Andolana originals

ಮನೆ ಬಾಗಿಲಿದೆ ಬರಲಿದೆ ಆರೋಗ್ಯ ಸೇವೆ

ಜ.15ರಂದು ಮೈಸೂರಿನಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

ಎಚ್. ಎಸ್. ದಿನೇಶ್‌ಕುಮಾರ್
ಮೈಸೂರು: ಆಧುನಿಕ ಜೀವನ ಶೈಲಿ ಸೇರಿದಂತೆ ಅನೇಕ ಕಾರಣಗಳಿಂದ ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ರಕ್ತದೊತ್ತಡ ಮತ್ತು ಮಧುಮೇಹ ಹಲವು ಕಾಯಿಲೆಗೆ ಮೂಲವಾಗುತ್ತಿವೆ. ಹೆಚ್ಚಿನ ಜನರು ತಮಗೆ ಮಧುಮೇಹ, ರಕ್ತದೊತ್ತಡ ಇದ್ದರೂ ತಪಾಸಣೆ ಮಾಡಿಸಿಕೊಳ್ಳುತ್ತಿಲ್ಲ. ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ. ಇದಕ್ಕಾಗಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ಜಾರಿಗೊಳಿಸಿದ್ದು,ಜ. ೧೫ರಿಂದ ಮೈಸೂರು ಜಿಲ್ಲೆಯಲ್ಲಿ ಸೇವೆ ಆರಂಭವಾಗಲಿದೆ.

ಈ ಮೊದಲು ರಕ್ತದೊತ್ತಡ, ಮಧುಮೇಹ ಅಂದರೆ ಅದು ಶ್ರೀಮಂತರ ಕಾಯಿಲೆ ಎಂದೇ ಹೇಳುತ್ತಿದ್ದರು. ಆದರೀಗ ಜಾತಿ, ಮತ, ಧರ್ಮವೆನ್ನದೆ, ವಯಸ್ಸಿನ ಮಿತಿಯೂ ಇಲ್ಲದೇ ಎಲ್ಲರಲ್ಲಿಯೂ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಕ್ಯಾನ್ಸರ್ ಕೂಡ ಜನರನ್ನು ಬಾಽಸುತ್ತಿದೆ. ಮೊದಲ ಹಂತದಲ್ಲಿ ಈ ಕಾಯಿಲೆ ಗೊತ್ತಾಗುವುದೇ ಇಲ್ಲ.

ಆಧುನಿಕ ಜೀವನ ಶೈಲಿ, ಅತಿಯಾದ ಒತ್ತಡ, ನಿಯಮಿತ ವ್ಯಾಯಾಮ, ಉತ್ತಮ ಆಹಾರ ಪದ್ದತಿಯನ್ನು ಅನುಸರಿಸದೇ ಇರುವುದರಿಂದ ಹೆಚ್ಚಿನ ಜನರಿಗೆ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಕಾಯಿಲೆಗಳು ಬರಲು ಕಾರಣವಾಗತ್ತಿದೆ. ಇದನ್ನು ಆರಂಭಿಕ ಹಂತದಲ್ಲಿಯೇ ತಪಾ ಸಣೆ ಮಾಡಿಸಿಕೊಂಡಲ್ಲಿ ಚಿಕಿತ್ಸೆ ಆರಂಭಿಸ ಬಹುದು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ‘ಗೃಹ ಆರೋಗ್ಯ’ ಯೋಜನೆಗೆ ಮೈಸೂರಿನಲ್ಲಿ ಜ. ೧೫ ರಂದು ಚಾಲನೆ ನೀಡುತ್ತಿದೆ.

ಏನಿದು ಗೃಹ ಆರೋಗ್ಯ ಯೋಜನೆ?
ಜನರ ಆರೋಗ್ಯದ ಬಗ್ಗೆ ಖಾಳಜಿ ಹೊಂದುವ ಹಾಗೂ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಯೋಜನೆಯೇ ‘ಗೃಹ ಆರೋಗ್ಯ’ ಯೋಜನೆ. ಗೃಹ ಆರೋಗ್ಯ ಯೋಜನೆ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಜನರ ಆರೋಗ್ಯವನ್ನು ಪರಿಶೀಲಿಸುತ್ತಾರೆ.

ವಿಶೇಷವಾಗಿ ೩೦ ವರ್ಷ ದಾಟಿದ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ತಪಾಸಣೆ ಮಾಡುತ್ತಾರೆ. ಪ್ರಮುಖವಾಗಿ ಮಧು ಮೇಹ, ರಕ್ತದೊತ್ತಡ, ಕ್ಯಾನ್ಸರ್ ಇದೆಯೇ ಎಂಬುದನ್ನು ತಪಾಸಣೆ ನಡೆಸಿ, ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.

ಔಷಧವೂ ಉಚಿತ
ಕಾಯಿಲೆ ದೃಢಪಟ್ಟಲ್ಲಿ ಔಷಽಗಳನ್ನು ಮನೆ ಬಾಗಿಲಿಗೆ ಹೋಗಿ ತಲುಪಿಸಲಿದ್ದಾರೆ. ಇನ್ನು ಔಷಧಗಳನ್ನು ಉಚಿತವಾಗಿ ಪ್ರತಿ ತಿಂಗಳು ನಿರಂತರವಾಗಿ ಮನೆಗೆ ಕಳುಹಿಸುವ ವ್ಯವಸ್ಥೆಯನ್ನು ಯೋಜನೆಯಡಿ ಮಾಡಲಾಗುತ್ತಿದೆ. ಈ ಯೋಜನೆ ಮೂಲಕ ಕಾಯಿಲೆ ಇರುವವರು ಸರ್ಕಾರಿ ಆಸ್ಪತ್ರೆಗೆ ಬಂದು ಔಷಽ ತಗೆದುಕೊಂಡು ಹೋಗಬಹುದಾಗಿದೆ. ತೆಗೆದು ಕೊಂಡು ಹೋಗಲಿಕ್ಕಾಗದೇ ಇದ್ದವರಿಗೆ, ಮನೆಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ತಲುಪಿಸುವ ಕೆಲಸವನ್ನು ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago