Andolana originals

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ

ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ರೈತರು ಮತ್ತು ಸಾರ್ವಜನಿಕರ ೫ ಕೋಟಿ ರೂ. ಮೌಲ್ಯದ ಬೆಳೆಗಳು, ಮನೆ, ಆಸ್ತಿಪಾಸ್ತಿ ನಾಶವಾಗಿದ್ದು, ಮುಖ್ಯ ರಸ್ತೆ ಬದಿಯ ದೊಡ್ಡ ಮರಗಳು, ವಿದ್ಯುತ್ ಕಂಬಗಳು ಬಿರುಗಾಳಿಗೆ ಧರೆಗುರುಳಿವೆ.

ಬಿಸಿಲಿನ ತಾಪಮಾನದಿಂದ ಬಸವಳಿದಿದ್ದ ಸಾರ್ವಜನಿಕರಿಗೆ ಮಳೆ ಖುಷಿ ನೀಡಿತಾದರೂ ಬಿರುಗಾಳಿ ಮತ್ತು ಮಳೆಯಿಂದ ಬಾಳೆ, ಅಡಕೆ, ತೆಂಗು ಬೆಳೆಗಳು, ಮನೆಗಳ ಶೀಟುಗಳು, ಬೃಹತ್ ಮರಗಳು, ವಿದ್ಯುತ್ ಕಂಬಗಳು ನಾಶವಾಗಿದ್ದು, ರೈತರು, ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮಳೆ ಪ್ರಮಾಣಕ್ಕಿಂತ ಬಿರುಗಾಳಿ ಹೆಚ್ಚಾಗಿದ್ದರಿಂದ ತಾಲ್ಲೂಕಿನ ಹೈರಿಗೆ, ಮಟಕೆರೆ, ಚೆನ್ನೇಗೌಡನ ಹುಂಡಿ, ಹ್ಯಾಂಡ್‌ಪೋಸ್ಟ್, ಕೋಟೆ, ಎರೆಹಳ್ಳಿ, ಚೌಡಳ್ಳಿ, ಜಕ್ಕಳ್ಳಿ, ಕೊಳ್ಳೇಗೌಡನಹಳ್ಳಿ, ಶಿರಮಳ್ಳಿ, ಯಲಮತ್ತೂರು, ಅನಗಟ್ಟಿ ಗ್ರಾಮಗಳಲ್ಲಿ ೧೫೦ ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ಬಾಳೆ, ೧೫ ಎಕರೆಯಲ್ಲಿ ಬೆಳೆದಿದ್ದ ವಿವಿಧ ತರಕಾರಿಗಳು, ೫ ಎಕರೆಯಲ್ಲಿ ಬೆಳೆ ದಿದ್ದ ಅಡಕೆ, ೨೫ ತೆಂಗಿನ ಮರಗಳು, ೧೫ ಮನೆಗಳು ಐದು ಶೆಡ್‌ಗಳು, ರಸ್ತೆ ಬದಿಯಲ್ಲಿದ್ದ ೯ ದೊಡ್ಡ ಮರಗಳು, ೧೫ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನಾಶವಾಗಿವೆ.

ಬಿರುಗಾಳಿ ಮಳೆಗೆ ನಾಶವಾಗಿದ್ದರಿಂದ ರೈತ ಕುಟುಂಬದವರು ಕಂಗಾಲಾಗಿದ್ದರು. ವಾಸವಾಗಿದ್ದ ಮನೆಗಳ ಚಾವಣಿಗಳು ಗಾಳಿಗೆ ಹಾರಿ ಹೋಗಿವೆ. ಗೋಡೆ ಕುಸಿದು ಬಿದ್ದಿದೆ. ರಸ್ತೆ ಬದಿ ಇದ್ದ ಮರಗಳು ಮನೆಗಳ ಮೇಲೆ ಬಿದ್ದು ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದವರು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಿಗ್ಗೆ ಮಳೆ ಹಾನಿ ಸ್ಥಳಗಳಿಗೆ ತಹಸಿಲ್ದಾರ್ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ನೇತ್ರಾವತಿ, ಅರಣ್ಯ ಅಧಿಕಾರಿ ರವಿಕುಮಾರ್, ಸೆಸ್ಕ್ ಅಧಿಕಾರಿ ಚಂದ್ರಕುಮಾರ್, ಅರುಣ್, ಕಂದಾಯ ಅಧಿಕಾರಿ ವಿಶ್ವನಾಥ್, ಸಹನ, ಗಂಗಾಧರ್, ಪಿಡಿಒ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

” ಶುಕ್ರವಾರ ಸುರಿದ ಮಳೆ ಮತ್ತು ಗಾಳಿಗೆ ಕಸಬಾ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಪ್ರದೇಶಗಳು ಮತ್ತು ಮನೆಗಳು ಹಾನಿಯಾಗಿವೆ. ನಾನು ಅನೇಕ ಕಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗರು ಪ್ರತಿಯೊಂದು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದ್ದೇನೆ. ನಂತರ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು.”

-ಶ್ರೀನಿವಾಸ್, ತಹಸಿಲ್ದಾರ್

” ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಅಡಕೆ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಮಳೆಯಿಂದಾಗಿ ಹಾನಿಗೊಳಗಾಗಿದ್ದು, ನಾನು, ಇನ್ನಿತರ ಅಧಿಕಾರಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದ್ದೇವೆ. ನಷ್ಟದ ಬಗ್ಗೆ ವರದಿ ತಯಾರಿಸಿ ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಕಳುಹಿಸಲಾಗುವುದು.”

-ನೇತ್ರಾವತಿ, ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago