ರಾಜ್ಯದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಇತ್ತೀಚೆಗೆ ಪ್ರತಿ ಕೆ.ಜಿ. ಬೆಳ್ಳುಳ್ಳಿ ಧಾರಣೆಯು 400 ರೂ.ಗಳನ್ನು ದಾಟಿದೆ. ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರವು 500 ರೂ. ದಾಟಿತ್ತು. ಸದ್ಯ ಒಂದೇ ವರ್ಷದಲ್ಲಿ ಸತತ ಎರಡನೇ ಸಲ ಏರಿಕೆಯಾಗಿದ್ದು, ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯ ಪೈಕಿ ಮಧ್ಯಪ್ರದೇಶ ಶೇ.70ರಷ್ಟನ್ನು ಹೊಂದಿದ್ದು, ಕರ್ನಾಟಕದ ಹಲವೆಡೆಯೂ ರೈತರು ಬೆಳ್ಳುಳ್ಳಿಯನ್ನು ಬೆಳೆಯುತ್ತಾರೆ. ಕರ್ನಾಟಕಕ್ಕೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬೆಳ್ಳುಳ್ಳಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ ಬಾರಿ ಮಳೆಯಿಂದಾಗಿ ಈ ಭಾಗಗಳಲ್ಲಿ ಉತ್ಪಾದನೆ ಕುಸಿತಗೊಂಡಿದ್ದು, ಮಾರುಕಟ್ಟೆಗೆ ಅವಕ ಕಡಿಮೆಯಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನುತ್ತಾರೆ ವ್ಯಾಪಾರಿಗಳು. ಸದ್ಯ ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಈ ಮೊದಲು ಪ್ರತಿದಿನ 5 ಸಾವಿರದಿಂದ 6 ಸಾವಿರ ಚೀಲಗಳು (ಪ್ರತಿ ಚೀಲ 50 ಕೆ.ಜಿ.) ಆವಕವಾಗುತ್ತಿತ್ತು. ಸದ್ಯ ಕೇವಲ 3 ಸಾವಿರ ಚೀಲಗಳು ಆವಕವಾಗಿದ್ದು, ಅಲ್ಲಿಂದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರಿಗೂ ರವಾನೆಯಾಗುತ್ತಿದೆ. ಇತ್ತೀಚೆಗೆ ಯಶವಂತಪುರದ ಮಾರುಕಟ್ಟೆಯಲ್ಲಿ ‘ಎ’ ದರ್ಜೆಯ ಹೈಬ್ರಿಡ್ ಬೆಳ್ಳುಳ್ಳಿಯ ಸಗಟು ಧಾರಣೆ ಕೆ.ಜಿ.ಗೆ 420 ರೂ.ಗಳನ್ನು ತಲುಪಿತ್ತು. ಹಾಗಾಗಿ ಈ ವಾರದಲ್ಲಿ ಚಿಲ್ಲರೆ ಧಾರಣೆಯು 450 ರೂ.ಗಳನ್ನು ದಾಟುವ ಸಾಧ್ಯತೆ ಇದೆ.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…