Andolana originals

‘ಕಸದ ಆಗರವಾಗಿರುವ ಆರೋಗ್ಯ ಕೇಂದ್ರದ ಆವರಣ’

ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ 

ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ ಇದೆ ಎಂಬ ಜ್ಞಾನವೂ ಇಲ್ಲದಂತೆ ಜನರು ಕಸವನ್ನು ತಂದು ಬಿಸಾಡುತ್ತಿದ್ದಾರೆ. ಕಸವನ್ನು ವಿಲೇವಾರಿ ಮಾಡಬೇಕಾದ ನಗರಪಾಲಿಕೆ ಕೂಡ ಮೌನಕ್ಕೆ ಶರಣಾಗಿದೆ.

ನಗರದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಆಸ್ಪತ್ರೆ ಪಕ್ಕದ ದೃಶ್ಯವಿದು. ಪ್ರತೀ ದಿನ ಬೆಳಗಾದಂತೆ ಇಲ್ಲಿ ಕಸದ ರಾಶಿ ರಸ್ತೆಯನ್ನೆಲ್ಲಾ ಆವರಿಸುತ್ತದೆ. ಇದು ಇಂದು ನಿನ್ನೆಯದಲ್ಲಿ, ಪ್ರತಿನಿತ್ಯ ಇಲ್ಲಿ ಇದೇ ಪರಿಸ್ಥಿತಿ. ಈ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡೇ ಓಡಾಡಬೇಕು.

ಸ್ವಚ್ಛತೆಯಲ್ಲಿ ಮೈಸೂರು ದೇಶದ ಟಾಪ್ ನಗರಗಳ ಪೈಕಿ ಗುರುತಿಸಿಕೊಂಡಿದೆ. ಆದರೆ ಈ ಕಸದ ರಾಶಿ ಸ್ವಚ್ಛತಾ ವ್ಯವಸ್ಥೆಯನ್ನು ವ್ಯಂಗ್ಯ ಮಾಡುವಂತಿದೆ. ಇದಕ್ಕೆ ಸುತ್ತಮುತ್ತಲಿನ ಸಭ್ಯರೆನಿಸಿಕೊಂಡವರ ಅನಾಗರಿಕತನವೂ ಕಾರಣವಾಗಿದೆ. ಮನೆ ಮುಂದೆ ಕಸ ಸಂಗ್ರಹಿಸುವ ವಾಹನ ಬಂದರೂ ಬಳಸಿಕೊಳ್ಳದ ಜನರು ತಮ್ಮ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ರಸ್ತೆಗೆ ತಂದು ಸುರಿಯುತ್ತಿದ್ದಾರೆ. ಕಸ ಹಾಕಿದವರ ಫೋಟೋ ಸೆರೆಹಿಡಿದು ಪೊಲೀಸ್ ಇಲಾಖೆಗಾಗಲಿ ಅಥವಾ ನಗರ ಪಾಲಿಕೆಗಾಗಲಿ ಮಾಹಿತಿ ನೀಡಿದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ಫಲಕವನ್ನೂ ಅಳವಡಿಸಲಾಗಿದೆ. ಇದಕ್ಕೂ ಕ್ಯಾರೆ ಎನ್ನದ ಅಕ್ಕಪಕ್ಕದ ಮಂದಿ ಕಸ ಸುರಿಯುವುದನ್ನು ಮಾತ್ರ ನಿಲ್ಲಿಸಿಲ್ಲ.

ಪಕ್ಕದಲ್ಲೇ ೧೫೦ ವರ್ಷಗಳ ಇತಿಹಾಸವಿರುವ ಅಕ್ಕಮ್ಮಣ್ಣಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆಸ್ಪತ್ರೆ ಸಿಬ್ಬಂದಿಯೂ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಜಾಗದಲ್ಲಿ ಸಿಸಿ ಕ್ಯಾಮೆರಾ ವನ್ನೂ ಅಳವಡಿಸಲಾಗಿದೆ. ಹೀಗಿದ್ದೂ ಇದುವರೆವಿಗೂ ಯಾರಿಗೂ ದಂಡ ವಿಧಿಸಿದ ಉದಾಹರಣೆ ಮಾತ್ರ ಇಲ್ಲ.

ರಸ್ತೆಗೆ ಹೊಂದಿಕೊಂಡಂತೆ ಉದ್ಯಾನವನವೂ ಇದೆ. ಪ್ರತಿದಿನ ಇಲ್ಲಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ನೂರಾರು ಮಂದಿ ವಾಯುವಿಹಾರಕ್ಕೆ ಬರುತ್ತಾರೆ. ಉದ್ಯಾನವನದಲ್ಲಿ ಹೂವಿನ ಗಿಡಗಳನ್ನು ಬೆಳೆಸಿ ಅಂದ ಹೆಚ್ಚಿಸುವತ್ತಲೂ ಗಮನ ಕೊಡಲಾಗಿದೆ. ಆದರೆ, ಈ ರಸ್ತೆಗೆ ಮಾತ್ರ ಕಸದ ಹಾವಳಿ, ದುರ್ವಾಸನೆಯಿಂದ ಮುಕ್ತಿ ಸಿಕ್ಕಿಲ್ಲ. ಪ್ರತಿನಿತ್ಯ ಸ್ಥಳೀಯರಿಗೆ ಕಸದ ರಾಶಿಯಿಂದ ಮುಜುಗರವಾಗುತ್ತಿದೆ. ಜನರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿದೆ.

ಈ ಸ್ಥಳ ಬಿಡಾಡಿ ದನಗಳು ಮತ್ತು ಬೀದಿ ನಾಯಿಗಳ ತಾಣ ಮಾರ್ಪಟ್ಟಿದೆ. ಕಸದ ರಾಶಿಯ ನಡುವೆ ಸಿಗುವ ತ್ಯಾಜ್ಯವನ್ನು ತಿಂದು ಅವು ಅಲ್ಲಿಯೇ ಜಾಂಡಾ ಹೂಡಿರುತ್ತವೆ. ಇನ್ನಾದರೂ ಈ ಸ್ಥಳವನ್ನು ಕಸಮುಕ್ತವಾಗಿಸಲು ಪಾಲಿಕೆ ಅಧಿಕಾರಿಗಳಾಗಲಿ, ಜನ ಪ್ರತಿನಿಧಿಗಳಾಗಲಿ ಒತ್ತು ನೀಡಬೇಕು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಜನರನ್ನು ಯಾಮಾರಿಸುತ್ತಿರುವ ನಗರಪಾಲಿಕೆ ! ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಆಸ್ಪತ್ರೆ ಪಕ್ಕದ ಕಾಂಪೌಂಡ್‌ನಲ್ಲಿ ನಗರಪಾಲಿಕೆ ಪೋಸ್ಟರ್ ಒಂದನ್ನು ಅಳವಡಿಸಿದೆ. ನೀವು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಇದ್ದೀರಿ. ಇಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂದು ಅಲ್ಲಿ ಬರೆಯಲಾಗಿದೆ. ಅಲ್ಲಿನ ವಿದ್ಯುತ್ ಕಂಬದಲ್ಲಿ ಸಿಸಿ ಕ್ಯಾಮೆರಾವನ್ನೂ ಅಳವಡಿಸಲಾಗಿದೆ. ಆದರೆ, ಅಳವಡಿಸಿದಂದಿನಿಂದ ಇಲ್ಲಿಯವರೆಗೂ ಕ್ಯಾಮೆರಾ ಮಾತ್ರ ಚಾಲೂ ಆಗಿಲ್ಲ. ಹೇಗಿದೆ ನಮ್ಮ ನಗರಪಾಲಿಕೆ ಕಾರ್ಯವೈಖರಿ….!

” ಅಕ್ಕಮಣ್ಣಿ ಆಸ್ಪತ್ರೆ ಸುತ್ತ ಕಸ ಸುರಿದಿರುವುದು ನನ್ನ ಗಮನಕ್ಕೆ ಬಂದಿದೆ. ಶನಿವಾರ ಬೆಳಿಗ್ಗೆ ಕಸವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ ಕಸ ಸುರಿಯುವವರನ್ನೂ ಗಮನಿಸಿ ದಂಡ ವಿಧಿಸಲು ಮುಂದಾಗುತ್ತೇವೆ.”

-ಡಾ.ವೆಂಕಟೇಶ್, ನಗರಪಾಲಿಕೆ ಆರೋಗ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

31 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

33 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

36 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

38 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

50 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

54 mins ago