ರಾಜ್ಯದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಇತ್ತೀಚೆಗೆ ಪ್ರತಿ ಕೆ.ಜಿ. ಬೆಳ್ಳುಳ್ಳಿ ಧಾರಣೆಯು 400 ರೂ.ಗಳನ್ನು ದಾಟಿದೆ. ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರವು 500 ರೂ. ದಾಟಿತ್ತು. ಸದ್ಯ ಒಂದೇ ವರ್ಷದಲ್ಲಿ ಸತತ ಎರಡನೇ ಸಲ ಏರಿಕೆಯಾಗಿದ್ದು, ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯ ಪೈಕಿ ಮಧ್ಯಪ್ರದೇಶ ಶೇ.70ರಷ್ಟನ್ನು ಹೊಂದಿದ್ದು, ಕರ್ನಾಟಕದ ಹಲವೆಡೆಯೂ ರೈತರು ಬೆಳ್ಳುಳ್ಳಿಯನ್ನು ಬೆಳೆಯುತ್ತಾರೆ. ಕರ್ನಾಟಕಕ್ಕೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬೆಳ್ಳುಳ್ಳಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ ಬಾರಿ ಮಳೆಯಿಂದಾಗಿ ಈ ಭಾಗಗಳಲ್ಲಿ ಉತ್ಪಾದನೆ ಕುಸಿತಗೊಂಡಿದ್ದು, ಮಾರುಕಟ್ಟೆಗೆ ಅವಕ ಕಡಿಮೆಯಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನುತ್ತಾರೆ ವ್ಯಾಪಾರಿಗಳು. ಸದ್ಯ ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಈ ಮೊದಲು ಪ್ರತಿದಿನ 5 ಸಾವಿರದಿಂದ 6 ಸಾವಿರ ಚೀಲಗಳು (ಪ್ರತಿ ಚೀಲ 50 ಕೆ.ಜಿ.) ಆವಕವಾಗುತ್ತಿತ್ತು. ಸದ್ಯ ಕೇವಲ 3 ಸಾವಿರ ಚೀಲಗಳು ಆವಕವಾಗಿದ್ದು, ಅಲ್ಲಿಂದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರಿಗೂ ರವಾನೆಯಾಗುತ್ತಿದೆ. ಇತ್ತೀಚೆಗೆ ಯಶವಂತಪುರದ ಮಾರುಕಟ್ಟೆಯಲ್ಲಿ ‘ಎ’ ದರ್ಜೆಯ ಹೈಬ್ರಿಡ್ ಬೆಳ್ಳುಳ್ಳಿಯ ಸಗಟು ಧಾರಣೆ ಕೆ.ಜಿ.ಗೆ 420 ರೂ.ಗಳನ್ನು ತಲುಪಿತ್ತು. ಹಾಗಾಗಿ ಈ ವಾರದಲ್ಲಿ ಚಿಲ್ಲರೆ ಧಾರಣೆಯು 450 ರೂ.ಗಳನ್ನು ದಾಟುವ ಸಾಧ್ಯತೆ ಇದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…