Andolana originals

ಮಾವುತರು, ಕಾವಾಡಿಗಳಿಗೆ ಆರೋಗ್ಯ ತಪಾಸಣೆ

ನಾರಾಯಣ ಆಸ್ಪತ್ರೆ ವತಿಯಿಂದ ಇಸಿಜಿ, ಎಕೋ ಇತ್ಯಾದಿ ಪರೀಕ್ಷೆ

ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಸದಸ್ಯರಿಗೆ ನಾರಾಯಣ ಆಸ್ಪತ್ರೆ ವತಿಯಿಂದ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು.

ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವಕಟ್ಟಡದಲ್ಲಿ ಆಯೋಜಿ ಸಿದ್ದ ಶಿಬಿರವನ್ನು ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಾಡಿನಿಂದ ನಾಡಿಗೆ ಆಗಮಿಸಿರುವ ಮಾವುತರು, ಕಾವಾಡಿ ಗಳು ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸಿರುವ ನಾರಾಯಣ ಆಸ್ಪತ್ರೆ ಕಾರ್ಯ ಶ್ಲಾಘನೀಯವಾಗಿದೆ. ಬಿಪಿ, ಮಧುಮೇಹ ಸೇರಿದಂತೆ ಎಲ್ಲ ರೀತಿಯ ತಪಾಸಣೆಗಳಿಗೂ ವ್ಯವಸ್ಥೆ ಮಾಡಿದ್ದಾರೆ. ಕಾಡಿನಲ್ಲಿ ಸಿಗುವ ಗಿಡಮೂಲಿಕೆಗಳಿಂದ ಔಷಧಿ ಪಡೆಯುವ ಮಾವುತರು, ನಗರ ಪ್ರದೇಶದ ವೈದ್ಯಕೀಯ ಚಿಕಿತ್ಸೆಗೂ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಬೆಟದೂ‌ ಮಾತನಾಡಿ, ಕಾಡನ್ನು ರಕ್ಷಣೆ ಮಾಡುವ ಜನರ ಆರೋಗ್ಯ ಕಾಪಾಡಲು ನಮ್ಮದೊಂದು ಸಣ್ಣ ಸೇವೆಯಾಗಿದೆ ಎಂದರು.

ಬಳಿಕ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಬಿಪಿ, ಮಧುಮೇಹ, ಇಸಿಜಿ, ಎಕೋ, ಬಿಎಂಡಿ, ಮೂಳೆ ಸಾಂದ್ರತೆ ಮತ್ತಿತರ ಆರೋಗ್ಯ ಸಮಸ್ಯೆಗಳ ಬಗ್ಗೆ ಪರೀಕ್ಷೆ ಮಾಡಲಾಯಿತು. ಡಾ.ರಾಜ, ಡಾ.ಶ್ವೇತಾ ಮತ್ತು ತಂಡದವರು ಪರೀಕ್ಷೆ ನಡೆಸಿದರೆ, ಟಿಂಗ್ ವಿಭಾಗದ ಮ್ಯಾನೇಜರ್ ಡಾ.ಸಂತು ಕುಮಾರ್, ಡಿ.ಎಂ.ಪದೀಪ್ ನೇತೃತ್ವವಹಿಸಿದ್ದರು.

ಮೈಸೂರಿನ ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಟ್ಟಡದಲ್ಲಿ ಮಾವು ತರು, ಕಾವಾಡಿಗಳಿಗೆ ಆಯೋಜಿಸಿದ್ದ ತಪಾಸಣಾ ಶಿಬಿರವನ್ನು ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ಉದ್ಘಾಟಿಸಿದರು. ನಾರಾಯಣ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಬೆಟದೂರ್, ಮಾರ್ಕೆಟಿಂಗ್ ವಿಭಾಗದ ಮ್ಯಾನೇಜರ್ ಡಾ.ಸಂತುಕುಮಾರ್, ಡಿ.ಎಂ.ಪ್ರದೀಪ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago