೆಗೆ ಅವರ ಸಂಪ್ರದಾಯದಂತೆ ಬಾಲಕಿಯ ಅಂತ್ಯಸಂಸ್ಕಾರ ನಡೆಸಿದ್ದಾರೆ. ಬಾಲಕಿಯ ಸಾವಿಗೆ ಗ್ರಾಮಸ್ಥರು ಮಮ್ಮಲ ಮರುಗಿದರು.

ಆರೋಪಿ ಟ್ರಾಮಾ ಕೇರ್ ಸೆಂಟರ್‌ಗೆ ಸ್ಥಳಾಂತರ:  ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವ ವೇಳೆ ಗುಂಡೇಟಿಗೆ ಒಳಗಾಗಿರುವ ಆರೋಪಿ ಕಾರ್ತಿಕ್‌ನನ್ನು, ಕೆ.ಆರ್. ಆಸ್ಪತ್ರೆಯಿಂದ ಮೇಟಗಳ್ಳಿಯಲ್ಲಿ ಇರುವ ಟ್ರಾಮಾ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಎಚ್.ಎಸ್.ದಿನೇಶ್ ಕುಮಾರ್

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago