Andolana originals

ಸತತ ಮಳೆಯಿಂದ ಬೆಳೆಗಳಿಗೆ ಹಾನಿಯಾಗುವ ಭೀತಿ

ಮಂಜು ಕೋಟೆ

ಕೋಟೆಯಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಜನಜೀವನ ಅಸ್ತವ್ಯ

ಎಚ್.ಡಿ.ಕೋಟೆ: ಒಂದು ವಾರದಿಂದ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅತಂತ್ರವಾಗಿರುವ ಜತೆಗೆ ರೈತರ ಜಮೀನಿನಲ್ಲಿ ಬೆಳೆಯಲಾಗಿರುವ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ತಾಲ್ಲೂಕಿನಲ್ಲಿ ಏಪ್ರಿಲ್ ಅಂತ್ಯದಲ್ಲಿ ಮತ್ತು ಮೇ ತಿಂಗಳಿನಲ್ಲಿ ಉತ್ತಮ ಮಳೆ ಆಗುವುದರಿಂದ ಆ ಸಂದರ್ಭದಲ್ಲಿ ರೈತರು ಬಿತ್ತನೆ ಕಾರ್ಯ ನಡೆಸುತ್ತಾರೆ. ಆದರೆ ಈ ಬಾರಿ ಪ್ರಾರಂಭದಲ್ಲಿ ಮಳೆ ಸಮರ್ಪಕವಾಗಿ ಆಗದೆ ಇದ್ದರೂ ರೈತರು ಬಿತ್ತನೆ ಕಾರ್ಯ ನಡೆಸಿದ್ದರು. ಆದರೆ ಒಂದು ವಾರದಿಂದ ದಾಖಲೆ ಪ್ರಮಾಣದಲ್ಲಿ ತಾಲ್ಲೂಕಿನಾದ್ಯಂತ ೧೯೦ ಮಿ.ಮೀ. ಮಳೆಯಾಗಿರುವುದರಿಂದ ರೈತರ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಸತತವಾಗಿ ಮಳೆಯಾಗುತ್ತಿರು ವುದರಿಂದ ಜನಸಾಮಾನ್ಯರು, ಕೂಲಿಕಾರ್ಮಿಕರ ಕೆಲಸ ಕಾರ್ಯಗಳಿಗೆ ತೆರಳಲು ಅಡ್ಡಿಯಾಗಿದೆ. ಜಿಲ್ಲೆಯಲ್ಲಿ ಅರೆ ಮಲೆನಾಡು ಎಂದು ಹೆಸರಾಗಿರುವ ಕೋಟೆ ಕ್ಷೇತ್ರದಲ್ಲಿ ಜೂನ್, ಜುಲೈ ತಿಂಗಳಿನಲ್ಲಿ ಭಾರೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಮೇ ತಿಂಗಳಿನಲ್ಲೇ ಮಳೆ ತನ್ನ ಆರ್ಭಟ ತೋರಿಸುತ್ತಿರುವುದರಿಂದ ಜನಸಾಮಾನ್ಯರಿಗೆ ಆತಂಕ ಎದುರಾಗುತ್ತಿದೆ

ಕೊಡಗು ಮತ್ತು ಕೇರಳ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಈ ಭಾಗಗಳಿಗೆ ಹೊಂದಿಕೊಂಡಂತೆ ಇರುವ ಈ ತಾಲ್ಲೂಕಿನಲ್ಲಿ ಬೇರೆ ತಾಲ್ಲೂಕುಗಳಿಗಿಂತ ಅತಿ ಹೆಚ್ಚು ಮಳೆಯಾಗುತ್ತಿದೆ.

ಮೇ ತಿಂಗಳಲ್ಲಿ ವಾಡಿಕೆ ಮಳೆ ೧೧೦ ಮಿ.ಮೀ. ಆಗಬೇಕಾಗಿತ್ತು. ಆದರೆ ೧೯೦ ಮಿ.ಮೀ. ಮಳೆಯಾಗಿದೆ. ಅಂತರಸಂತೆ ಹೋಬಳಿಯಲ್ಲಿ ಅತಿ ಹೆಚ್ಚು ಅಂದರೆ ೨೦೨ ಮಿ.ಮೀ. ಮಳೆ ಆಗಿದೆ. ಮಳೆ ಆರ್ಭಟ ಹೀಗೆಯೇ ಮುಂದುವರಿದರೆ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಮುಂಜಾಗ್ರತ ಕ್ರಮವಾಗಿ ಅಽಕಾರಿ ವರ್ಗ ಮತ್ತು ಜನಪ್ರತಿನಿಽಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಬೇಕಾಗಿದೆ.

” ಸರಗೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚಾಗಿ ಮಳೆ ಯಾಗುತ್ತಿದ್ದು, ಪಟ್ಟಣದಲ್ಲಿ ೩ ಮನೆಗಳು ಕುಸಿತ ಕಂಡಿವೆ. ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ.”

-ಮೋಹನಕುಮಾರಿ, ತಹಸಿಲ್ದಾರ್, ಸರಗೂರು

” ಕೋಟೆ ತಾಲ್ಲೂಕಿನಲ್ಲಿ ವಾಡಿಕೆಗಿಂತ ೮೦ ಮಿ.ಮೀ. ಮಳೆ ಹೆಚ್ಚಾಗಿ ಆಗಿದೆ. ಮಳೆ ಹೀಗೆಯೇ ಮುಂದುವರಿದರೆ ಹತ್ತಿ, ಹೊಗೆಸೊಪ್ಪು ಬೆಳೆ, ಇನ್ನಿತರ ಬೆಳೆಗಳಿಗೆ ಹಾನಿಯಾಗಲಿದೆ. ಈಗ ಆಗಿರುವ ಮಳೆಯಿಂದ ಬೆಳೆಗಳಿಗೆ ಹಾನಿ ಇಲ್ಲ.”

-ಜಯರಾಮಯ್ಯ, ಸಹಾಯಕ ಕೃಷಿ ನಿರ್ದೇಶಕರು

” ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಯಾವುದೇ ಅನಾಹುತಗಳು ಕಂಡುಬಂದಿಲ್ಲ. ಆರ್‌ಐ ಮತ್ತು ವಿಎಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ದಿನಕ್ಕೆ ೪-೫ ಬಾರಿ ಮಾಹಿತಿ ಮತ್ತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ.”

-ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

59 mins ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

1 hour ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

2 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

3 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

3 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

5 hours ago