Andolana originals

ಸತತ ಮಳೆಯಿಂದ ಬೆಳೆಗಳಿಗೆ ಹಾನಿಯಾಗುವ ಭೀತಿ

ಮಂಜು ಕೋಟೆ

ಕೋಟೆಯಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಜನಜೀವನ ಅಸ್ತವ್ಯ

ಎಚ್.ಡಿ.ಕೋಟೆ: ಒಂದು ವಾರದಿಂದ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅತಂತ್ರವಾಗಿರುವ ಜತೆಗೆ ರೈತರ ಜಮೀನಿನಲ್ಲಿ ಬೆಳೆಯಲಾಗಿರುವ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ತಾಲ್ಲೂಕಿನಲ್ಲಿ ಏಪ್ರಿಲ್ ಅಂತ್ಯದಲ್ಲಿ ಮತ್ತು ಮೇ ತಿಂಗಳಿನಲ್ಲಿ ಉತ್ತಮ ಮಳೆ ಆಗುವುದರಿಂದ ಆ ಸಂದರ್ಭದಲ್ಲಿ ರೈತರು ಬಿತ್ತನೆ ಕಾರ್ಯ ನಡೆಸುತ್ತಾರೆ. ಆದರೆ ಈ ಬಾರಿ ಪ್ರಾರಂಭದಲ್ಲಿ ಮಳೆ ಸಮರ್ಪಕವಾಗಿ ಆಗದೆ ಇದ್ದರೂ ರೈತರು ಬಿತ್ತನೆ ಕಾರ್ಯ ನಡೆಸಿದ್ದರು. ಆದರೆ ಒಂದು ವಾರದಿಂದ ದಾಖಲೆ ಪ್ರಮಾಣದಲ್ಲಿ ತಾಲ್ಲೂಕಿನಾದ್ಯಂತ ೧೯೦ ಮಿ.ಮೀ. ಮಳೆಯಾಗಿರುವುದರಿಂದ ರೈತರ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಸತತವಾಗಿ ಮಳೆಯಾಗುತ್ತಿರು ವುದರಿಂದ ಜನಸಾಮಾನ್ಯರು, ಕೂಲಿಕಾರ್ಮಿಕರ ಕೆಲಸ ಕಾರ್ಯಗಳಿಗೆ ತೆರಳಲು ಅಡ್ಡಿಯಾಗಿದೆ. ಜಿಲ್ಲೆಯಲ್ಲಿ ಅರೆ ಮಲೆನಾಡು ಎಂದು ಹೆಸರಾಗಿರುವ ಕೋಟೆ ಕ್ಷೇತ್ರದಲ್ಲಿ ಜೂನ್, ಜುಲೈ ತಿಂಗಳಿನಲ್ಲಿ ಭಾರೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಮೇ ತಿಂಗಳಿನಲ್ಲೇ ಮಳೆ ತನ್ನ ಆರ್ಭಟ ತೋರಿಸುತ್ತಿರುವುದರಿಂದ ಜನಸಾಮಾನ್ಯರಿಗೆ ಆತಂಕ ಎದುರಾಗುತ್ತಿದೆ

ಕೊಡಗು ಮತ್ತು ಕೇರಳ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಈ ಭಾಗಗಳಿಗೆ ಹೊಂದಿಕೊಂಡಂತೆ ಇರುವ ಈ ತಾಲ್ಲೂಕಿನಲ್ಲಿ ಬೇರೆ ತಾಲ್ಲೂಕುಗಳಿಗಿಂತ ಅತಿ ಹೆಚ್ಚು ಮಳೆಯಾಗುತ್ತಿದೆ.

ಮೇ ತಿಂಗಳಲ್ಲಿ ವಾಡಿಕೆ ಮಳೆ ೧೧೦ ಮಿ.ಮೀ. ಆಗಬೇಕಾಗಿತ್ತು. ಆದರೆ ೧೯೦ ಮಿ.ಮೀ. ಮಳೆಯಾಗಿದೆ. ಅಂತರಸಂತೆ ಹೋಬಳಿಯಲ್ಲಿ ಅತಿ ಹೆಚ್ಚು ಅಂದರೆ ೨೦೨ ಮಿ.ಮೀ. ಮಳೆ ಆಗಿದೆ. ಮಳೆ ಆರ್ಭಟ ಹೀಗೆಯೇ ಮುಂದುವರಿದರೆ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಮುಂಜಾಗ್ರತ ಕ್ರಮವಾಗಿ ಅಽಕಾರಿ ವರ್ಗ ಮತ್ತು ಜನಪ್ರತಿನಿಽಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಬೇಕಾಗಿದೆ.

” ಸರಗೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚಾಗಿ ಮಳೆ ಯಾಗುತ್ತಿದ್ದು, ಪಟ್ಟಣದಲ್ಲಿ ೩ ಮನೆಗಳು ಕುಸಿತ ಕಂಡಿವೆ. ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ.”

-ಮೋಹನಕುಮಾರಿ, ತಹಸಿಲ್ದಾರ್, ಸರಗೂರು

” ಕೋಟೆ ತಾಲ್ಲೂಕಿನಲ್ಲಿ ವಾಡಿಕೆಗಿಂತ ೮೦ ಮಿ.ಮೀ. ಮಳೆ ಹೆಚ್ಚಾಗಿ ಆಗಿದೆ. ಮಳೆ ಹೀಗೆಯೇ ಮುಂದುವರಿದರೆ ಹತ್ತಿ, ಹೊಗೆಸೊಪ್ಪು ಬೆಳೆ, ಇನ್ನಿತರ ಬೆಳೆಗಳಿಗೆ ಹಾನಿಯಾಗಲಿದೆ. ಈಗ ಆಗಿರುವ ಮಳೆಯಿಂದ ಬೆಳೆಗಳಿಗೆ ಹಾನಿ ಇಲ್ಲ.”

-ಜಯರಾಮಯ್ಯ, ಸಹಾಯಕ ಕೃಷಿ ನಿರ್ದೇಶಕರು

” ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಯಾವುದೇ ಅನಾಹುತಗಳು ಕಂಡುಬಂದಿಲ್ಲ. ಆರ್‌ಐ ಮತ್ತು ವಿಎಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ದಿನಕ್ಕೆ ೪-೫ ಬಾರಿ ಮಾಹಿತಿ ಮತ್ತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ.”

-ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

2 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

49 mins ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

2 hours ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

2 hours ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

2 hours ago