Andolana originals

ಬೆಳ್ಳುಳ್ಳಿಯ ಬೆಲೆ ಗಗನಕ್ಕೆ..

ರಾಜ್ಯದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಇತ್ತೀಚೆಗೆ ಪ್ರತಿ ಕೆ.ಜಿ. ಬೆಳ್ಳುಳ್ಳಿ ಧಾರಣೆಯು 400 ರೂ.ಗಳನ್ನು ದಾಟಿದೆ. ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರವು 500 ರೂ. ದಾಟಿತ್ತು. ಸದ್ಯ ಒಂದೇ ವರ್ಷದಲ್ಲಿ ಸತತ ಎರಡನೇ ಸಲ ಏರಿಕೆಯಾಗಿದ್ದು, ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯ ಪೈಕಿ ಮಧ್ಯಪ್ರದೇಶ ಶೇ.70ರಷ್ಟನ್ನು ಹೊಂದಿದ್ದು, ಕರ್ನಾಟಕದ ಹಲವೆಡೆಯೂ ರೈತರು ಬೆಳ್ಳುಳ್ಳಿಯನ್ನು ಬೆಳೆಯುತ್ತಾರೆ. ಕರ್ನಾಟಕಕ್ಕೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬೆಳ್ಳುಳ್ಳಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ ಬಾರಿ ಮಳೆಯಿಂದಾಗಿ ಈ ಭಾಗಗಳಲ್ಲಿ ಉತ್ಪಾದನೆ ಕುಸಿತಗೊಂಡಿದ್ದು, ಮಾರುಕಟ್ಟೆಗೆ ಅವಕ ಕಡಿಮೆಯಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನುತ್ತಾರೆ ವ್ಯಾಪಾರಿಗಳು. ಸದ್ಯ ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಈ ಮೊದಲು ಪ್ರತಿದಿನ 5 ಸಾವಿರದಿಂದ 6 ಸಾವಿರ ಚೀಲಗಳು (ಪ್ರತಿ ಚೀಲ 50 ಕೆ.ಜಿ.) ಆವಕವಾಗುತ್ತಿತ್ತು. ಸದ್ಯ ಕೇವಲ 3 ಸಾವಿರ ಚೀಲಗಳು ಆವಕವಾಗಿದ್ದು, ಅಲ್ಲಿಂದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರಿಗೂ ರವಾನೆಯಾಗುತ್ತಿದೆ. ಇತ್ತೀಚೆಗೆ ಯಶವಂತಪುರದ ಮಾರುಕಟ್ಟೆಯಲ್ಲಿ ‘ಎ’ ದರ್ಜೆಯ ಹೈಬ್ರಿಡ್ ಬೆಳ್ಳುಳ್ಳಿಯ ಸಗಟು ಧಾರಣೆ ಕೆ.ಜಿ.ಗೆ 420 ರೂ.ಗಳನ್ನು ತಲುಪಿತ್ತು. ಹಾಗಾಗಿ ಈ ವಾರದಲ್ಲಿ ಚಿಲ್ಲರೆ ಧಾರಣೆಯು 450 ರೂ.ಗಳನ್ನು ದಾಟುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago