Andolana originals

ಕೊಡಗು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ಆತಂಕ..!

  • ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ
  • ಮುನ್ನೆಚ್ಚೆರಿಕೆ ವಹಿಸಲು ಸಲಹೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾ ಗಿದೆ,ಜೊತೆಗೆ ಮಳೆಯೂ ಆಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದ್ದು, ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಕಳೆದ ತಿಂಗಳು ವಿಪರೀತ ಬಿಸಿಲು ಕಾಣಿಸಿಕೊಂಡಿತ್ತು. ಇದೀಗ ವಾತಾವರಣ ಬದಲಾಗಿದ್ದು, ಬಿಸಿಲಿನೊಂದಿಗೆ ಸಂಜೆ ಸಮಯದಲ್ಲಿ ಮಳೆಯಾಗುತ್ತಿದೆ. ಮಳೆಯ ನೀರು ಅಲ್ಲಲ್ಲಿ ಸಂಗ್ರಹವಾಗುವುದರಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಜಿಲ್ಲೆಯಾದ್ಯಂತ ಲಾರ್ವಾ ಉತ್ಪತ್ತಿ ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸೊಳ್ಳೆಗಳ ಸಂತತಿ ಹೆಚ್ಚಾಗದಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತದೆ.

ಕಳೆದ ವರ್ಷ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಡೆಂಗ್ಯು ಪ್ರಕರಣಗಳು ಪತ್ತೆಯಾಗಿದ್ದವು. ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿದ್ದವು. ಆದರೆ ಈ ಬಾರಿ ಈ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಂದೇ ಒಂದು ಡೆಂಗ್ಯು ಪ್ರಕರಣ ವರದಿಯಾಗಿದೆ.

ಬೇಸಿಗೆ ಬಿಸಿಲಿನ ಝಳದಿಂದ ಬಳಲಿಕೆ ಉಂಟಾಗುವುದು ಮಾತ್ರವಲ್ಲದೆ, ನಿಧಾನವಾಗಿ ಕಾಯಿಲೆಗಳೂ ಬರಲಾರಂಭಿಸಿವೆ. ಸೂಕ್ತ ರೀತಿಯಲ್ಲಿ ಮುಂಜಾಗ್ರತೆ ವಹಿಸದೇ ಹೋದರೆ ಖಾಯಿಲೆ ಮತ್ತಷ್ಟು ಹರಡುವ ಸಾಧ್ಯತೆ ಇದೆ.

ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 492 ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಇವರೆಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದೇ ತಾವೇ ಸ್ವಯಂ ಆರೈಕೆ ಮಾಡಿಕೊಂಡು, ಔಷಧ ಅಂಗಡಿಗಳಲ್ಲಿ ತಾವೇ ಮಾತ್ರೆ ಖರೀದಿಸಿ ಬಳಸಿ ಸುಧಾರಿಸಿಕೊಂಡವರೂ ಬಹಳ ಮಂದಿ ಇದ್ದಾರೆ. ಹೀಗಾಗಿ ಬೇಸಿಗೆಯ ಸಂದರ್ಭ ಆಹಾರ, ಪರಿಸರ ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಆಹಾರ ಕಲುಷಿತಗೊಳ್ಳುವುದೂ ಅಧಿಕ. ಬೇಸಿಗೆ ವೇಳೆ ಸೊಳ್ಳೆಗಳು ಮಾತ್ರವಲ್ಲ ನೊಣಗಳೂ ಅಧಿಕ ಸಂಖ್ಯೆಯಲ್ಲಿ ವೃದ್ಧಿಯಾಗುತ್ತವೆ. ರೋಗವಾಹಕಗಳೆಂದೇ ಗುರುತಿಸಲಾಗುವ ಇವುಗಳು ಚರಂಡಿ ಸೇರಿದಂತೆ ಕಲುಷಿತ ನೀರು ಮತ್ತು ಕಲುಷಿತ ವಸ್ತುಗಳ ಮೇಲೆ ಕುಳಿತು ನಂತರ ಆಹಾರ ಪದಾರ್ಥಗಳ ಮೇಲೂ ಕುಳಿತು ರೋಗಾಣುಗಳನ್ನು ಅತ್ಯಂತ ಸುಲಭವಾಗಿ ಹರಡುತ್ತವೆ. ಹಾಗಾಗಿ, ಈ ವೇಳೆ ಅತಿ ಎಚ್ಚರ ವಹಿಸುವುದು ಒಳಿತು ಎಂಬುದು ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆಯಾಗಿದೆ.

ಬೇಸಿಗೆಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ . . .
ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು. ತೆರೆದಿಟ್ಟ ಆಹಾರ ಪದಾರ್ಥಗಳನ್ನು ಸೇವಿಸಬಾರದು. ಆಹಾರ ಪದಾರ್ಥಗಳನ್ನು ಜಿರಲೆ, ನೊಣಗಳಿಂದ ರಕ್ಷಿಸುವ ಸಲುವಾಗಿ ಮುಚ್ಚಿಡಬೇಕು. ವಾಂತಿ, ಭೇದಿ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಬಿಸಿ ಇರುವ ಆಹಾರವನ್ನೇ ಸೇವಿಸಬೇಕು. ಮೀನು, ಮಾಂಸವನ್ನು ಸಮರ್ಪಕವಾಗಿ ಬೇಯಿಸಿ ತಿನ್ನಬೇಕು. ತಾಜಾ, ಮೀನು, ಮಾಂಸಾಹಾರವನ್ನೇ ಸೇವಿಸಬೇಕು. ಸೊಳ್ಳೆ, ನೊಣಗಳಿಂದ ರಕ್ಷಿಸಿಕೊಳ್ಳಬೇಕು. ಎಳನೀರು, ಒಆರ್‌ಎಸ್, ತಾಜಾ ಹಣ್ಣಿನ ರಸ, ಮಜ್ಜಿಗೆಯನ್ನು ಸೇವಿಸಬೇಕು. ವಾಂತಿ ಭೇದಿ ಕಾಣಿಸಿಕೊಂಡಾಗ ಮೂಢನಂಬಿಕೆಗಳನ್ನು ಅನುಸರಿಸದೆ ವೈದ್ಯರ ಸಲಹೆ ಪಡೆಯಬೇಕು.

ಬೇಸಿಗೆಯಲ್ಲಿ ವಾಂತಿ ಭೇದಿಯಂತಹ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅಲ್ಲದೆ ಈಗ ಬಿಸಿಲಿನ ಜತೆ ಮಳೆಯೂ ಬೀಳುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತದೆ. ಹೀಗಾಗಿ ಆರೋಗ್ಯ ಇಲಾಖೆ ಡೆಂಗ್ಯು ಮತ್ತಿತರ ರೋಗಗಳು ಹರಡದಂತೆ ಎಚ್ಚರ ವಹಿಸುತ್ತಿದೆ. ಜನರು ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮನೆ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು.

– ಡಾ. ಕೆ. ಎಂ. ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago