ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ
ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ ಇದೆ ಎಂಬ ಜ್ಞಾನವೂ ಇಲ್ಲದಂತೆ ಜನರು ಕಸವನ್ನು ತಂದು ಬಿಸಾಡುತ್ತಿದ್ದಾರೆ. ಕಸವನ್ನು ವಿಲೇವಾರಿ ಮಾಡಬೇಕಾದ ನಗರಪಾಲಿಕೆ ಕೂಡ ಮೌನಕ್ಕೆ ಶರಣಾಗಿದೆ.
ನಗರದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಆಸ್ಪತ್ರೆ ಪಕ್ಕದ ದೃಶ್ಯವಿದು. ಪ್ರತೀ ದಿನ ಬೆಳಗಾದಂತೆ ಇಲ್ಲಿ ಕಸದ ರಾಶಿ ರಸ್ತೆಯನ್ನೆಲ್ಲಾ ಆವರಿಸುತ್ತದೆ. ಇದು ಇಂದು ನಿನ್ನೆಯದಲ್ಲಿ, ಪ್ರತಿನಿತ್ಯ ಇಲ್ಲಿ ಇದೇ ಪರಿಸ್ಥಿತಿ. ಈ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡೇ ಓಡಾಡಬೇಕು.
ಸ್ವಚ್ಛತೆಯಲ್ಲಿ ಮೈಸೂರು ದೇಶದ ಟಾಪ್ ನಗರಗಳ ಪೈಕಿ ಗುರುತಿಸಿಕೊಂಡಿದೆ. ಆದರೆ ಈ ಕಸದ ರಾಶಿ ಸ್ವಚ್ಛತಾ ವ್ಯವಸ್ಥೆಯನ್ನು ವ್ಯಂಗ್ಯ ಮಾಡುವಂತಿದೆ. ಇದಕ್ಕೆ ಸುತ್ತಮುತ್ತಲಿನ ಸಭ್ಯರೆನಿಸಿಕೊಂಡವರ ಅನಾಗರಿಕತನವೂ ಕಾರಣವಾಗಿದೆ. ಮನೆ ಮುಂದೆ ಕಸ ಸಂಗ್ರಹಿಸುವ ವಾಹನ ಬಂದರೂ ಬಳಸಿಕೊಳ್ಳದ ಜನರು ತಮ್ಮ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ರಸ್ತೆಗೆ ತಂದು ಸುರಿಯುತ್ತಿದ್ದಾರೆ. ಕಸ ಹಾಕಿದವರ ಫೋಟೋ ಸೆರೆಹಿಡಿದು ಪೊಲೀಸ್ ಇಲಾಖೆಗಾಗಲಿ ಅಥವಾ ನಗರ ಪಾಲಿಕೆಗಾಗಲಿ ಮಾಹಿತಿ ನೀಡಿದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ಫಲಕವನ್ನೂ ಅಳವಡಿಸಲಾಗಿದೆ. ಇದಕ್ಕೂ ಕ್ಯಾರೆ ಎನ್ನದ ಅಕ್ಕಪಕ್ಕದ ಮಂದಿ ಕಸ ಸುರಿಯುವುದನ್ನು ಮಾತ್ರ ನಿಲ್ಲಿಸಿಲ್ಲ.
ಪಕ್ಕದಲ್ಲೇ ೧೫೦ ವರ್ಷಗಳ ಇತಿಹಾಸವಿರುವ ಅಕ್ಕಮ್ಮಣ್ಣಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆಸ್ಪತ್ರೆ ಸಿಬ್ಬಂದಿಯೂ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಜಾಗದಲ್ಲಿ ಸಿಸಿ ಕ್ಯಾಮೆರಾ ವನ್ನೂ ಅಳವಡಿಸಲಾಗಿದೆ. ಹೀಗಿದ್ದೂ ಇದುವರೆವಿಗೂ ಯಾರಿಗೂ ದಂಡ ವಿಧಿಸಿದ ಉದಾಹರಣೆ ಮಾತ್ರ ಇಲ್ಲ.
ರಸ್ತೆಗೆ ಹೊಂದಿಕೊಂಡಂತೆ ಉದ್ಯಾನವನವೂ ಇದೆ. ಪ್ರತಿದಿನ ಇಲ್ಲಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ನೂರಾರು ಮಂದಿ ವಾಯುವಿಹಾರಕ್ಕೆ ಬರುತ್ತಾರೆ. ಉದ್ಯಾನವನದಲ್ಲಿ ಹೂವಿನ ಗಿಡಗಳನ್ನು ಬೆಳೆಸಿ ಅಂದ ಹೆಚ್ಚಿಸುವತ್ತಲೂ ಗಮನ ಕೊಡಲಾಗಿದೆ. ಆದರೆ, ಈ ರಸ್ತೆಗೆ ಮಾತ್ರ ಕಸದ ಹಾವಳಿ, ದುರ್ವಾಸನೆಯಿಂದ ಮುಕ್ತಿ ಸಿಕ್ಕಿಲ್ಲ. ಪ್ರತಿನಿತ್ಯ ಸ್ಥಳೀಯರಿಗೆ ಕಸದ ರಾಶಿಯಿಂದ ಮುಜುಗರವಾಗುತ್ತಿದೆ. ಜನರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿದೆ.
ಈ ಸ್ಥಳ ಬಿಡಾಡಿ ದನಗಳು ಮತ್ತು ಬೀದಿ ನಾಯಿಗಳ ತಾಣ ಮಾರ್ಪಟ್ಟಿದೆ. ಕಸದ ರಾಶಿಯ ನಡುವೆ ಸಿಗುವ ತ್ಯಾಜ್ಯವನ್ನು ತಿಂದು ಅವು ಅಲ್ಲಿಯೇ ಜಾಂಡಾ ಹೂಡಿರುತ್ತವೆ. ಇನ್ನಾದರೂ ಈ ಸ್ಥಳವನ್ನು ಕಸಮುಕ್ತವಾಗಿಸಲು ಪಾಲಿಕೆ ಅಧಿಕಾರಿಗಳಾಗಲಿ, ಜನ ಪ್ರತಿನಿಧಿಗಳಾಗಲಿ ಒತ್ತು ನೀಡಬೇಕು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.
ಜನರನ್ನು ಯಾಮಾರಿಸುತ್ತಿರುವ ನಗರಪಾಲಿಕೆ ! ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಆಸ್ಪತ್ರೆ ಪಕ್ಕದ ಕಾಂಪೌಂಡ್ನಲ್ಲಿ ನಗರಪಾಲಿಕೆ ಪೋಸ್ಟರ್ ಒಂದನ್ನು ಅಳವಡಿಸಿದೆ. ನೀವು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಇದ್ದೀರಿ. ಇಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂದು ಅಲ್ಲಿ ಬರೆಯಲಾಗಿದೆ. ಅಲ್ಲಿನ ವಿದ್ಯುತ್ ಕಂಬದಲ್ಲಿ ಸಿಸಿ ಕ್ಯಾಮೆರಾವನ್ನೂ ಅಳವಡಿಸಲಾಗಿದೆ. ಆದರೆ, ಅಳವಡಿಸಿದಂದಿನಿಂದ ಇಲ್ಲಿಯವರೆಗೂ ಕ್ಯಾಮೆರಾ ಮಾತ್ರ ಚಾಲೂ ಆಗಿಲ್ಲ. ಹೇಗಿದೆ ನಮ್ಮ ನಗರಪಾಲಿಕೆ ಕಾರ್ಯವೈಖರಿ….!
” ಅಕ್ಕಮಣ್ಣಿ ಆಸ್ಪತ್ರೆ ಸುತ್ತ ಕಸ ಸುರಿದಿರುವುದು ನನ್ನ ಗಮನಕ್ಕೆ ಬಂದಿದೆ. ಶನಿವಾರ ಬೆಳಿಗ್ಗೆ ಕಸವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ ಕಸ ಸುರಿಯುವವರನ್ನೂ ಗಮನಿಸಿ ದಂಡ ವಿಧಿಸಲು ಮುಂದಾಗುತ್ತೇವೆ.”
-ಡಾ.ವೆಂಕಟೇಶ್, ನಗರಪಾಲಿಕೆ ಆರೋಗ್ಯಾಧಿಕಾರಿ
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…