Andolana originals

ಮಾವುತರು, ಕಾವಾಡಿಗಳಿಗೆ ಆರೋಗ್ಯ ತಪಾಸಣೆ

ನಾರಾಯಣ ಆಸ್ಪತ್ರೆ ವತಿಯಿಂದ ಇಸಿಜಿ, ಎಕೋ ಇತ್ಯಾದಿ ಪರೀಕ್ಷೆ

ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಸದಸ್ಯರಿಗೆ ನಾರಾಯಣ ಆಸ್ಪತ್ರೆ ವತಿಯಿಂದ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು.

ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವಕಟ್ಟಡದಲ್ಲಿ ಆಯೋಜಿ ಸಿದ್ದ ಶಿಬಿರವನ್ನು ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಾಡಿನಿಂದ ನಾಡಿಗೆ ಆಗಮಿಸಿರುವ ಮಾವುತರು, ಕಾವಾಡಿ ಗಳು ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸಿರುವ ನಾರಾಯಣ ಆಸ್ಪತ್ರೆ ಕಾರ್ಯ ಶ್ಲಾಘನೀಯವಾಗಿದೆ. ಬಿಪಿ, ಮಧುಮೇಹ ಸೇರಿದಂತೆ ಎಲ್ಲ ರೀತಿಯ ತಪಾಸಣೆಗಳಿಗೂ ವ್ಯವಸ್ಥೆ ಮಾಡಿದ್ದಾರೆ. ಕಾಡಿನಲ್ಲಿ ಸಿಗುವ ಗಿಡಮೂಲಿಕೆಗಳಿಂದ ಔಷಧಿ ಪಡೆಯುವ ಮಾವುತರು, ನಗರ ಪ್ರದೇಶದ ವೈದ್ಯಕೀಯ ಚಿಕಿತ್ಸೆಗೂ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಬೆಟದೂ‌ ಮಾತನಾಡಿ, ಕಾಡನ್ನು ರಕ್ಷಣೆ ಮಾಡುವ ಜನರ ಆರೋಗ್ಯ ಕಾಪಾಡಲು ನಮ್ಮದೊಂದು ಸಣ್ಣ ಸೇವೆಯಾಗಿದೆ ಎಂದರು.

ಬಳಿಕ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಬಿಪಿ, ಮಧುಮೇಹ, ಇಸಿಜಿ, ಎಕೋ, ಬಿಎಂಡಿ, ಮೂಳೆ ಸಾಂದ್ರತೆ ಮತ್ತಿತರ ಆರೋಗ್ಯ ಸಮಸ್ಯೆಗಳ ಬಗ್ಗೆ ಪರೀಕ್ಷೆ ಮಾಡಲಾಯಿತು. ಡಾ.ರಾಜ, ಡಾ.ಶ್ವೇತಾ ಮತ್ತು ತಂಡದವರು ಪರೀಕ್ಷೆ ನಡೆಸಿದರೆ, ಟಿಂಗ್ ವಿಭಾಗದ ಮ್ಯಾನೇಜರ್ ಡಾ.ಸಂತು ಕುಮಾರ್, ಡಿ.ಎಂ.ಪದೀಪ್ ನೇತೃತ್ವವಹಿಸಿದ್ದರು.

ಮೈಸೂರಿನ ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಟ್ಟಡದಲ್ಲಿ ಮಾವು ತರು, ಕಾವಾಡಿಗಳಿಗೆ ಆಯೋಜಿಸಿದ್ದ ತಪಾಸಣಾ ಶಿಬಿರವನ್ನು ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ಉದ್ಘಾಟಿಸಿದರು. ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಬೆಟದೂರ್, ಮಾರ್ಕೆಟಿಂಗ್ ವಿಭಾಗದ ಮ್ಯಾನೇಜರ್ ಡಾ.ಸಂತುಕುಮಾರ್, ಡಿ.ಎಂ.ಪ್ರದೀಪ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

28 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

58 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

1 hour ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

1 hour ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago