Andolana originals

ಸತತ ಮಳೆಯಿಂದ ಬೆಳೆಗಳಿಗೆ ಹಾನಿಯಾಗುವ ಭೀತಿ

ಮಂಜು ಕೋಟೆ

ಕೋಟೆಯಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಜನಜೀವನ ಅಸ್ತವ್ಯ

ಎಚ್.ಡಿ.ಕೋಟೆ: ಒಂದು ವಾರದಿಂದ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅತಂತ್ರವಾಗಿರುವ ಜತೆಗೆ ರೈತರ ಜಮೀನಿನಲ್ಲಿ ಬೆಳೆಯಲಾಗಿರುವ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ತಾಲ್ಲೂಕಿನಲ್ಲಿ ಏಪ್ರಿಲ್ ಅಂತ್ಯದಲ್ಲಿ ಮತ್ತು ಮೇ ತಿಂಗಳಿನಲ್ಲಿ ಉತ್ತಮ ಮಳೆ ಆಗುವುದರಿಂದ ಆ ಸಂದರ್ಭದಲ್ಲಿ ರೈತರು ಬಿತ್ತನೆ ಕಾರ್ಯ ನಡೆಸುತ್ತಾರೆ. ಆದರೆ ಈ ಬಾರಿ ಪ್ರಾರಂಭದಲ್ಲಿ ಮಳೆ ಸಮರ್ಪಕವಾಗಿ ಆಗದೆ ಇದ್ದರೂ ರೈತರು ಬಿತ್ತನೆ ಕಾರ್ಯ ನಡೆಸಿದ್ದರು. ಆದರೆ ಒಂದು ವಾರದಿಂದ ದಾಖಲೆ ಪ್ರಮಾಣದಲ್ಲಿ ತಾಲ್ಲೂಕಿನಾದ್ಯಂತ ೧೯೦ ಮಿ.ಮೀ. ಮಳೆಯಾಗಿರುವುದರಿಂದ ರೈತರ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಸತತವಾಗಿ ಮಳೆಯಾಗುತ್ತಿರು ವುದರಿಂದ ಜನಸಾಮಾನ್ಯರು, ಕೂಲಿಕಾರ್ಮಿಕರ ಕೆಲಸ ಕಾರ್ಯಗಳಿಗೆ ತೆರಳಲು ಅಡ್ಡಿಯಾಗಿದೆ. ಜಿಲ್ಲೆಯಲ್ಲಿ ಅರೆ ಮಲೆನಾಡು ಎಂದು ಹೆಸರಾಗಿರುವ ಕೋಟೆ ಕ್ಷೇತ್ರದಲ್ಲಿ ಜೂನ್, ಜುಲೈ ತಿಂಗಳಿನಲ್ಲಿ ಭಾರೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಮೇ ತಿಂಗಳಿನಲ್ಲೇ ಮಳೆ ತನ್ನ ಆರ್ಭಟ ತೋರಿಸುತ್ತಿರುವುದರಿಂದ ಜನಸಾಮಾನ್ಯರಿಗೆ ಆತಂಕ ಎದುರಾಗುತ್ತಿದೆ

ಕೊಡಗು ಮತ್ತು ಕೇರಳ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಈ ಭಾಗಗಳಿಗೆ ಹೊಂದಿಕೊಂಡಂತೆ ಇರುವ ಈ ತಾಲ್ಲೂಕಿನಲ್ಲಿ ಬೇರೆ ತಾಲ್ಲೂಕುಗಳಿಗಿಂತ ಅತಿ ಹೆಚ್ಚು ಮಳೆಯಾಗುತ್ತಿದೆ.

ಮೇ ತಿಂಗಳಲ್ಲಿ ವಾಡಿಕೆ ಮಳೆ ೧೧೦ ಮಿ.ಮೀ. ಆಗಬೇಕಾಗಿತ್ತು. ಆದರೆ ೧೯೦ ಮಿ.ಮೀ. ಮಳೆಯಾಗಿದೆ. ಅಂತರಸಂತೆ ಹೋಬಳಿಯಲ್ಲಿ ಅತಿ ಹೆಚ್ಚು ಅಂದರೆ ೨೦೨ ಮಿ.ಮೀ. ಮಳೆ ಆಗಿದೆ. ಮಳೆ ಆರ್ಭಟ ಹೀಗೆಯೇ ಮುಂದುವರಿದರೆ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಮುಂಜಾಗ್ರತ ಕ್ರಮವಾಗಿ ಅಽಕಾರಿ ವರ್ಗ ಮತ್ತು ಜನಪ್ರತಿನಿಽಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಬೇಕಾಗಿದೆ.

” ಸರಗೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚಾಗಿ ಮಳೆ ಯಾಗುತ್ತಿದ್ದು, ಪಟ್ಟಣದಲ್ಲಿ ೩ ಮನೆಗಳು ಕುಸಿತ ಕಂಡಿವೆ. ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ.”

-ಮೋಹನಕುಮಾರಿ, ತಹಸಿಲ್ದಾರ್, ಸರಗೂರು

” ಕೋಟೆ ತಾಲ್ಲೂಕಿನಲ್ಲಿ ವಾಡಿಕೆಗಿಂತ ೮೦ ಮಿ.ಮೀ. ಮಳೆ ಹೆಚ್ಚಾಗಿ ಆಗಿದೆ. ಮಳೆ ಹೀಗೆಯೇ ಮುಂದುವರಿದರೆ ಹತ್ತಿ, ಹೊಗೆಸೊಪ್ಪು ಬೆಳೆ, ಇನ್ನಿತರ ಬೆಳೆಗಳಿಗೆ ಹಾನಿಯಾಗಲಿದೆ. ಈಗ ಆಗಿರುವ ಮಳೆಯಿಂದ ಬೆಳೆಗಳಿಗೆ ಹಾನಿ ಇಲ್ಲ.”

-ಜಯರಾಮಯ್ಯ, ಸಹಾಯಕ ಕೃಷಿ ನಿರ್ದೇಶಕರು

” ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಯಾವುದೇ ಅನಾಹುತಗಳು ಕಂಡುಬಂದಿಲ್ಲ. ಆರ್‌ಐ ಮತ್ತು ವಿಎಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ದಿನಕ್ಕೆ ೪-೫ ಬಾರಿ ಮಾಹಿತಿ ಮತ್ತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ.”

-ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

7 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago