Andolana originals

ರಾಮಾನುಜ ರಸ್ತೆ 17ನೇ ಕ್ರಾಸ್‌ನಲ್ಲಿ ಕಸದ ರಾಶಿ

ಕಾರು, ಬೈಕ್‌ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು 

ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ.

ಇದಕ್ಕೆ ತಾಜಾ ಉದಾಹರಣೆ ಎಂಬಂತೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೧ರ ವ್ಯಾಪ್ತಿಯಲ್ಲಿನ ರಾಮಾನುಜ ರಸ್ತೆಯ ೧೭ನೇ ಅಡ್ಡರಸ್ತೆಯಲ್ಲಿ ನಿತ್ಯ ಕಸ ವಿಲೇವಾರಿ ಮಾಡದಿರುವುದರಿಂದ ಇಲ್ಲಿನ ರಸ್ತೆ ಬದಿಯಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಬಿಸಿಲು- ಮಳೆ ಯಿಂದ ಕೊಳೆತು ಕಸ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿ ಮಾರ್ಪಾಡಾಗಿರುವ ಈ ಕಸದ ರಾಶಿಯಿಂದ ಇಲ್ಲಿನ ಸ್ಥಳೀಯ ನಿವಾಸಿಗಳು ದುರ್ನಾ ತವನ್ನು ಸಹಿಸಲಾರದೆ ಮೂಗು ಮುಚ್ಚಿಕೊಂಡು ಓಡಾಡುತ್ತಾ ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ. ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಕಾಯಿಲೆ ವಾಸಿ ಮಾಡಿಕೊಳ್ಳಲು ರೋಗಿಗಳು ಇಲ್ಲಿಗೆ ಬರಲು ಹಿಂದೆ ಮುಂದೆ ನೋಡುವಂತಾಗಿದೆ.

ಎಚ್ಚರಿಕೆ ಫಲಕಕ್ಕೂ ಡೋಂಟ್ ಕೇರ್: ಪೌರಕಾರ್ಮಿಕರು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿ, ಕಸ ಹಾಕದಂತೆ ಹಲವು ಬಾರಿ ಎಚ್ಚರಿಕೆ ಫಲಕ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯ ಒಂದು ಕಡೆ ಪ್ರವೇಶ ಮಾಡಿ ಕಸವನ್ನು ಎಸೆದು ಮತ್ತೊಂದು ಕಡೆಯಿಂದ ತೆರಳುತ್ತಾರೆ. ರಸ್ತೆಯ ಎರಡೂ ಬದಿಗಳಲ್ಲಿ ಕಸ ಎಸೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೌರಕಾರ್ಮಿಕರನ್ನೇ ಭದ್ರತಾ ಸಿಬ್ಬಂದಿಯಾಗಿ ನೇಮಿಸಬೇಕಿದೆ.

ರಾತ್ರಿ ವೇಳೆ ಕಸ ಎಸೆಯುವ ಜನರು: ರಾತ್ರಿ ವೇಳೆ ಕಾರು, ಬೈಕ್‌ಗಳಲ್ಲಿ ಬರುವ ಜನರು ವಾಹನ ಚಾಲನೆಯಲ್ಲಿಟ್ಟುಕೊಂಡು ಕಸವನ್ನು ಆರೋಗ್ಯ ಕೇಂದ್ರದ ಕಾಂಪೌಂಡ್ ಬಳಿಯೇ ಎಸೆದು ಹೋಗುತ್ತಾರೆ. ಇದರಿಂದ ಕಸ ಎಸೆಯುವವರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಕಸದ ಸಮಸ್ಯೆ ಉಲ್ಬಣಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

” ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಹೊಂದಿಕೊಂಡಂತೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ಕಸ ಎಸೆದು ಹೋಗುತ್ತಿದ್ದಾರೆ. ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಸ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು.”

-ಪ್ರೊ.ಪಂಡಿತಾರಾಧ್ಯ, ಸ್ಥಳೀಯರು

” ಸಾರ್ವಜನಿಕರಲ್ಲಿ ಮೊದಲು ಸ್ವಚ್ಛತೆಯ ಪ್ರಜ್ಞೆ ಮೂಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ-ಒಣ ಕಸ ವಿಂಗಡಿಸಿ ನೀಡುವ ಮೂಲಕ, ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಎಲ್ಲವನ್ನೂ ಪಾಲಿಕೆಯೇ ಮಾಡಬೇಕು ಎನ್ನಬಾರದು. ಸಾರ್ವಜನಿಕರು ಸಹಕಾರ ನೀಡಬೇಕು.”

-ಆನಂದ್, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago