Andolana originals

ಹಿಂಗಾರು ಅಬ್ಬರ; ಹಲವೆಡೆ ನಾಲೆ ಒಡೆದು ನಷ್ಟ

ಕೆ.ಆರ್.ನಗರ-ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಒಂದೇ ರಾತ್ರಿ ಸುರಿದ ಮಳೆ ಅವಾಂತರದಿಂದ ರೈತರು ಕಂಗಾಲು

ಭೇರ್ಯ ಮಹೇಶ್

ಕೆ.ಆರ್.ನಗರ : ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಹಿಂಗಾರು ಮಳೆಯ ಅಬ್ಬರ ದಿಂದ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾದರೆ, ಹಲವೆಡೆ ಅನ್ನದಾತರಿಗೆ ನಷ್ಟವುಂಟು ಮಾಡಿದೆ.

ಮಂಗಳವಾರ ರಾತ್ರಿಯಿಡೀ ಸುರಿದ ಮಳೆಯಿಂದ ಜಮೀನುಗಳಿಗೆ ನೀರು ನುಗ್ಗಿ, ಕೆರೆಗಳಂತಾಗಿವೆ. ಇದರಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಮಿರ್ಲೆ ಭಾಗದಲ್ಲಿ ಸರಾಸರಿ 55 ಮಿ.ಮೀ. ಮಳೆಯಾಗಿದ್ದು, ಗಂಧನಹಳ್ಳಿ ಗ್ರಾಮದ ಕಪ್ಪಡಿ ಕ್ಷೇತ್ರಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಂತೆ ಇರುವ ಗಂಧನಹಳ್ಳಿ ಬಳಿ ಹಂಪಾಪುರ ಹಳೇ ನಾಲೆಗೆ 7ನೇ ಮೈಲಿಯ ಬಳಿ ಧಾರಾಕಾರವಾಗಿ ಸುರಿದ ಮಳೆಯ ನೀರು ನುಗ್ಗಿದ ಪರಿಣಾಮ ನಾಲೆಯ ಏರಿ ಒಡೆದು ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮದಿಂದಾಗಿ ಭತ್ತದ ಬೆಳೆ, ಬಾಳೆ, ನಾಟಿ ಮಾಡಿದ ಅಡಕೆ, ವಿವಿಧ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಇತ್ತ ಕೆ.ಆರ್.ನಗರ ಪಟ್ಟಣದಲ್ಲಿ ಹಿಂಗಾರು ಮಳೆಯ ಆರ್ಭಟಕ್ಕೆ ಜನರು ತತ್ತರಿಸಿದರೆ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ತಹಸಿಲ್ದಾರ್ ಭೇಟಿ: ಗಂಧನಹಳ್ಳಿ ಬಳಿ ಹಂಪಾಪುರ ಹಳೇ ನಾಲೆ 7ನೇ ಮೈಲಿ ಬಳಿ ಒಡೆದು ರೈತರ ಜಮೀನಿಗೆ ನೀರು ನುಗ್ಗಿ ಅಪಾರ ಬೆಳೆ ನಷ್ಟವಾಗಿದೆ. ಕಸಬಾ ಹೋಬಳಿಯ ಮೂಡಲಕೊಪ್ಪಲು ಬಳಿಯ ರಾಮ

ಸಮುದ್ರ ನಾಲೆಯ 36.00ನೇ ಕಿ.ಮೀ. ನಲ್ಲಿ ನಾಲೆಗೆ ಅಪಾರ ಪ್ರಮಾಣದಲ್ಲಿ ಮಳೆ ನೀರು ಹರಿದು ನಾಲೆ ಒಡೆದು ರೈತರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ನುಗ್ಗಿ ರೈತರು ಬೆಳೆದ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಮಾಹಿತಿ ಪಡೆದು

ಕೊಂಡ ಕೆ.ಆರ್.ನಗರ ತಾಲ್ಲೂಕಿನ ತಹಸಿಲ್ದಾರ್ ಜಿ.ಸುರೇಂದ್ರಮೂರ್ತಿ, ರಾಜಸ್ವ ನಿರೀಕ್ಷಕ ಶಶಿಕುಮಾರ್ ಹಾಗೂ ಹಾರಂಗಿ ನೀರಾವರಿ ನಿಗಮದ ಕೆ.ಆರ್.ನಗರ ವಿಭಾಗದ ಎಇಇ ಅಯಾಜ್ ಪಾಷ, ಎಇ ಕಿರಣ್ ಎಇ, ಬಿಂದು ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಒಡೆದು ಹೋಗಿರುವ ನಾಲೆ ಏರಿಯನ್ನು ತಾತ್ಕಾಲಿಕವಾಗಿ ಮರಳು ಮೂಟೆಯಿಂದ ಮುಚ್ಚಿ ನೀರು ಹರಿಯದಂತೆ ತಡೆ ನಿರ್ಮಾಣ ಮಾಡಲಾಗಿದೆ. ಬಳಿಕ ಬೆಳೆ ಹಾನಿ ಬಗ್ಗೆ ವರದಿ ಪಡೆದುಕೊಳ್ಳಲಾಯಿತು.

ರೈತರ ಬೇಡಿಕೆ: ಅತಿ ಹೆಚ್ಚು ಮಳೆಯಾದಾಗ ಮಿರ್ಲೆ ಶ್ರೇಣಿ ನಾಲೆಗಳಾದ ಹಂಪಾಪುರ ನಾಲೆ, ಹಳೇ ಹೊಸನಾಲೆ, ನಾಯಿನಾಲೆ, ಹಿರಿನಾಲೆ ಹಾಗೂ ಗೋವಿನ ನಾಲೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಭಾರಿ ಮಳೆಯಾಗಿ ಹೆಚ್ಚುವರಿ ನೀರು ನಾಲೆಗೆ ಹರಿದು ಬಂದಿದೆ. ಹಂಪಾಪುರ ನಾಲೆಯ 7ನೇ ಮೈಲಿ ಬಳಿ ನಾಲೆ ಒಡೆದು ಬೆಳೆ ಹಾನಿಯಾದರೆ ರೈತರಿಗೆ ಕಷ್ಟವಾಗಲಿದೆ. ಅದ್ದರಿಂದ ತಾಲ್ಲೂಕಿನ ಇತರೆ ನಾಲೆಗಳಾದ ಚಾಮರಾಜ ಎಡದಂಡೆ ಮತ್ತು ಬಲದಂಡೆ ನಾಲೆಗಳ ಆಧುನೀಕರಣ ಕಾಮಗಾರಿ ಕೈಗೊಂಡಂತೆ ಈ ಕಾಲುವೆಗಳ ಕಾಂಕ್ರೀಟ್ ಲೈನಿಂಗ್ ಕಾಮಗಾರಿ ಕೈಗೊಳ್ಳಬೇಕೆಂದು ರೈತರು ಜನಪ್ರತಿನಿಧಿಗಳಿಗೆ, ಸಂಬಂಧ ಪಟ್ಟ ಇಲಾಖೆಯವರಿಗೆ ಮನವಿ ಮಾಡಿದ್ದಾರೆ.

ಹೋಬಳಿಗಳಲ್ಲಿ ಮಂಗಳವಾರ (ಅ.22) ರಾತ್ರಿ ಸುರಿದ ಮಳೆ ಪ್ರಮಾಣ  

ಕಸಬಾ: 54.8 ಮಿ.ಮೀ

ಹೆಬ್ಬಾಳು: 54.0 ಮಿ.ಮೀ

ಚುಂಚನಕಟ್ಟೆ: 24.6 ಮಿ.ಮೀ

ಹನಸೋಗೆ: 70.0 ಮಿ.ಮೀ

ಸಾಲಿಗ್ರಾಮ: 42.6 ಮಿ.ಮೀ

ಮಿರ್ಲೆ : 55.0 ಮಿ.ಮೀ.

ಭೇರ್ಯ: 28.8 ಮಿ.ಮೀ

ಒಟ್ಟು ಮಳೆ : 329.8 ಮಿ.ಮೀ.

ಸರಾಸರಿ: 47.1 ಮಿ.ಮೀ ಮಳೆ

 

 

 

ಆಂದೋಲನ ಡೆಸ್ಕ್

Recent Posts

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

11 mins ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

8 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

12 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

13 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

14 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

14 hours ago