ದಾ.ರಾ.ಮಹೇಶ್
ಅಚ್ಚ ಹಸಿರಿನಿಂದ ಶೋಭಿಸುತ್ತಿರುವ ಅರಣ್ಯ; ತುಂಬಿದ ಕೆರೆಗಳು; ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಪ್ರಾಣಿಗಳು
ವೀರನಹೊಸಹಳ್ಳಿ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಅಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.
ಮರ-ಗಿಡಗಳ ನಡುವೆ ಬೆಳೆದು ನಿಂತ ಹುಲ್ಲು, ಕುರುಚಲು ಗಿಡಗಳೊಳಗೆ ವನ್ಯಪ್ರಾಣಿಗಳು ಎಲ್ಲೆಂದರಲ್ಲಿ ಅಡ್ಡಾಡುತ್ತಿವೆ. ಜಿಂಕೆಗಳು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿದ್ದು, ಜನರನ್ನು ಕಂಡಾಗ ಅಚ್ಚರಿಯಿಂದ ನೆಗೆದು ಓಡುವ ದೃಶ್ಯಗಳು ಕಣ್ಮನ ಸೆಳೆಯುತ್ತಿವೆ.
ಬೇಸಿಗೆಯ ಬಿರು ಬಿಸಿಲಿಗೆ ಸಿಲುಕಿ ಒಣಗಿಹೋದ ಗಿಡಮರಗಳಿಗೆ ಮುಂಗಾರು ಮಳೆ ಸುರಿಯಿತೆಂದರೆ ಮರುಹುಟ್ಟಿನ ಅನುಭವ. ಪ್ರಕೃತಿಯಲ್ಲೊಂದು ಪುಳಕ. ಇಡೀ ಅರಣ್ಯಕ್ಕೆ ಹಸಿರು ಸೀರೆಯುಟ್ಟು ನಲಿದಾಡುವ ಸಂಭ್ರಮ. ಬತ್ತಿ ಹೋದ ನದಿ, ತೊರೆಗಳಲ್ಲಿ ಜೀವಜಲದ ಉಸಿರಾಟ. ನಾಗರಹೊಳೆ ಉದ್ಯಾನದಲ್ಲೀಗ ಈ ದೃಶ್ಯಗಳು ಗೋಚರವಾಗುತ್ತಿವೆ.
ಜಿಂಕೆಗಳ ದಂಡು, ಕಾಡುಕೋಣ, ಕಾಡಾನೆ, ನಿರ್ಭಯವಾಗಿ ಹೆಜ್ಜೆಹಾಕುವ ಹುಲಿ, ಆಗೊಮ್ಮೆ ಈಗೊಮ್ಮೆ ಕಾಣುವ ಕರಿಚಿರತೆ ನಾಗರಹೊಳೆಯ ಖ್ಯಾತಿಯನ್ನು ಮತ್ತಷ್ಟು ಪಸರಿಸುವಂತೆ ಮಾಡಿದೆ. ಅರಣ್ಯದಲ್ಲಿರುವ ಚನ್ನಮ್ಮನಕಟ್ಟೆ, ಎರೆಕಟ್ಟೆ, ಮಂಟಳ್ಳಿಕೆರೆ, ಮಾದಳ್ಳಿಕಟ್ಟೆ ಮುದಗನೂರು ಕೆರೆ, ಬಿಲ್ಲೆನಹೊಸಹಳ್ಳಿ ಕೆರೆ, ಭೀಮನಕಟ್ಟೆ, ಬಾಣೇರಿ ಕೆರೆ ಸೇರಿದಂತೆ ಹಲವು ಕೆರೆ- ಕಟ್ಟೆಗಳು ತುಂಬಿದ್ದು, ಪ್ರಾಣಿ, ಪಕ್ಷಿಗಳು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ವನ್ಯಪ್ರಾಣಿಗಳ ವಿಹಾರ ಪರಿಸರ ಪ್ರಿಯರಲ್ಲಿ ಸಂತಸ ಮೂಡಿಸಿದೆ.
” ಬೇಸಿಗೆಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನೀರಿನ ಕೊರತೆಯಾಗದ ರೀತಿಯಲ್ಲಿ ಅಲ್ಲಲ್ಲಿ ಚೆಕ್ಡ್ಯಾಮ್ ನಿರ್ಮಾಣ ಮಾಡಿ ನೀರು ಆಚೆ ಹೋಗದಂತೆ ಕಾಪಾಡಿಕೊಂಡಿದ್ದೇವೆ. ಈ ವರ್ಷವೂ ಅದೇ ರೀತಿಯಲ್ಲಿ ನಿರ್ವಹಣೆ ಮಾಡುತ್ತೇವೆ.”
-ಲಕ್ಷ್ಮೀಕಾಂತ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುಣಸೂರು.
” ಕೆಲವು ದಿನಗಳ ಹಿಂದೆ ಮಳೆಯಿಲ್ಲದೆ ಕಾಡು ಪ್ರಾಣಿಗಳು ನೀರಿಗಾಗಿ ಪರಿತಪಿಸುತ್ತಿದ್ದವು. ಆದರೆ ಈಗ ನಾಗರಹೊಳೆ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ನೀರು ಸಮೃದ್ಧಿಯಾಗಿದೆ. ಅರಣ್ಯ ಇಲಾಖೆ ಮಳೆಗಾಲದಲ್ಲಿ ತೋಡುಗಳ ಮೂಲಕ ನೀರು ಆಚೆ ಹೋಗದಂತೆ ಅಲ್ಲಲ್ಲಿ ಕೆರೆ ಕಟ್ಟೆಗಳ ಹತ್ತಿರ ಅಡ್ಡಗಟ್ಟಿ ನೀರು ನಿಲ್ಲುವಂತೆ ಮಾಡಬೇಕು. ಇದರಿಂದ ಬೇಸಿಗೆಯಲ್ಲಿ ನೀರಿಗೆ ಸಮಸ್ಯೆ ಆಗುವುದಿಲ್ಲ.”
-ಛಾಯ ಸುನಿಲ್, ವನ್ಯಜೀವಿ ಛಾಯಾಗ್ರಾಹಕಿ
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…