ಕಾರು, ಬೈಕ್ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು
ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ.
ಇದಕ್ಕೆ ತಾಜಾ ಉದಾಹರಣೆ ಎಂಬಂತೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೧ರ ವ್ಯಾಪ್ತಿಯಲ್ಲಿನ ರಾಮಾನುಜ ರಸ್ತೆಯ ೧೭ನೇ ಅಡ್ಡರಸ್ತೆಯಲ್ಲಿ ನಿತ್ಯ ಕಸ ವಿಲೇವಾರಿ ಮಾಡದಿರುವುದರಿಂದ ಇಲ್ಲಿನ ರಸ್ತೆ ಬದಿಯಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಬಿಸಿಲು- ಮಳೆ ಯಿಂದ ಕೊಳೆತು ಕಸ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿ ಮಾರ್ಪಾಡಾಗಿರುವ ಈ ಕಸದ ರಾಶಿಯಿಂದ ಇಲ್ಲಿನ ಸ್ಥಳೀಯ ನಿವಾಸಿಗಳು ದುರ್ನಾ ತವನ್ನು ಸಹಿಸಲಾರದೆ ಮೂಗು ಮುಚ್ಚಿಕೊಂಡು ಓಡಾಡುತ್ತಾ ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ. ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಕಾಯಿಲೆ ವಾಸಿ ಮಾಡಿಕೊಳ್ಳಲು ರೋಗಿಗಳು ಇಲ್ಲಿಗೆ ಬರಲು ಹಿಂದೆ ಮುಂದೆ ನೋಡುವಂತಾಗಿದೆ.
ಎಚ್ಚರಿಕೆ ಫಲಕಕ್ಕೂ ಡೋಂಟ್ ಕೇರ್: ಪೌರಕಾರ್ಮಿಕರು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿ, ಕಸ ಹಾಕದಂತೆ ಹಲವು ಬಾರಿ ಎಚ್ಚರಿಕೆ ಫಲಕ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯ ಒಂದು ಕಡೆ ಪ್ರವೇಶ ಮಾಡಿ ಕಸವನ್ನು ಎಸೆದು ಮತ್ತೊಂದು ಕಡೆಯಿಂದ ತೆರಳುತ್ತಾರೆ. ರಸ್ತೆಯ ಎರಡೂ ಬದಿಗಳಲ್ಲಿ ಕಸ ಎಸೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೌರಕಾರ್ಮಿಕರನ್ನೇ ಭದ್ರತಾ ಸಿಬ್ಬಂದಿಯಾಗಿ ನೇಮಿಸಬೇಕಿದೆ.
ರಾತ್ರಿ ವೇಳೆ ಕಸ ಎಸೆಯುವ ಜನರು: ರಾತ್ರಿ ವೇಳೆ ಕಾರು, ಬೈಕ್ಗಳಲ್ಲಿ ಬರುವ ಜನರು ವಾಹನ ಚಾಲನೆಯಲ್ಲಿಟ್ಟುಕೊಂಡು ಕಸವನ್ನು ಆರೋಗ್ಯ ಕೇಂದ್ರದ ಕಾಂಪೌಂಡ್ ಬಳಿಯೇ ಎಸೆದು ಹೋಗುತ್ತಾರೆ. ಇದರಿಂದ ಕಸ ಎಸೆಯುವವರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಕಸದ ಸಮಸ್ಯೆ ಉಲ್ಬಣಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
” ರಾಮಾನುಜ ರಸ್ತೆಯ ೧೭ನೇ ಕ್ರಾಸ್ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಹೊಂದಿಕೊಂಡಂತೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ಕಸ ಎಸೆದು ಹೋಗುತ್ತಿದ್ದಾರೆ. ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಸ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು.”
-ಪ್ರೊ.ಪಂಡಿತಾರಾಧ್ಯ, ಸ್ಥಳೀಯರು
” ಸಾರ್ವಜನಿಕರಲ್ಲಿ ಮೊದಲು ಸ್ವಚ್ಛತೆಯ ಪ್ರಜ್ಞೆ ಮೂಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ-ಒಣ ಕಸ ವಿಂಗಡಿಸಿ ನೀಡುವ ಮೂಲಕ, ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಎಲ್ಲವನ್ನೂ ಪಾಲಿಕೆಯೇ ಮಾಡಬೇಕು ಎನ್ನಬಾರದು. ಸಾರ್ವಜನಿಕರು ಸಹಕಾರ ನೀಡಬೇಕು.”
-ಆನಂದ್, ಸ್ಥಳೀಯರು
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…