Andolana originals

ರಾಮಾನುಜ ರಸ್ತೆ 17ನೇ ಕ್ರಾಸ್‌ನಲ್ಲಿ ಕಸದ ರಾಶಿ

ಕಾರು, ಬೈಕ್‌ಗಳಲ್ಲಿ ಬಂದು ಕಸ ಎಸೆಯುವ ಜನರು; ರೋಗ ಹರಡುವ ಭೀತಿಯಲ್ಲಿ ನಿವಾಸಿಗಳು 

ಮೈಸೂರು: ನಾಡಹಬ್ಬ ದಸರಾ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿ ವರ್ಗ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದರೆ, ನಗರದ ವಿವಿಧೆಡೆ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ಸಾಂಕ್ರಾಮಿಕ ರೋಗ ಹರಡುತ್ತಿದೆ.

ಇದಕ್ಕೆ ತಾಜಾ ಉದಾಹರಣೆ ಎಂಬಂತೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೧ರ ವ್ಯಾಪ್ತಿಯಲ್ಲಿನ ರಾಮಾನುಜ ರಸ್ತೆಯ ೧೭ನೇ ಅಡ್ಡರಸ್ತೆಯಲ್ಲಿ ನಿತ್ಯ ಕಸ ವಿಲೇವಾರಿ ಮಾಡದಿರುವುದರಿಂದ ಇಲ್ಲಿನ ರಸ್ತೆ ಬದಿಯಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಬಿಸಿಲು- ಮಳೆ ಯಿಂದ ಕೊಳೆತು ಕಸ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿ ಮಾರ್ಪಾಡಾಗಿರುವ ಈ ಕಸದ ರಾಶಿಯಿಂದ ಇಲ್ಲಿನ ಸ್ಥಳೀಯ ನಿವಾಸಿಗಳು ದುರ್ನಾ ತವನ್ನು ಸಹಿಸಲಾರದೆ ಮೂಗು ಮುಚ್ಚಿಕೊಂಡು ಓಡಾಡುತ್ತಾ ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ. ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಕಾಯಿಲೆ ವಾಸಿ ಮಾಡಿಕೊಳ್ಳಲು ರೋಗಿಗಳು ಇಲ್ಲಿಗೆ ಬರಲು ಹಿಂದೆ ಮುಂದೆ ನೋಡುವಂತಾಗಿದೆ.

ಎಚ್ಚರಿಕೆ ಫಲಕಕ್ಕೂ ಡೋಂಟ್ ಕೇರ್: ಪೌರಕಾರ್ಮಿಕರು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿ, ಕಸ ಹಾಕದಂತೆ ಹಲವು ಬಾರಿ ಎಚ್ಚರಿಕೆ ಫಲಕ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆಯ ಒಂದು ಕಡೆ ಪ್ರವೇಶ ಮಾಡಿ ಕಸವನ್ನು ಎಸೆದು ಮತ್ತೊಂದು ಕಡೆಯಿಂದ ತೆರಳುತ್ತಾರೆ. ರಸ್ತೆಯ ಎರಡೂ ಬದಿಗಳಲ್ಲಿ ಕಸ ಎಸೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೌರಕಾರ್ಮಿಕರನ್ನೇ ಭದ್ರತಾ ಸಿಬ್ಬಂದಿಯಾಗಿ ನೇಮಿಸಬೇಕಿದೆ.

ರಾತ್ರಿ ವೇಳೆ ಕಸ ಎಸೆಯುವ ಜನರು: ರಾತ್ರಿ ವೇಳೆ ಕಾರು, ಬೈಕ್‌ಗಳಲ್ಲಿ ಬರುವ ಜನರು ವಾಹನ ಚಾಲನೆಯಲ್ಲಿಟ್ಟುಕೊಂಡು ಕಸವನ್ನು ಆರೋಗ್ಯ ಕೇಂದ್ರದ ಕಾಂಪೌಂಡ್ ಬಳಿಯೇ ಎಸೆದು ಹೋಗುತ್ತಾರೆ. ಇದರಿಂದ ಕಸ ಎಸೆಯುವವರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಕಸದ ಸಮಸ್ಯೆ ಉಲ್ಬಣಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

” ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಹೊಂದಿಕೊಂಡಂತೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ಕಸ ಎಸೆದು ಹೋಗುತ್ತಿದ್ದಾರೆ. ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಸ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು.”

-ಪ್ರೊ.ಪಂಡಿತಾರಾಧ್ಯ, ಸ್ಥಳೀಯರು

” ಸಾರ್ವಜನಿಕರಲ್ಲಿ ಮೊದಲು ಸ್ವಚ್ಛತೆಯ ಪ್ರಜ್ಞೆ ಮೂಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ-ಒಣ ಕಸ ವಿಂಗಡಿಸಿ ನೀಡುವ ಮೂಲಕ, ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಎಲ್ಲವನ್ನೂ ಪಾಲಿಕೆಯೇ ಮಾಡಬೇಕು ಎನ್ನಬಾರದು. ಸಾರ್ವಜನಿಕರು ಸಹಕಾರ ನೀಡಬೇಕು.”

-ಆನಂದ್, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago