Andolana originals

ರಾಮಾನುಜ ರಸ್ತೆ 17ನೇ ಕ್ರಾಸ್‌ನಲ್ಲಿ ಕಸದ ರಾಶಿ

ಕಾರು, ಬೈಕ್‌ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು 

ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ.

ಇದಕ್ಕೆ ತಾಜಾ ಉದಾಹರಣೆ ಎಂಬಂತೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೧ರ ವ್ಯಾಪ್ತಿಯಲ್ಲಿನ ರಾಮಾನುಜ ರಸ್ತೆಯ ೧೭ನೇ ಅಡ್ಡರಸ್ತೆಯಲ್ಲಿ ನಿತ್ಯ ಕಸ ವಿಲೇವಾರಿ ಮಾಡದಿರುವುದರಿಂದ ಇಲ್ಲಿನ ರಸ್ತೆ ಬದಿಯಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಬಿಸಿಲು- ಮಳೆ ಯಿಂದ ಕೊಳೆತು ಕಸ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿ ಮಾರ್ಪಾಡಾಗಿರುವ ಈ ಕಸದ ರಾಶಿಯಿಂದ ಇಲ್ಲಿನ ಸ್ಥಳೀಯ ನಿವಾಸಿಗಳು ದುರ್ನಾ ತವನ್ನು ಸಹಿಸಲಾರದೆ ಮೂಗು ಮುಚ್ಚಿಕೊಂಡು ಓಡಾಡುತ್ತಾ ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ. ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಕಾಯಿಲೆ ವಾಸಿ ಮಾಡಿಕೊಳ್ಳಲು ರೋಗಿಗಳು ಇಲ್ಲಿಗೆ ಬರಲು ಹಿಂದೆ ಮುಂದೆ ನೋಡುವಂತಾಗಿದೆ.

ಎಚ್ಚರಿಕೆ ಫಲಕಕ್ಕೂ ಡೋಂಟ್ ಕೇರ್: ಪೌರಕಾರ್ಮಿಕರು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿ, ಕಸ ಹಾಕದಂತೆ ಹಲವು ಬಾರಿ ಎಚ್ಚರಿಕೆ ಫಲಕ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯ ಒಂದು ಕಡೆ ಪ್ರವೇಶ ಮಾಡಿ ಕಸವನ್ನು ಎಸೆದು ಮತ್ತೊಂದು ಕಡೆಯಿಂದ ತೆರಳುತ್ತಾರೆ. ರಸ್ತೆಯ ಎರಡೂ ಬದಿಗಳಲ್ಲಿ ಕಸ ಎಸೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೌರಕಾರ್ಮಿಕರನ್ನೇ ಭದ್ರತಾ ಸಿಬ್ಬಂದಿಯಾಗಿ ನೇಮಿಸಬೇಕಿದೆ.

ರಾತ್ರಿ ವೇಳೆ ಕಸ ಎಸೆಯುವ ಜನರು: ರಾತ್ರಿ ವೇಳೆ ಕಾರು, ಬೈಕ್‌ಗಳಲ್ಲಿ ಬರುವ ಜನರು ವಾಹನ ಚಾಲನೆಯಲ್ಲಿಟ್ಟುಕೊಂಡು ಕಸವನ್ನು ಆರೋಗ್ಯ ಕೇಂದ್ರದ ಕಾಂಪೌಂಡ್ ಬಳಿಯೇ ಎಸೆದು ಹೋಗುತ್ತಾರೆ. ಇದರಿಂದ ಕಸ ಎಸೆಯುವವರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಕಸದ ಸಮಸ್ಯೆ ಉಲ್ಬಣಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

” ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಹೊಂದಿಕೊಂಡಂತೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ಕಸ ಎಸೆದು ಹೋಗುತ್ತಿದ್ದಾರೆ. ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಸ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು.”

-ಪ್ರೊ.ಪಂಡಿತಾರಾಧ್ಯ, ಸ್ಥಳೀಯರು

” ಸಾರ್ವಜನಿಕರಲ್ಲಿ ಮೊದಲು ಸ್ವಚ್ಛತೆಯ ಪ್ರಜ್ಞೆ ಮೂಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ-ಒಣ ಕಸ ವಿಂಗಡಿಸಿ ನೀಡುವ ಮೂಲಕ, ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಎಲ್ಲವನ್ನೂ ಪಾಲಿಕೆಯೇ ಮಾಡಬೇಕು ಎನ್ನಬಾರದು. ಸಾರ್ವಜನಿಕರು ಸಹಕಾರ ನೀಡಬೇಕು.”

-ಆನಂದ್, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

8 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

10 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

11 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

11 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

11 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

13 hours ago