Andolana originals

ಮನೆ ಬಾಗಿಲಿದೆ ಬರಲಿದೆ ಆರೋಗ್ಯ ಸೇವೆ

ಜ.15ರಂದು ಮೈಸೂರಿನಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

ಎಚ್. ಎಸ್. ದಿನೇಶ್‌ಕುಮಾರ್
ಮೈಸೂರು: ಆಧುನಿಕ ಜೀವನ ಶೈಲಿ ಸೇರಿದಂತೆ ಅನೇಕ ಕಾರಣಗಳಿಂದ ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ರಕ್ತದೊತ್ತಡ ಮತ್ತು ಮಧುಮೇಹ ಹಲವು ಕಾಯಿಲೆಗೆ ಮೂಲವಾಗುತ್ತಿವೆ. ಹೆಚ್ಚಿನ ಜನರು ತಮಗೆ ಮಧುಮೇಹ, ರಕ್ತದೊತ್ತಡ ಇದ್ದರೂ ತಪಾಸಣೆ ಮಾಡಿಸಿಕೊಳ್ಳುತ್ತಿಲ್ಲ. ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ. ಇದಕ್ಕಾಗಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ಜಾರಿಗೊಳಿಸಿದ್ದು,ಜ. ೧೫ರಿಂದ ಮೈಸೂರು ಜಿಲ್ಲೆಯಲ್ಲಿ ಸೇವೆ ಆರಂಭವಾಗಲಿದೆ.

ಈ ಮೊದಲು ರಕ್ತದೊತ್ತಡ, ಮಧುಮೇಹ ಅಂದರೆ ಅದು ಶ್ರೀಮಂತರ ಕಾಯಿಲೆ ಎಂದೇ ಹೇಳುತ್ತಿದ್ದರು. ಆದರೀಗ ಜಾತಿ, ಮತ, ಧರ್ಮವೆನ್ನದೆ, ವಯಸ್ಸಿನ ಮಿತಿಯೂ ಇಲ್ಲದೇ ಎಲ್ಲರಲ್ಲಿಯೂ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಕ್ಯಾನ್ಸರ್ ಕೂಡ ಜನರನ್ನು ಬಾಽಸುತ್ತಿದೆ. ಮೊದಲ ಹಂತದಲ್ಲಿ ಈ ಕಾಯಿಲೆ ಗೊತ್ತಾಗುವುದೇ ಇಲ್ಲ.

ಆಧುನಿಕ ಜೀವನ ಶೈಲಿ, ಅತಿಯಾದ ಒತ್ತಡ, ನಿಯಮಿತ ವ್ಯಾಯಾಮ, ಉತ್ತಮ ಆಹಾರ ಪದ್ದತಿಯನ್ನು ಅನುಸರಿಸದೇ ಇರುವುದರಿಂದ ಹೆಚ್ಚಿನ ಜನರಿಗೆ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಕಾಯಿಲೆಗಳು ಬರಲು ಕಾರಣವಾಗತ್ತಿದೆ. ಇದನ್ನು ಆರಂಭಿಕ ಹಂತದಲ್ಲಿಯೇ ತಪಾ ಸಣೆ ಮಾಡಿಸಿಕೊಂಡಲ್ಲಿ ಚಿಕಿತ್ಸೆ ಆರಂಭಿಸ ಬಹುದು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ‘ಗೃಹ ಆರೋಗ್ಯ’ ಯೋಜನೆಗೆ ಮೈಸೂರಿನಲ್ಲಿ ಜ. ೧೫ ರಂದು ಚಾಲನೆ ನೀಡುತ್ತಿದೆ.

ಏನಿದು ಗೃಹ ಆರೋಗ್ಯ ಯೋಜನೆ?
ಜನರ ಆರೋಗ್ಯದ ಬಗ್ಗೆ ಖಾಳಜಿ ಹೊಂದುವ ಹಾಗೂ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಯೋಜನೆಯೇ ‘ಗೃಹ ಆರೋಗ್ಯ’ ಯೋಜನೆ. ಗೃಹ ಆರೋಗ್ಯ ಯೋಜನೆ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಜನರ ಆರೋಗ್ಯವನ್ನು ಪರಿಶೀಲಿಸುತ್ತಾರೆ.

ವಿಶೇಷವಾಗಿ ೩೦ ವರ್ಷ ದಾಟಿದ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ತಪಾಸಣೆ ಮಾಡುತ್ತಾರೆ. ಪ್ರಮುಖವಾಗಿ ಮಧು ಮೇಹ, ರಕ್ತದೊತ್ತಡ, ಕ್ಯಾನ್ಸರ್ ಇದೆಯೇ ಎಂಬುದನ್ನು ತಪಾಸಣೆ ನಡೆಸಿ, ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.

ಔಷಧವೂ ಉಚಿತ
ಕಾಯಿಲೆ ದೃಢಪಟ್ಟಲ್ಲಿ ಔಷಽಗಳನ್ನು ಮನೆ ಬಾಗಿಲಿಗೆ ಹೋಗಿ ತಲುಪಿಸಲಿದ್ದಾರೆ. ಇನ್ನು ಔಷಧಗಳನ್ನು ಉಚಿತವಾಗಿ ಪ್ರತಿ ತಿಂಗಳು ನಿರಂತರವಾಗಿ ಮನೆಗೆ ಕಳುಹಿಸುವ ವ್ಯವಸ್ಥೆಯನ್ನು ಯೋಜನೆಯಡಿ ಮಾಡಲಾಗುತ್ತಿದೆ. ಈ ಯೋಜನೆ ಮೂಲಕ ಕಾಯಿಲೆ ಇರುವವರು ಸರ್ಕಾರಿ ಆಸ್ಪತ್ರೆಗೆ ಬಂದು ಔಷಽ ತಗೆದುಕೊಂಡು ಹೋಗಬಹುದಾಗಿದೆ. ತೆಗೆದು ಕೊಂಡು ಹೋಗಲಿಕ್ಕಾಗದೇ ಇದ್ದವರಿಗೆ, ಮನೆಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ತಲುಪಿಸುವ ಕೆಲಸವನ್ನು ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago