Andolana originals

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ

ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ರೈತರು ಮತ್ತು ಸಾರ್ವಜನಿಕರ ೫ ಕೋಟಿ ರೂ. ಮೌಲ್ಯದ ಬೆಳೆಗಳು, ಮನೆ, ಆಸ್ತಿಪಾಸ್ತಿ ನಾಶವಾಗಿದ್ದು, ಮುಖ್ಯ ರಸ್ತೆ ಬದಿಯ ದೊಡ್ಡ ಮರಗಳು, ವಿದ್ಯುತ್ ಕಂಬಗಳು ಬಿರುಗಾಳಿಗೆ ಧರೆಗುರುಳಿವೆ.

ಬಿಸಿಲಿನ ತಾಪಮಾನದಿಂದ ಬಸವಳಿದಿದ್ದ ಸಾರ್ವಜನಿಕರಿಗೆ ಮಳೆ ಖುಷಿ ನೀಡಿತಾದರೂ ಬಿರುಗಾಳಿ ಮತ್ತು ಮಳೆಯಿಂದ ಬಾಳೆ, ಅಡಕೆ, ತೆಂಗು ಬೆಳೆಗಳು, ಮನೆಗಳ ಶೀಟುಗಳು, ಬೃಹತ್ ಮರಗಳು, ವಿದ್ಯುತ್ ಕಂಬಗಳು ನಾಶವಾಗಿದ್ದು, ರೈತರು, ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮಳೆ ಪ್ರಮಾಣಕ್ಕಿಂತ ಬಿರುಗಾಳಿ ಹೆಚ್ಚಾಗಿದ್ದರಿಂದ ತಾಲ್ಲೂಕಿನ ಹೈರಿಗೆ, ಮಟಕೆರೆ, ಚೆನ್ನೇಗೌಡನ ಹುಂಡಿ, ಹ್ಯಾಂಡ್‌ಪೋಸ್ಟ್, ಕೋಟೆ, ಎರೆಹಳ್ಳಿ, ಚೌಡಳ್ಳಿ, ಜಕ್ಕಳ್ಳಿ, ಕೊಳ್ಳೇಗೌಡನಹಳ್ಳಿ, ಶಿರಮಳ್ಳಿ, ಯಲಮತ್ತೂರು, ಅನಗಟ್ಟಿ ಗ್ರಾಮಗಳಲ್ಲಿ ೧೫೦ ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ಬಾಳೆ, ೧೫ ಎಕರೆಯಲ್ಲಿ ಬೆಳೆದಿದ್ದ ವಿವಿಧ ತರಕಾರಿಗಳು, ೫ ಎಕರೆಯಲ್ಲಿ ಬೆಳೆ ದಿದ್ದ ಅಡಕೆ, ೨೫ ತೆಂಗಿನ ಮರಗಳು, ೧೫ ಮನೆಗಳು ಐದು ಶೆಡ್‌ಗಳು, ರಸ್ತೆ ಬದಿಯಲ್ಲಿದ್ದ ೯ ದೊಡ್ಡ ಮರಗಳು, ೧೫ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನಾಶವಾಗಿವೆ.

ಬಿರುಗಾಳಿ ಮಳೆಗೆ ನಾಶವಾಗಿದ್ದರಿಂದ ರೈತ ಕುಟುಂಬದವರು ಕಂಗಾಲಾಗಿದ್ದರು. ವಾಸವಾಗಿದ್ದ ಮನೆಗಳ ಚಾವಣಿಗಳು ಗಾಳಿಗೆ ಹಾರಿ ಹೋಗಿವೆ. ಗೋಡೆ ಕುಸಿದು ಬಿದ್ದಿದೆ. ರಸ್ತೆ ಬದಿ ಇದ್ದ ಮರಗಳು ಮನೆಗಳ ಮೇಲೆ ಬಿದ್ದು ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದವರು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಿಗ್ಗೆ ಮಳೆ ಹಾನಿ ಸ್ಥಳಗಳಿಗೆ ತಹಸಿಲ್ದಾರ್ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ನೇತ್ರಾವತಿ, ಅರಣ್ಯ ಅಧಿಕಾರಿ ರವಿಕುಮಾರ್, ಸೆಸ್ಕ್ ಅಧಿಕಾರಿ ಚಂದ್ರಕುಮಾರ್, ಅರುಣ್, ಕಂದಾಯ ಅಧಿಕಾರಿ ವಿಶ್ವನಾಥ್, ಸಹನ, ಗಂಗಾಧರ್, ಪಿಡಿಒ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

” ಶುಕ್ರವಾರ ಸುರಿದ ಮಳೆ ಮತ್ತು ಗಾಳಿಗೆ ಕಸಬಾ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಪ್ರದೇಶಗಳು ಮತ್ತು ಮನೆಗಳು ಹಾನಿಯಾಗಿವೆ. ನಾನು ಅನೇಕ ಕಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗರು ಪ್ರತಿಯೊಂದು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದ್ದೇನೆ. ನಂತರ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು.”

-ಶ್ರೀನಿವಾಸ್, ತಹಸಿಲ್ದಾರ್

” ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಅಡಕೆ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಮಳೆಯಿಂದಾಗಿ ಹಾನಿಗೊಳಗಾಗಿದ್ದು, ನಾನು, ಇನ್ನಿತರ ಅಧಿಕಾರಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದ್ದೇವೆ. ನಷ್ಟದ ಬಗ್ಗೆ ವರದಿ ತಯಾರಿಸಿ ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಕಳುಹಿಸಲಾಗುವುದು.”

-ನೇತ್ರಾವತಿ, ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

6 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

7 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

7 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

7 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

7 hours ago