Andolana originals

ರಾತ್ರೋರಾತ್ರಿ ಭಾರೀ ಪ್ರಮಾಣದಲ್ಲಿ ನದಿಗೆ ಹರಿದ ನೀರು

ಮಂಜು ಕೋಟೆ

ಎಚ್.ಡಿ.ಕೋಟೆ: ಕಬಿನಿ, ತಾರಕ, ನುಗು ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಳ 

ಎಚ್.ಡಿ.ಕೋಟೆ: ಭಾರೀ ಮಳೆಯ ಪರಿಣಾಮ ತಾಲ್ಲೂಕಿನ ಕಬಿನಿ, ತಾರಕ, ನುಗು ಜಲಾಶಯಗಳಿಗೆ ದಿಢೀರನೆ ಒಳಹರಿವು ಹೆಚ್ಚಾಗಿ ರಾತ್ರೋರಾತ್ರಿ ಭಾರಿ ಪ್ರಮಾಣದ ನೀರನ್ನು ಜಲಾಶಯಗಳಿಂದ ಹೊರ ಬಿಡಲಾಗುತ್ತಿದೆ.

ಕೊಡಗು ಮತ್ತು ಕೇರಳದ ವಯನಾಡು ಪ್ರದೇಶದಲ್ಲಿ ಹಾಗೂ ತಾಲ್ಲೂಕಿನಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದ ಕಬಿನಿ, ತಾರಕ, ನುಗು ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿ ಕಬಿನಿ ಜಲಾಶಯದಿಂದ ೪೦,೦೦೦ ಕ್ಯೂಸೆಕ್ಸ್, ತಾರಕ ಜಲಾಶಯದಿಂದ ೯,೦೦೦ ಕ್ಯೂಸೆಕ್ಸ್, ನುಗು ಜಲಾಶಯದಿಂದ ೨,೦೦೦ ಕ್ಯೂಸೆಕ್ಸ್ ನೀರನ್ನು ಶನಿವಾರ ರಾತ್ರಿ ೧೨ರ ಸಂದರ್ಭದಲ್ಲಿ ಅಧಿಕಾರಿಗಳಾದ ನಟಶೇಖರ್‌ಮೂರ್ತಿ, ಗಣೇಶ್, ದೀಪಕ್ ಅವರು ಕ್ರಸ್ಟ್‌ಗೇಟ್‌ಗಳ ಮೂಲಕ ಹರಿಸಿದ್ದಾರೆ.

೬ ವರ್ಷಗಳ ನಂತರ ತಾರಕ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡುತ್ತಿರುವುದರಿಂದ ಜಲಾಶಯದ ಮುಂಭಾಗದ ಸೇತುವೆ ಹಾಗೂ ಪಟ್ಟಣ ಸಮೀಪದ ಕಟ್ಟೆಮನುಗನಹಳ್ಳಿ ಸೇತುವೆ ಮುಳುಗಡೆಯಾಗಿವೆ.

ಎಂದಿನಂತೆ ರೈತರು ಮತ್ತು ಜನಸಾಮಾನ್ಯರು ಬೆಳಿಗ್ಗೆ ಎದ್ದು ಜಮೀನು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗಲು ಮುಂದಾದಾಗ ಸೇತುವೆಗಳು ಮುಳುಗಡೆಯಾಗಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವುದನ್ನು ನೋಡಿ ಆತಂಕಗೊಂಡರು. ಮುಳುಗಡೆಯಾಗಿರುವ ಸೇತುವೆ ಮತ್ತು ನೀರನ್ನು ನೋಡಲು ನೂರಾರು ಜನರು ಮುಗಿಬಿದ್ದಿದ್ದರು.

ಕಬಿನಿ, ತಾರಕ, ನುಗು ಈ ಮೂರೂ ಜಲಾಶಯಗಳಿಂದ ೫೦,೦೦೦ ಕ್ಯೂಸೆಕ್ಸ್ ನೀರು ಹೊರ ಹೋಗುತ್ತಿರುವುದರಿಂದ ಕಬಿನಿ ಮತ್ತು ನುಗು ಜಲಾಶಯಗಳ ವ್ಯಾಪ್ತಿಯ ತಲಾ ಎರಡರಂತೆ ನಾಲ್ಕು ಸೇತುವೆಗಳು ಮುಳುಗಡೆಯಾಗಿದ್ದು, ಅನೇಕ ಗ್ರಾಮಗಳ ನಡುವೆ ಸಂಪರ್ಕ ಸ್ಥಗಿತಗೊಂಡಿದೆ. ಅಲ್ಲದೆ ನದಿಯ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ.

” ನಾಗರಹೊಳೆ ಅರಣ್ಯ ಮತ್ತು ಕೊಡಗು ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ತಾರಕ ಜಲಾಶಯಕ್ಕೆ ದಿಢೀರನೆ ರಾತ್ರಿ ಒಳಹರಿವು ೨,೦೦೦ ಕ್ಯೂಸೆಕ್ಸ್‌ನಿಂದ ೧೦,೦೦೦ ಕ್ಯೂಸೆಕ್ಸ್‌ಗೆ ಏರಿಕೆಯಾಗಿತ್ತು. ನಂತರ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಯಿತು. ಭಾನುವಾರ ಮಧ್ಯಾಹ್ನದಿಂದ ೨೦೦ ಕ್ಯೂಸೆಕ್ಸ್ ನೀರನ್ನು ಮಾತ್ರ ಬಿಡಲಾಗುತ್ತಿದೆ.”

-ನಟಶೇಖರ ಮೂರ್ತಿ, ಎಇಇ, ತಾರಕ ಜಲಾಶಯ

” ಕೋಟೆ ತಾಲ್ಲೂಕು ಮತ್ತು ವಯನಾಡು ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ೩೦-೪೦ ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ. ಮೂರೂ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ ಏಕಕಾಲದಲ್ಲಿ ಕಬಿನಿ ನದಿಗೆ ನೀರು ಹರಿಸಲಾಗುತ್ತಿದೆ.”

-ಗಣೇಶ್, ಎಇಇ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

41 mins ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

49 mins ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

1 hour ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

3 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

3 hours ago