ನಾರಾಯಣ ಆಸ್ಪತ್ರೆ ವತಿಯಿಂದ ಇಸಿಜಿ, ಎಕೋ ಇತ್ಯಾದಿ ಪರೀಕ್ಷೆ
ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಸದಸ್ಯರಿಗೆ ನಾರಾಯಣ ಆಸ್ಪತ್ರೆ ವತಿಯಿಂದ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು.
ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವಕಟ್ಟಡದಲ್ಲಿ ಆಯೋಜಿ ಸಿದ್ದ ಶಿಬಿರವನ್ನು ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕಾಡಿನಿಂದ ನಾಡಿಗೆ ಆಗಮಿಸಿರುವ ಮಾವುತರು, ಕಾವಾಡಿ ಗಳು ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸಿರುವ ನಾರಾಯಣ ಆಸ್ಪತ್ರೆ ಕಾರ್ಯ ಶ್ಲಾಘನೀಯವಾಗಿದೆ. ಬಿಪಿ, ಮಧುಮೇಹ ಸೇರಿದಂತೆ ಎಲ್ಲ ರೀತಿಯ ತಪಾಸಣೆಗಳಿಗೂ ವ್ಯವಸ್ಥೆ ಮಾಡಿದ್ದಾರೆ. ಕಾಡಿನಲ್ಲಿ ಸಿಗುವ ಗಿಡಮೂಲಿಕೆಗಳಿಂದ ಔಷಧಿ ಪಡೆಯುವ ಮಾವುತರು, ನಗರ ಪ್ರದೇಶದ ವೈದ್ಯಕೀಯ ಚಿಕಿತ್ಸೆಗೂ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಬೆಟದೂ ಮಾತನಾಡಿ, ಕಾಡನ್ನು ರಕ್ಷಣೆ ಮಾಡುವ ಜನರ ಆರೋಗ್ಯ ಕಾಪಾಡಲು ನಮ್ಮದೊಂದು ಸಣ್ಣ ಸೇವೆಯಾಗಿದೆ ಎಂದರು.
ಬಳಿಕ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಬಿಪಿ, ಮಧುಮೇಹ, ಇಸಿಜಿ, ಎಕೋ, ಬಿಎಂಡಿ, ಮೂಳೆ ಸಾಂದ್ರತೆ ಮತ್ತಿತರ ಆರೋಗ್ಯ ಸಮಸ್ಯೆಗಳ ಬಗ್ಗೆ ಪರೀಕ್ಷೆ ಮಾಡಲಾಯಿತು. ಡಾ.ರಾಜ, ಡಾ.ಶ್ವೇತಾ ಮತ್ತು ತಂಡದವರು ಪರೀಕ್ಷೆ ನಡೆಸಿದರೆ, ಟಿಂಗ್ ವಿಭಾಗದ ಮ್ಯಾನೇಜರ್ ಡಾ.ಸಂತು ಕುಮಾರ್, ಡಿ.ಎಂ.ಪದೀಪ್ ನೇತೃತ್ವವಹಿಸಿದ್ದರು.
ಮೈಸೂರಿನ ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಟ್ಟಡದಲ್ಲಿ ಮಾವು ತರು, ಕಾವಾಡಿಗಳಿಗೆ ಆಯೋಜಿಸಿದ್ದ ತಪಾಸಣಾ ಶಿಬಿರವನ್ನು ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ಉದ್ಘಾಟಿಸಿದರು. ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಬೆಟದೂರ್, ಮಾರ್ಕೆಟಿಂಗ್ ವಿಭಾಗದ ಮ್ಯಾನೇಜರ್ ಡಾ.ಸಂತುಕುಮಾರ್, ಡಿ.ಎಂ.ಪ್ರದೀಪ್ ಹಾಜರಿದ್ದರು.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…