Andolana originals

ಆತ ಸಾಯುವಂತೆ ಗುಂಡು ಹೊಡೆಯಬೇಕಿತ್ತು..

ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು

ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ… ಆತನ ಕಾಲಿಗೆ ಗುಂಡು ಹೊಡೆಯುವ ಬದಲಾಗಿ ಆತ ಸಾಯುವಂತಹ ಜಾಗಕ್ಕೆ ಗುಂಡು ಹೊಡೆಯಬೇಕಿತ್ತು… ಇದು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆ ಮಾಡಿದ ಆರೋಪಿ, ಸೈಕೋ ಕಿಲ್ಲರ್ ಕಾರ್ತಿಕ್‌ನ ತಾಯಿಯ ಆಕ್ರೋಶದ ನುಡಿಗಳು.

ಕಾರ್ತಿಕ್‌ನ ತಾಯಿ ಗಾಯತ್ರಿ ಅವರನ್ನು ಭೇಟಿ ಮಾಡಿದ ಪೊಲೀಸರು, ಆತನ ಕೃತ್ಯದ ಬಗ್ಗೆ ತಿಳಿಸಿದಾಗ, ಅವರು ಅಕ್ಷರಶಃ ನಡುಗಿಹೋದರು. ಒಬ್ಬ ಅಮಾಯಕ ಬಾಲಕಿಯನ್ನು ಇಷ್ಟು ಕ್ರೂರವಾಗಿ ಕೊಲೆ ಮಾಡುತ್ತಾನೆ ಎಂದು ನಾನು ಊಹಿಸಿಯೂ ಇರಲಿಲ್ಲ ಎಂದು ಮುಜುಗರದಿಂದಲೇ ಹೇಳಿದರು. ಆತ ಹಾದಿ ತಪ್ಪಿದ ಮಗ. ನಮ್ಮ ಮನೆಗೆ ಯಾವಾಗಲೋ ಬರುತ್ತಿದ್ದ. ಕೊಳ್ಳೇಗಾಲದಲ್ಲಿ ಬಸ್ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕೆಟ್ಟ ಚಟಗಳ ದಾಸನಾಗಿದ್ದ.

ಆತನ ಮೇಲೆ ನನಗೆ ಯಾವುದೇ ನಂಬಿಕೆ ಇರಲಿಲ್ಲ ಎಂದರು. ಆತ ಒಳ್ಳೆಯ ವ್ಯಕ್ತಿಯಾಗಿ ಬಾಳಲಿ ಎಂದು ಸಾಕಷ್ಟು ಯತ್ನ ಮಾಡಿದ್ದೆ. ಮದುವೆಯನ್ನೂ ಮಾಡಿದ್ದೆ. ಆದರೆ, ಆತನ ಪತ್ನಿ ಕೂಡ ಆತನನ್ನು ತೊರೆದು ಹೋಗಿದ್ದಾಳೆ. ಅದಕ್ಕೆ ಈತನ ಅಶಿಸ್ತು, ಅಸಹ್ಯ ನಡವಳಿಕೆಯೇ ಕಾರಣ. ಇದರಲ್ಲಿ ಆಕೆಯದ್ದು ಯಾವ ತಪ್ಪೂ ಇಲ್ಲ ಎಂದು ದುಃಖದಿಂದಲೇ ಅಲವತ್ತುಕೊಂಡರು. ಗುರುವಾರ ಬೆಳಿಗ್ಗೆ ಆತ ಈ ನೀಚ ಕೆಲಸ ಮಾಡಿದ್ದಾನೆ ಎಂದು ಗೊತ್ತಾಗುತ್ತಿದ್ದಂತೆ ನನ್ನ ಮನಸ್ಸು ಘಾಸಿಗೊಳಗಾಯಿತು. ನಾನು ತರಕಾರಿ ಮಾರಾಟ ಮಾಡಿಕೊಂಡು ಗೌರವದಿಂದ ಬದುಕು ಸಾಗಿಸುತ್ತಿದ್ದೇನೆ. ಇಂತಹ ಮಗನಿಂದ ನನಗೂ ಕೆಟ್ಟ ಹೆಸರು ಬರುವಂತಾಯಿತು ಎಂದು ಕಣ್ಣೀರಾದರು.

ಇದನ್ನು ಓದಿ : ಕೆಂಡಗಣ್ಣಿನ ಮೇಷ್ಟರ ತಾಯಿ ಕರುಳು

ಆತ ಈ ನೀಚಕೃತ್ಯ ಮಾಡಿದ್ದು ಬಹಳ ದೊಡ್ಡ ತಪ್ಪು. ಆತನನ್ನು ಕ್ಷಮಿಸಲೇಬಾರದು. ನೀವು, ಕಾಲಿಗೆ ಗುಂಡು ಹೊಡೆಯುವ ಬದಲಿಗೆ ಅವನನ್ನು ಸಾಯಿಸಿಯೇ ಬಿಡಬೇಕಿತ್ತು. ಸಮಾಜಕ್ಕೆ ಇಂತಹ ನೀಚರ ಅವಶ್ಯವಿಲ್ಲ. ಆತನ ಮುಖವನ್ನೂ ನೋಡುವ ಆಸೆ ನನಗಿಲ್ಲ ಎಂದು ನೊಂದು ನುಡಿದರು.

ಬಾಲಕಿ ಅಂತ್ಯಸಂಸ್ಕಾರ:  ದಸರಾದಲ್ಲಿ ಬಲೂನು ಮಾರಾಟ ಮಾಡಲುಪೋಷಕರೊಂದಿಗೆ ಮೈಸೂರಿಗೆ ಬಂದಿದ್ದಾಗ ದುಷ್ಕರ್ಮಿಯಿಂದ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿಯ ಶವದೊಂದಿಗೆ ಪೋಷಕರು, ಕಲಬುರ್ಗಿ ಜಿಲ್ಲೆಯ ಸ್ವಗ್ರಾಮಕ್ಕೆ ಗುರುವಾರ ಸಂಜೆ ತೆರಳಿದರು. ಶುಕ್ರವಾರ ಸಂಜೆ ವೇಳೆಗೆ ಅವರ ಸಂಪ್ರದಾಯದಂತೆ ಬಾಲಕಿಯ ಅಂತ್ಯಸಂಸ್ಕಾರ ನಡೆಸಿದ್ದಾರೆ. ಬಾಲಕಿಯ ಸಾವಿಗೆ ಗ್ರಾಮಸ್ಥರು ಮಮ್ಮಲ ಮರುಗಿದರು.

ಆರೋಪಿ ಟ್ರಾಮಾ ಕೇರ್ ಸೆಂಟರ್‌ಗೆ ಸ್ಥಳಾಂತರ:  ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವ ವೇಳೆ ಗುಂಡೇಟಿಗೆ ಒಳಗಾಗಿರುವ ಆರೋಪಿ ಕಾರ್ತಿಕ್‌ನನ್ನು, ಕೆ.ಆರ್. ಆಸ್ಪತ್ರೆಯಿಂದ ಮೇಟಗಳ್ಳಿಯಲ್ಲಿ ಇರುವ ಟ್ರಾಮಾ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಎಚ್.ಎಸ್.ದಿನೇಶ್ ಕುಮಾರ್

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

22 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago