Andolana originals

ಬಿಸಿಲೂ ಆಘಾತ; ಮುನ್ನೆಚ್ಚರಿಕೆ ಸೂಕ್ತ

ಗಿರೀಶ್ ಹುಣಸೂರು

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಲವು ಸಲಹೆ

ಮೈಸೂರು: ಬೇಸಿಗೆಯ ಈ ಋತುಮಾನದಲ್ಲಿ ಹೆಚ್ಚುತ್ತಿರುವ ತೀವ್ರ ತಾಪಮಾನ, ಬಿಸಿಗಾಳಿ ಬೀಸುವಿಕೆಯಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಲೂ (ಹೀಟ್ ಸ್ಟ್ರೋಕ್) ಪರಿಣಾಮದಿಂದ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ.

ಮಾರ್ಚ್-ಮೇ ತಿಂಗಳ ಅವಧಿಯಲ್ಲಿ ರಾಜ್ಯದ  ಬಹುತೇಕ ಭಾಗಗಳಲ್ಲಿ ಗರಿಷ್ಟ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆ ಇದೆ. ಮಾರ್ಚ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಸಿಗಾಳಿ ಬೀಸುವ ಸಂಭವನೀಯತೆ ಇಲ್ಲ. ಆದರೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಭಾಗಗಳಲ್ಲಿ ೩ರಿಂದ ೬ ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲಕ್ಷಣಗಳೇನು?: 

ಅತೀ ಹೆಚ್ಚು ತಾಪಮಾನದಿಂದ (ಹೀಟ್ ವೇವ್) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತ (ಸನ್ ಸ್ಟೋಕ್)ದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಶಾಖ ಸೆಳೆತ ಉಂಟಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ೩೯ ಡಿಗ್ರಿ ಸೆಂಟಿಗ್ರೇಡ್‌ಗಿಂತ ಕಡಿಮೆ ಜ್ವರದಿಂದ ಬಳಲುತ್ತಿರುವವರಲ್ಲಿ, ಎಡಿಮಾ (ಊತ) ಮತ್ತು ಮೂರ್ಛೆಯಂತಹ ಲಕ್ಷಣಗಳು ಕಂಡು ಬರುತ್ತವೆ. ಶಾಖದ ಬಳಲಿಕೆಯಿಂದ ಆಯಾಸ, ದೌರ್ಬಲ್ಯ, ತಲೆತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು. ಶಾಖಾಘಾತಕ್ಕೆ ದೇಹದ ಉಷ್ಣತೆಯು ೪೦ ಡಿಗ್ರಿ ಸೆಂಟಿಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ

೧ ಅತೀ ಹೆಚ್ಚು ತಾಪಮಾನದಿಂದ ಬಳಲಿದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು.

೨ ಒದ್ದೆ ಬಟ್ಟೆಯಿಂದ ಮೈಒರೆಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.

೩ ವ್ಯಕ್ತಿ ಪ್ರಜ್ಞೆ ತಪ್ಪದಿದ್ದರೆ ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಒಆರ್‌ಎಸ್, ನಿಂಬೆ ಪಾನಕ ನೀಡುವುದು.

೩ ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸುವುದು.

೪ ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.

೫ ಬಳಲಿಕೆಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿಸುವುದು.

೬ ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.

ಬಿಸಿಲಿನಿಂದ ರಕ್ಷಣೆಗೆ ಸಲಹೆಗಳು: 

* ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಟ ತಾಪಮಾನದ ಅವಧಿ (ಮಧ್ಯಾಹ್ನ ೧೨ ರಿಂದ ೩ಗಂಟೆ)ಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು.

* ಬಾಯಾರಿಕೆ ಇಲ್ಲದಿದ್ದರೂ ಕೂಡ ಸಾಕಷ್ಟು ನೀರು ಕುಡಿಯುವುದು.

* ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು.

* ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.

* ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು.

* ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ಒಯ್ಯುವುದು.

* ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.

* ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.

* ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡದಿರುವುದು.

* ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.

* ನಿಂಬೆ ಪಾನೀಯ, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಒಆರ್‌ಎಸ್ ಬಳಸುವುದು.

* ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣುಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.

* ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.

* ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.

” ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮತ್ತು ಕಂದಾಯ (ವಿ.ನಿ)ಇಲಾಖೆಯಿಂದ ತಯಾರಿಸಿರುವ ಐಇಸಿ ಸಕ್ರಿಯಗೊಳಿಸುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು, ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯದಿಂದ ಕ್ರಿಯಾಯೋಜನೆ ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.”

ಹೊನ್ನಾಂಬ ಎಸ್., ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ,

” ಸಾಮಾಜಿಕ ಭದ್ರತೆ – ಪಿಂಚಣಿಗಳ ಆಯುಕ್ತಾಲಯ, ಕಂದಾಯ ಇಲಾಖೆ ಕಿಟ್ ಕೊಂಡೊಯ್ಯಿರಿ ಬಿಸಿಲಿನ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದ ಅನಿವಾರ್ಯತೆಯಿದ್ದಲ್ಲಿ ಜೊತೆಯಲ್ಲಿ ನೀರಿನ ಬಾಟಲಿ, ಛತ್ರಿ, ಕ್ಯಾಪ್, ಟವಲ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಒಆರ್‌ಎಸ್ ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಕೊಂಡೊಯ್ಯಿರಿ.

 

 

 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

6 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

6 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

6 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

6 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

6 hours ago