Andolana originals

ಬೇಬಿ ಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವ

ಎಸ್.ನಾಗಸುಂದರ್

ಪಾಂಡವಪುರ: ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ಜೋಡೆತ್ತುಗಳ ದರ್ಬಾರ್ ಜೋರಾಗಿದೆ.

ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಚಿತ್ರನಟ ದರ್ಶನ್ ತೂಗದೀಪ ಅವರ ಕಾಕ್ರೋಚ್ ಹೆಸರಿನ ರಾಮ ಮತ್ತು ಲಕ್ಷ್ಮಣ ಜೋಡಿ ಎತ್ತುಗಳನ್ನು ಪ್ರದರ್ಶಿಸಲಾಗಿದೆ. ಆರು ಹಲ್ಲುಗಳ ಜೋಡೆತ್ತುಗಳ ಬೆಲೆ ಬರೋಬ್ಬರಿ ೨೦ ಲಕ್ಷ ರೂ. ಗಳಾಗಿದ್ದು, ಕಳೆದ ಬಾರಿಯ ಬೇಬಿಬೆಟ್ಟದ ಜಾತ್ರೆಗೆ ಬಂದಿದ್ದ ಚಿತ್ರನಟ ದರ್ಶನ್ ಮುಂದಿನ ಬಾರಿಗೆ ನನ್ನ ಎತ್ತುಗಳನ್ನು ಜಾತ್ರೆಯಲ್ಲಿ ಪ್ರದರ್ಶಿಸಲಾಗುವುದು ಎಂದಿದ್ದರು. ಅದರಂತೆ ದರ್ಶನ್ ಅವರು ತಮ್ಮ ಜೋಡೆತ್ತುಗಳನ್ನು ಜಾತ್ರಾ ಮೈದಾನದಲ್ಲಿ ಕಟ್ಟಿದ್ದಾರೆ, ದರ್ಶನ್ ಅವರ ಜೋಡೆತ್ತುಗಳನ್ನು ಸಾರ್ವಜನಿಕರು, ಯುವಕ-ಯುವತಿಯರು ವೀಕ್ಷಣೆ ಮಾಡಿ ಸೆಲಿ ತೆಗೆದುಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ದರ್ಶನ್ ಅವರ ಜೋಡೆತ್ತುಗಳ ನಿರ್ವಹಣೆ ವಹಿಸಿಕೊಂಡಿರುವ ದರ್ಶನ್ ಅವರ ಅಭಿಮಾನಿ ಹಿರಿಸೇವೆ ಸಂದೀಪ್ ಅವರು ಕೂಡ ೧೦ ಲಕ್ಷ ರೂ. ಬೆಲೆ ಬಾಳುವ ಹಳ್ಳಿಕಾರ್ ತಳಿಯ ಎತ್ತುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ವೇದಿಕೆ ಮುಂಭಾಗ ಇರುವ ದರ್ಶನ್ ಪುಟ್ಟಣ್ಣಯ್ಯ ಅವರ ಟೆಂಟ್‌ನಲ್ಲಿ ಚಿತ್ರನಟ ದರ್ಶನ್ ಅವರ ಜೋಡೆತ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಹಳ್ಳಿಕಾರ್ ತಳಿಗಳ ಪ್ರದರ್ಶನ, ವ್ಯಪಾರ  ಜೋರು: ಬೇಬಿಬೆಟ್ಟದ ಜಾತ್ರಾ ಮಹೋತ್ಸವದಲ್ಲಿ ಹಳ್ಳಿಕಾರ್ ತಳಿಗಳ ಜೋಡೆತ್ತು, ಹೋರಿ, ಕರು, ಹಸುಗಳ ದರ್ಬಾರ್ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಜೋಡೆತ್ತುಗಳು ಆಗಮಿಸಿವೆ. ಜಾತ್ರೆಯಲ್ಲಿ ಒಂದು ಲಕ್ಷದಿಂದ ಹಿಡಿದು ೧೦, ೧೨ ಲಕ್ಷ ರೂ.ಗಳಿಗೂ ಅಽಕ ಬೆಲೆ ಬಾಳುವ ಹಳ್ಳಿಕಾರ್ ತಳಿಗಳನ್ನು ಜಾತ್ರೆಯಲ್ಲಿ ಕಾಣಬಹುದಾಗಿದೆ. ಜಾತ್ರೆಯಲ್ಲಿ ೫೦ ಸಾವಿರ ರೂ., ೧, ೨ ರಿಂದ ೪ ಲಕ್ಷ ರೂ.ಗಳವರೆಗೂ ಬೆಲೆ ಬಾಳುವ ಜೋಡೆತ್ತುಗಳು ಮಾರಾಟವಾಗುತ್ತಿವೆ. ಇನ್ನೂ ಕೆಲವು ರೈತರು ತಮ್ಮ ಎತ್ತುಗಳನ್ನು ಬಹುಮಾನಕ್ಕಾಗಿ ಪ್ರದರ್ಶನಕ್ಕಿರಿಸಿದ್ದಾರೆ. ರಾಸುಗಳೊಂದಿಗೆ ಆಗಮಿಸಿರುವ ರೈತರು ಜಾತ್ರಾ ಮೈದಾನದಲ್ಲಿ ಶಾಮಿಯಾನ ಹಾಕಿಕೊಂಡಿದ್ದರೆ, ಇನ್ನೂ ಕೆಲವರು ಎತ್ತಿನ ಗಾಡಿಯ ಕೆಳಗೆ, ಮರದ ಕೆಳಗೆ ಟೆಂಟ್ ಹಾಕಿಕೊಂಡು ರಾಸುಗಳ ನಿರ್ವಹಣೆ ಮಾಡುತ್ತಿದ್ದಾರೆ.

ಸೂಪರ್ ಸ್ಟಾರ್ ರೈತ ಪ್ರಶಸ್ತಿಗೆ ಭಾಜನರಾಗಿರುವ ಶ್ಯಾದನಹಳ್ಳಿ ಗ್ರಾಮದ ಸಾವಯವ ಕೃಷಿಕ ಚಲುವರಾಜು ಅವರು ಜಾತ್ರೆಯಲ್ಲಿ ೫ ಲಕ್ಷ ರೂ. ಬೆಲೆಬಾಳುವ ೨ ಹಲ್ಲುಗಳ ಹಳ್ಳಿಕಾರ್ ತಳಿಯ ಜೋಡೆತ್ತುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಪ್ರತಿ ವರ್ಷವೂ ಜೋಡೆತ್ತುಗಳನ್ನು ಪ್ರದರ್ಶನಕ್ಕೆ ಇಡುವ ಚಲುವರಾಜು ಅವರು ಚಿನ್ನದ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಸಾವಯವ ಕೃಷಿಕರಾಗಿರುವ ಚಲುವರಾಜು ಎತ್ತುಗಳನ್ನು ವೀಕ್ಷಣೆ ಮಾಡಲು ಬರುವ ರೈತರಿಗೆ ಸಾವಯವ ಬೆಲ್ಲದ ನಿಂಬೆಹಣ್ಣಿನ ಜೂಸ್ ನೀಡಿ ಸ್ವಾಗತಿಸುತ್ತಿದ್ದದ್ದು ವಿಶೇಷವಾಗಿತ್ತು. ಮಠದ ವತಿಯಿಂದ ಪ್ರಸಾದ ವಿನಿಯೋಗ ಶ್ರೀ ರಾಮಯೋಗೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ಮಠದ ವತಿಯಿಂದ ನಿತ್ಯ ಜಾತ್ರೆಗೆ ಬರುವ ಭಕ್ತರು, ರೈತರಿಗೆ ಪ್ರಸಾದ ವಿನಿಯೋಗ ಮಾಡಲಾಗುತ್ತಿದೆ.

” ಇದೇ ಮೊದಲ ಬಾರಿಗೆ ದರ್ಶನ್ ಒಡೆತನದ ಕಾಕ್ರೋಚ್ ಎತ್ತು ಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಕಳೆದ ವರ್ಷ ಜಾತ್ರೆಗೆ ಬಂದಿದ್ದ ದರ್ಶನ್ ಅವರು ಮುಂದಿನ ಬಾರಿಗೆ ತಮ್ಮ ಎತ್ತುಗಳನ್ನು ಕಟ್ಟಲಾಗುವುದು ಎಂದು ಹೇಳಿದ್ದರು. ಅದರಂತೆ ಈ ಭಾರಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಟೆಂಟ್‌ನಲ್ಲಿ ಎತ್ತುಗಳನ್ನು ಪ್ರದರ್ಶನ ಮಾಡಲಾಗಿದೆ.”

-ಹಿರಿಸೇವೆ ಸಂದೀಪ್, ದರ್ಶನ್ ಎತ್ತುಗಳ ನಿರ್ವಾಹಕ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago