Andolana originals

‘ಕಸದ ಆಗರವಾಗಿರುವ ಆರೋಗ್ಯ ಕೇಂದ್ರದ ಆವರಣ’

ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ 

ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ ಇದೆ ಎಂಬ ಜ್ಞಾನವೂ ಇಲ್ಲದಂತೆ ಜನರು ಕಸವನ್ನು ತಂದು ಬಿಸಾಡುತ್ತಿದ್ದಾರೆ. ಕಸವನ್ನು ವಿಲೇವಾರಿ ಮಾಡಬೇಕಾದ ನಗರಪಾಲಿಕೆ ಕೂಡ ಮೌನಕ್ಕೆ ಶರಣಾಗಿದೆ.

ನಗರದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಆಸ್ಪತ್ರೆ ಪಕ್ಕದ ದೃಶ್ಯವಿದು. ಪ್ರತೀ ದಿನ ಬೆಳಗಾದಂತೆ ಇಲ್ಲಿ ಕಸದ ರಾಶಿ ರಸ್ತೆಯನ್ನೆಲ್ಲಾ ಆವರಿಸುತ್ತದೆ. ಇದು ಇಂದು ನಿನ್ನೆಯದಲ್ಲಿ, ಪ್ರತಿನಿತ್ಯ ಇಲ್ಲಿ ಇದೇ ಪರಿಸ್ಥಿತಿ. ಈ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡೇ ಓಡಾಡಬೇಕು.

ಸ್ವಚ್ಛತೆಯಲ್ಲಿ ಮೈಸೂರು ದೇಶದ ಟಾಪ್ ನಗರಗಳ ಪೈಕಿ ಗುರುತಿಸಿಕೊಂಡಿದೆ. ಆದರೆ ಈ ಕಸದ ರಾಶಿ ಸ್ವಚ್ಛತಾ ವ್ಯವಸ್ಥೆಯನ್ನು ವ್ಯಂಗ್ಯ ಮಾಡುವಂತಿದೆ. ಇದಕ್ಕೆ ಸುತ್ತಮುತ್ತಲಿನ ಸಭ್ಯರೆನಿಸಿಕೊಂಡವರ ಅನಾಗರಿಕತನವೂ ಕಾರಣವಾಗಿದೆ. ಮನೆ ಮುಂದೆ ಕಸ ಸಂಗ್ರಹಿಸುವ ವಾಹನ ಬಂದರೂ ಬಳಸಿಕೊಳ್ಳದ ಜನರು ತಮ್ಮ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ರಸ್ತೆಗೆ ತಂದು ಸುರಿಯುತ್ತಿದ್ದಾರೆ. ಕಸ ಹಾಕಿದವರ ಫೋಟೋ ಸೆರೆಹಿಡಿದು ಪೊಲೀಸ್ ಇಲಾಖೆಗಾಗಲಿ ಅಥವಾ ನಗರ ಪಾಲಿಕೆಗಾಗಲಿ ಮಾಹಿತಿ ನೀಡಿದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ಫಲಕವನ್ನೂ ಅಳವಡಿಸಲಾಗಿದೆ. ಇದಕ್ಕೂ ಕ್ಯಾರೆ ಎನ್ನದ ಅಕ್ಕಪಕ್ಕದ ಮಂದಿ ಕಸ ಸುರಿಯುವುದನ್ನು ಮಾತ್ರ ನಿಲ್ಲಿಸಿಲ್ಲ.

ಪಕ್ಕದಲ್ಲೇ ೧೫೦ ವರ್ಷಗಳ ಇತಿಹಾಸವಿರುವ ಅಕ್ಕಮ್ಮಣ್ಣಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆಸ್ಪತ್ರೆ ಸಿಬ್ಬಂದಿಯೂ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಜಾಗದಲ್ಲಿ ಸಿಸಿ ಕ್ಯಾಮೆರಾ ವನ್ನೂ ಅಳವಡಿಸಲಾಗಿದೆ. ಹೀಗಿದ್ದೂ ಇದುವರೆವಿಗೂ ಯಾರಿಗೂ ದಂಡ ವಿಧಿಸಿದ ಉದಾಹರಣೆ ಮಾತ್ರ ಇಲ್ಲ.

ರಸ್ತೆಗೆ ಹೊಂದಿಕೊಂಡಂತೆ ಉದ್ಯಾನವನವೂ ಇದೆ. ಪ್ರತಿದಿನ ಇಲ್ಲಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ನೂರಾರು ಮಂದಿ ವಾಯುವಿಹಾರಕ್ಕೆ ಬರುತ್ತಾರೆ. ಉದ್ಯಾನವನದಲ್ಲಿ ಹೂವಿನ ಗಿಡಗಳನ್ನು ಬೆಳೆಸಿ ಅಂದ ಹೆಚ್ಚಿಸುವತ್ತಲೂ ಗಮನ ಕೊಡಲಾಗಿದೆ. ಆದರೆ, ಈ ರಸ್ತೆಗೆ ಮಾತ್ರ ಕಸದ ಹಾವಳಿ, ದುರ್ವಾಸನೆಯಿಂದ ಮುಕ್ತಿ ಸಿಕ್ಕಿಲ್ಲ. ಪ್ರತಿನಿತ್ಯ ಸ್ಥಳೀಯರಿಗೆ ಕಸದ ರಾಶಿಯಿಂದ ಮುಜುಗರವಾಗುತ್ತಿದೆ. ಜನರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿದೆ.

ಈ ಸ್ಥಳ ಬಿಡಾಡಿ ದನಗಳು ಮತ್ತು ಬೀದಿ ನಾಯಿಗಳ ತಾಣ ಮಾರ್ಪಟ್ಟಿದೆ. ಕಸದ ರಾಶಿಯ ನಡುವೆ ಸಿಗುವ ತ್ಯಾಜ್ಯವನ್ನು ತಿಂದು ಅವು ಅಲ್ಲಿಯೇ ಜಾಂಡಾ ಹೂಡಿರುತ್ತವೆ. ಇನ್ನಾದರೂ ಈ ಸ್ಥಳವನ್ನು ಕಸಮುಕ್ತವಾಗಿಸಲು ಪಾಲಿಕೆ ಅಧಿಕಾರಿಗಳಾಗಲಿ, ಜನ ಪ್ರತಿನಿಧಿಗಳಾಗಲಿ ಒತ್ತು ನೀಡಬೇಕು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಜನರನ್ನು ಯಾಮಾರಿಸುತ್ತಿರುವ ನಗರಪಾಲಿಕೆ ! ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಆಸ್ಪತ್ರೆ ಪಕ್ಕದ ಕಾಂಪೌಂಡ್‌ನಲ್ಲಿ ನಗರಪಾಲಿಕೆ ಪೋಸ್ಟರ್ ಒಂದನ್ನು ಅಳವಡಿಸಿದೆ. ನೀವು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಇದ್ದೀರಿ. ಇಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂದು ಅಲ್ಲಿ ಬರೆಯಲಾಗಿದೆ. ಅಲ್ಲಿನ ವಿದ್ಯುತ್ ಕಂಬದಲ್ಲಿ ಸಿಸಿ ಕ್ಯಾಮೆರಾವನ್ನೂ ಅಳವಡಿಸಲಾಗಿದೆ. ಆದರೆ, ಅಳವಡಿಸಿದಂದಿನಿಂದ ಇಲ್ಲಿಯವರೆಗೂ ಕ್ಯಾಮೆರಾ ಮಾತ್ರ ಚಾಲೂ ಆಗಿಲ್ಲ. ಹೇಗಿದೆ ನಮ್ಮ ನಗರಪಾಲಿಕೆ ಕಾರ್ಯವೈಖರಿ….!

” ಅಕ್ಕಮಣ್ಣಿ ಆಸ್ಪತ್ರೆ ಸುತ್ತ ಕಸ ಸುರಿದಿರುವುದು ನನ್ನ ಗಮನಕ್ಕೆ ಬಂದಿದೆ. ಶನಿವಾರ ಬೆಳಿಗ್ಗೆ ಕಸವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ ಕಸ ಸುರಿಯುವವರನ್ನೂ ಗಮನಿಸಿ ದಂಡ ವಿಧಿಸಲು ಮುಂದಾಗುತ್ತೇವೆ.”

-ಡಾ.ವೆಂಕಟೇಶ್, ನಗರಪಾಲಿಕೆ ಆರೋಗ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

2 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

2 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

2 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

3 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 hours ago